AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿಮಾನ್ ಪಾತ್ರದಲ್ಲಿ ಬಾಲಿವುಡ್ ನಟನ ಬದಲು ಅಲ್ಲು ಅರ್ಜುನ್?

Allu Arjun: ‘ಪುಷ್ಪ 2’ ಸಿನಿಮಾದ ಅಭೂತಪುರ್ವ ಯಶಸ್ಸಿನ ಬಳಿಕ ಅಲ್ಲು ಅರ್ಜುನ್ ರೇಂಜ್ ಬದಲಾಗಿದೆ. ಅವರೀಗ ಸ್ಟಾರ್ ಪ್ಯಾನ್ ಇಂಡಿಯಾ ನಟ ಆಗಿದ್ದಾರೆ. ಬಾಲಿವುಡ್​ನ ಸ್ಟಾರ್ ನಟರೊಬ್ಬರು ಬಹು ನಿರೀಕ್ಷಿತ ಸೂಪರ್ ಹೀರೋ ಸಿನಿಮಾನಲ್ಲಿ ಇದೀಗ ಬಾಲಿವುಡ್ ಸ್ಟಾರ್ ಬದಲಿಗೆ ಅಲ್ಲು ಅರ್ಜುನ್​ಗೆ ಅವಕಾಶ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಶಕ್ತಿಮಾನ್ ಪಾತ್ರದಲ್ಲಿ ಬಾಲಿವುಡ್ ನಟನ ಬದಲು ಅಲ್ಲು ಅರ್ಜುನ್?
Allu Arjun
ಮಂಜುನಾಥ ಸಿ.
|

Updated on: Jun 22, 2025 | 2:29 PM

Share

ಅಲ್ಲು ಅರ್ಜುನ್ (Allu Arjun), ‘ಪುಷ್ಪ’ ಸಿನಿಮಾ ಮೂಲಕ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ‘ಪುಷ್ಪ’ ಸಿನಿಮಾ ಅಲ್ಲು ಅರ್ಜುನ್ ಅವರಿಗೆ ವಿಶ್ವದಾದ್ಯಂತ ಅಭಿಮಾನಿಗಳನ್ನು ದೊರಕಿಸಿಕೊಟ್ಟಿದೆ. ‘ಪುಷ್ಪ 2’ ಸಿನಿಮಾದ ಬಳಿಕ ಇದೀಗ ಅಲ್ಲು ಅರ್ಜುನ್, ಅಟ್ಲಿ ನಿರ್ದೇಶನದ ಹಾಲಿವುಡ್ ಮಾದರಿಯ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್​ ಅವರಿಗೆ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ನಾಯಕಿ. ಅಂದಹಾಗೆ, ‘ಪುಷ್ಪ’ ಮೊದಲ ಭಾಗದ ಬಳಿಕ ಅಲ್ಲು ಅರ್ಜುನ್​ಗೆ ಬಾಲಿವುಡ್​ನಿಂದಲೂ ಆಫರ್​ಗಳು ಬರಲು ಆರಂಭವಾಗಿತ್ತು.

ಅಲ್ಲು ಅರ್ಜುನ್, ಸಂಜಯ್ ಲೀಲಾ ಬನ್ಸಾಲಿಯವರ ಸಿನಿಮಾನಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಸಂಜಯ್ ಲೀಲಾ ಬನ್ಸಾಲಿಯ ಕಚೇರಿಯಲ್ಲಿ ಅಲ್ಲು ಅರ್ಜುನ್ ಒಂದೆರಡು ಬಾರಿ ಕಾಣಿಸಿಕೊಂಡು ಸುದ್ದಿಗೆ ಪುಷ್ಠಿ ನೀಡಿದ್ದರು. ಆದರೆ ಆ ನಂತರ ಸುದ್ದಿ ಸುಳ್ಳಾಯ್ತು. ಆದರೆ ಇದೀಗ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಬಾಲಿವುಡ್ ಸ್ಟಾರ್ ನಟರೊಬ್ಬರು ನಟಿಸಬೇಕಿದ್ದ ಸೂಪರ್ ಹೀರೋ ಸಿನಿಮಾನಲ್ಲಿ ಸ್ಟಾರ್ ನಟನ ಬದಲಿಗೆ ಅಲ್ಲು ಅರ್ಜುನ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಭಾರತದ ಬಲು ಜನಪ್ರಿಯ ಸೂಪರ್ ಹೀರೋ ‘ಶಕ್ತಿಮಾನ್’ ಸಿನಿಮಾ ಆಗುತ್ತಿರವ ಸುದ್ದಿ ಕಳೆದ ವರ್ಷದಿಂದಲೂ ಹರಿದಾಡುತ್ತಿದೆ. ನಟ ರಣ್ವೀರ್ ಸಿಂಗ್ ಶಕ್ತಿಮಾನ್ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ, ರಣ್ವೀರ್ ಸಿಂಗ್ ಬದಲಿಗೆ ಅಲ್ಲು ಅರ್ಜುನ್ ಅವರು ಶಕ್ತಿಮಾನ್ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ತುಸು ಗಟ್ಟಿಯಾಗಿಯೇ ಹರಿದಾಡುತ್ತಿದೆ. ಅಲ್ಲು ಅರ್ಜುನ್, ಶಕ್ತಿಮಾನ್ ಅವತಾರದಲ್ಲಿರುವ ಕೆಲವು ಎಐ ಜನರೇಟೆಡ್ ಪೋಸ್ಟರ್​ಗಳು ಹರಿದಾಡುತ್ತಿವೆ.

ಇದನ್ನೂ ಓದಿ:ಮಲಯಾಳಂ ಯುವ ನಿರ್ದೇಶಕನಿಗೆ ಕಾಲ್​ಶೀಟ್ ಕೊಟ್ಟ ಅಲ್ಲು ಅರ್ಜುನ್?

ಆದರೆ ಇದೀಗ ‘ಶಕ್ತಿಮಾನ್’ ಸಿನಿಮಾ ನಿರ್ದೇಶನ ಮಾಡಲಿರುವ ಮಲಯಾಳಂ ನಿರ್ದೇಶಕ ಬಾಸಿಲ್ ಜೋಸೆಫ್ ಈ ಬಗ್ಗೆ ಮಾತನಾಡಿದ್ದು, ‘ಶಕ್ತಿಮಾನ್’ ಸಿನಿಮಾಕ್ಕೆ ರಣ್ವೀರ್ ಸಿಂಗ್ ಅವರೇ ನಾಯಕನಾಗಿ ಇರಲಿದ್ದಾರೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಅಂದಹಾಗೆ ಬಾಸಿಲ್ ಜೋಸೆಫ್ ಅವರು ಇತ್ತೀಚೆಗೆ ಅಲ್ಲು ಅರ್ಜುನ್ ಅವರನ್ನು ಭೇಟಿಯಾಗಿ ಹೊಸ ಕತೆಯೊಂದನ್ನು ಹೇಳಿದ್ದರು. ಬಾಸಿಲ್ ಜೋಸೆಫ್ ಜೊತೆ ನಟಿಸಲು ಅಲ್ಲು ಅರ್ಜುನ್ ಎಸ್ ಎಂದಿದ್ದಾರೆ. ಆದರೆ ಆ ಸಿನಿಮಾ ಬಾಸಿಲ್ ಅವರ ‘ಶಕ್ತಿಮಾನ್’ ಪ್ರಾಜೆಕ್ಟ್ ಅಲ್ಲ ಎನ್ನಲಾಗುತ್ತಿದೆ.

ಅಲ್ಲು ಅರ್ಜುನ್ ಪ್ರಸ್ತುತ ಅಟ್ಲಿ ಜೊತೆಗೆ ಹಾಲಿವುಡ್ನ ‘ಗಾರ್ಡಿಯನ್ಸ್ ಆಫ್ ದಿ ಗ್ಯಾಲೆಕ್ಸಿ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಬಾಸಿಲ್ ಜೋಸೆಫ್ ಜೊತೆಗಿನ ಸಿನಿಮಾನಲ್ಲಿ ನಟಿಸಲಿದ್ದಾರೆ. ಇನ್ನು ರಣ್ವೀರ್ ಸಿಂಗ್ ಪ್ರಸ್ತುತ ‘ಡಾನ್ 3’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಫರ್ಹಾನ್ ಅಖ್ತರ್ ನಿರ್ದೇಶನ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್