AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಚ್ಚಿ ಬೀಳಿಸಿದ ನಿರ್ದೇಶಕನ ಕೊಲೆ; ಮದುವೆ ಆಗದೇ ಇರುವುದಕ್ಕೆ ಮಗನನ್ನು ಕತ್ತರಿಸಿ ಕೊಂದ ತಂದೆ

ಬಾಬಕ್ ಖೊರಮ್ದಿನ್ ಅವರ​ ಕೊಲೆಯನ್ನು ಮರ್ಯಾದಾ ಹತ್ಯೆ ಎಂದು ಪರಿಗಣಿಸಲಾಗುತ್ತಿದೆ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸುವ ಮೂಲಕ ಬಾಬಕ್​ ಜನಪ್ರಿಯರಾಗಿದ್ದರು. ಆದರೆ ಅವರ ಜೀವನ ದುರಂತ ಅಂತ್ಯ ಕಂಡಿದೆ.

ಬೆಚ್ಚಿ ಬೀಳಿಸಿದ ನಿರ್ದೇಶಕನ ಕೊಲೆ; ಮದುವೆ ಆಗದೇ ಇರುವುದಕ್ಕೆ ಮಗನನ್ನು ಕತ್ತರಿಸಿ ಕೊಂದ ತಂದೆ
ಕೊಲೆಯಾದ ನಿರ್ದೇಶಕ ಬಾಬಕ್ ಖೊರಮ್ದಿನ್
ಮದನ್​ ಕುಮಾರ್​
|

Updated on: May 21, 2021 | 9:08 AM

Share

ಹಲವು ಕಾರಣಗಳಿಗಾಗಿ ಕೊಲೆಗಳು ನಡೆಯುತ್ತವೆ. ಆದರೆ ಈ ಕೊಲೆ ನಿಜಕ್ಕೂ ವಿಚಿತ್ರ. ಮಗ ಮದುವೆ ಆಗಿಲ್ಲ ಎನ್ನುವ ಕಾರಣಕ್ಕೆ ಪೋಷಕರೇ ಸೇರಿಕೊಂಡು ಸ್ವಂತ ಮಗನನ್ನು ಹತ್ಯೆ ಮಾಡಿದ್ದಾರೆ. ಈ ಸುದ್ದಿ ಕೇಳಿ ಎಲ್ಲರೂ ಬೆಚ್ಚಿ ಬೀಳುವಂತಾಗಿದೆ. ಹೀಗೆ ಅಮಾನುಷವಾಗಿ ಕೊಲೆ ಆಗಿರುವುದು ಇರಾನಿನ ಸಿನಿಮಾ ನಿರ್ದೇಶಕ ಬಾಬಕ್​ ಖೊರಮ್ದಿನ್​. ತಾವು ಮಗನ ಕೊಲೆ ಮಾಡಿರುವುದು ನಿಜ ಎಂದು ತಂದೆ-ತಾಯಿ ಒಪ್ಪಿಕೊಂಡಿದ್ದಾರೆ. ಹತ್ಯೆ ಮಾಡಿದ ಬಳಿಕ ಶವವನ್ನು ತುಂಡುತುಂಡಾಗಿ ಕತ್ತರಿಸಿ ಕಸದ ಬುಟ್ಟಿಗೆ ಎಸೆದಿದ್ದಾರೆ!

ಇರಾನ್​ ಮೂಲದ ಬಾಬಕ್ ಖೊರಮ್ದಿನ್​ ಲಂಡನ್​ನಲ್ಲಿ ವಾಸಿಸುತ್ತಿದ್ದರು. ಟೆಹ್ರಾನ್​ ವಿಶ್ವವಿದ್ಯಾಲಯದಲ್ಲಿ ಫಿಲ್ಮ್​ ಮೇಕಿಂಗ್​ನಲ್ಲಿ ಅವರು ಸ್ನಾತಕೋತ್ತರ ಪದವಿ ಪಡೆದಿದ್ದರು. 47 ವರ್ಷವಾಗಿದ್ದರೂ ಬಾಬಕ್​ ಅವರಿಗೆ ಮದುವೆ ಆಗಿರಲಿಲ್ಲ. ಅದೇ ಅವರ ಸಾವಿಗೆ ಕಾರಣ ಆಗಿದೆ! ಮದುವೆ ವಿಚಾರದಲ್ಲಿ ಬಾಬಕ್ ಅವರು ತಂದೆ ಜೊತೆ ವಾಗ್ವಾದ ಮಾಡಿಕೊಂಡಿದ್ದರು. ಮಗನಿಗೆ ಮದುವೆ ಆಗಿಲ್ಲ ಎಂಬ ವಿಷಯದಲ್ಲಿ ಪೋಷಕರಿಗೆ ತುಂಬ ಅವಮಾನ ಆಗುತ್ತಿತ್ತು. ಅದೇ ಕಾರಣಕ್ಕೆ ಕೊಲೆ ಮಾಡುವ ಕೆಟ್ಟ ನಿರ್ಧಾರವನ್ನು ಅವರು ತೆಗೆದುಕೊಂಡರು ಎಂದು ವರದಿ ಆಗಿದೆ.

ಇಂಥ ಘೋರ ಕೃತ್ಯ ಎಸಗಿರುವ ಪೋಷಕರನ್ನು ವಶಕ್ಕೆ ಪಡೆಯಲಾಗಿದೆ. ತಂದೆ-ತಾಯಿಯೇ ಕೊಲೆ ಮಾಡಿದ್ದಾರೆ ಎಂಬುದಕ್ಕೆ ಮನೆಯಲ್ಲಿ ಸಾಕ್ಷಿಗಳು ದೊರೆತಿವೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. 2010ರಲ್ಲಿ ಬಾಬಕ್​ ಲಂಡನ್​ಗೆ ತೆರಳಿದ್ದರು. ನಂತರ ಇರಾನ್​ಗೆ ವಾಪಸ್​ ಬಂದು ಸಿನಿಮಾ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದರು. ಬಾಬಕ್​ ಕೊಲೆಯನ್ನು ಮರ್ಯಾದಾ ಹತ್ಯೆ ಎಂದು ಪರಿಗಣಿಸಲಾಗುತ್ತಿದೆ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸುವ ಮೂಲಕ ಬಾಬಕ್​ ಜನಪ್ರಿಯರಾಗಿದ್ದರು. ಆದರೆ ಅವರ ಜೀವನ ದುರಂತ ಅಂತ್ಯ ಕಂಡಿದೆ.

‘ನನ್ನ ಮಗನಿಗೆ ಮದುವೆ ಆಗಿರಲಿಲ್ಲ. ಅವನು ಒಂಟಿಯಾಗಿ ಇದ್ದ. ನಮಗೆ ಕಿರುಕುಳ ನೀಡುತ್ತಿದ್ದ. ನಮ್ಮ ಪ್ರಾಣಕ್ಕೆ ಅಪಾಯವಿತ್ತು. ನಾವು ಸುರಕ್ಷಿತವಾಗಿ ಇರಲಿಲ್ಲ. ಆತ ತನ್ನ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದ. ಅದಕ್ಕಾಗಿ ನಾನು ಮತ್ತು ನನ್ನ ಹೆಂಡತಿ ಈ ನಿರ್ಧಾರಕ್ಕೆ ಬಂದೆವು. ನಮ್ಮ ಗೌರವವನ್ನು ನಾವು ಇನ್ನಷ್ಟು ಕಳೆದುಕೊಳ್ಳಲು ಸಿದ್ಧರಿರಲಿಲ್ಲ. ಹಾಗಾಗಿ ಅವನನ್ನು ಮುಗಿಸಿದೆವು. ಇದರಲ್ಲಿ ನಮಗೆ ಯಾವುದೇ ಪಶ್ಚಾತಾಪ ಇಲ್ಲ’ ಎಂದು ಬಾಬಕ್​ ಪೋಷಕರು ಹೇಳಿದ್ದಾರೆ ಎಂಬುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ:

ಮರ್ಯಾದಾ ಹತ್ಯೆ: ಪ್ರೀತಿಸಿ ವಿವಾಹವಾಗಿದ್ದಕ್ಕೆ ಪ್ರಿಯಕರನ ಹತ್ಯೆ, ಪ್ರಿಯತಮೆ ಬಚಾವ್

ಅನ್ಯ ಜಾತಿ ಯುವಕನ ಜೊತೆ ಪ್ರೀತಿ: ಯುವತಿಯ ಮರ್ಯಾದಾ ಹತ್ಯೆ ಶಂಕೆ!

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು