AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ನಟನೊಂದಿಗೆ ‘ನಟಸಾರ್ವಭೌಮ’ ಚೆಲುವೆ ವಿವಾಹ?

Anupama Parameswaran: ಮಲಯಾಳಿ ಚೆಲುವೆ ಅನುಪಮಾ ಪರಮೇಶ್ವರನ್, ತೆಲುಗಿನ ಸ್ಟಾರ್ ನಟರೊಬ್ಬರನ್ನು ವಿವಾಹವಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ತೆಲುಗು ನಟನೊಂದಿಗೆ 'ನಟಸಾರ್ವಭೌಮ' ಚೆಲುವೆ ವಿವಾಹ?
ಅನುಪಮಾ ಪರಮೇಶ್ವರನ್
ಮಂಜುನಾಥ ಸಿ.
|

Updated on: Oct 05, 2023 | 4:06 PM

Share

ಮಲಯಾಳಂನ (Malayalam) ‘ಪ್ರೇಮಂ’ ಸಿನಿಮಾ ಮೂಲಕ ನಟನೆ ಆರಂಭಿಸಿದ ನಟಿ ಅನುಪಮಾ ಪರಮೇಶ್ವರನ್ ಈಗ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸಾಲು-ಸಾಲು ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಅನುಪಮಾ, ತೆಲುಗಿನ ಜನಪ್ರಿಯ ನಟನೊಬ್ಬನನ್ನು ವಿವಾಹವಾಗಲಿದ್ದಾರೆ ಎಂಬ ಸುದ್ದಿ ಟಾಲಿವುಡ್​ನಲ್ಲಿ ಜೋರಾಗಿ ಹರಿದಾಡುತ್ತಿದೆ. ಈ ಸುದ್ದಿಯ ಬಗ್ಗೆ ಸ್ವತಃ ಅನುಪಮಾ ಪರಮೇಶ್ವರನ್ (Anupama Parameswaran) ಸ್ಪಷ್ಟನೆ ನೀಡಿದ್ದಾರೆ.

ಅನುಪಮಾ ಪರಮೇಶ್ವರನ್ ಅವರು ತೆಲುಗಿನ ಸ್ಟಾರ್ ನಟ ರಾಮ್ ಪೋತಿನೇನಿ ಅವರನ್ನು ವಿವಾಹವಾಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡುತ್ತಿದೆ. ರಾಮ್ ಪೋತಿನೇನಿ ಹಾಗೂ ಅನುಪಮಾ ಒಟ್ಟಿಗೆ ‘ಹಲೋ ಗುರು ಪ್ರೇಮ ಕೋಸಮೆ’ ಸಿನಿಮಾದಲ್ಲಿ ನಟಿಸಿದ್ದರು. ಅದೇ ಕಾರಣಕ್ಕೆ ಈ ಇಬ್ಬರ ಹೆಸರು ಒಟ್ಟಿಗೆ ಕೇಳಿ ಬರುತ್ತಿದೆ.

ಅನುಪಮಾರ ಮದುವೆ ಸುದ್ದಿಯ ಬಗ್ಗೆ ಅನುಪಮಾರ ತಾಯಿ ಸುನಿತಾ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ಅನುಪಮಾ ಹಾಗೂ ರಾಮ್ ನಡುವೆ ಆ ರೀತಿಯ ಯಾವುದೇ ಆತ್ಮೀಯ ಸಂಬಂಧವಿಲ್ಲ, ಅನುಪಮಾ ಹಾಗೂ ರಾಮ್ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬುದು ಅಪ್ಪಟ ಸುಳ್ಳು. ಅನುಪಮಾ ಮದುವೆ ಮಾಡುವ ತಕ್ಷಣದ ಆಲೋಚನೆ ಇಲ್ಲ, ಯಾವುದೇ ಕಾರಣಕ್ಕೂ ಬೆಳೆಯುತ್ತಿರುವ ನಟಿ ಅನುಪಮಾ ಪರಮೇಶ್ವರನ್ ಕುರಿತಾಗಿ ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡಬಾರದು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಸುಂದರವಾಗಿ ಸೀರೆ ಧರಿಸಿ ಓಣಂ ಆಚರಿಸಿದ ನಟಿ ಅನುಪಮಾ ಪರಮೇಶ್ವರನ್​

ಅನುಪಮಾ ಪರಮೇಶ್ವರನ್ ಈ ಹಿಂದೆ ಕೆಲ ಸಂದರ್ಶನದಲ್ಲಿ ಮದುವೆ ಪ್ರಶ್ನೆ ಮಾಡಿದಾಗ ತಾನಿನ್ನೂ ಚಿಕ್ಕವಳು, ಇನ್ನೂ ಕೆಲವು ವರ್ಷಗಳ ಕಾಲ ನಾನು ನನ್ನ ವೃತ್ತಿಯ ಕಡೆಗೆ ಗಮನ ಹರಿಸಲಿದ್ದೇನೆ ಆ ಬಳಿಕವಷ್ಟೆ ಮದುವೆ ಬಗ್ಗೆ ಯೋಚಿಸಲಿದ್ದೇನೆ ಎಂದಿದ್ದರು. ಅದರ ನಡುವೆಯೇ ಅನುಪಮಾ ಹಾಗೂ ರಾಮ್ ಪೋತಿನೇನಿ ಕುರಿತು ಸುದ್ದಿಗಳು ಹರಿದಾಡಿದ್ದವು. ಆದರೆ ಆ ಸುದ್ದಿಗಳು ಸುಳ್ಳೆಂದು ಇದೀಗ ಖಾತ್ರಿಯಾಗಿದೆ.

ಮಲಯಾಳಿ ಚೆಲುವೆ ಅನುಪಮಾ ಪರಮೇಶ್ವರನ್ ಮಲಯಾಳಂನ ‘ಪ್ರೇಮಂ’ ಸಿನಿಮಾ ಮೂಲಕ 2015ರಲ್ಲಿ ನಟನೆಗೆ ಪದಾರ್ಪಣೆ ಮಾಡಿದರು. ಈವರೆಗೆ ಹಲವು ಮಲಯಾಳಂ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿರುವ ಅನುಪಮಾ, ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: