AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶರ್ಮಾ ಬೇಬಿ ಬಂಪ್​ ಫೋಟೋ ವೈರಲ್​; ಆದರೆ ಇದರ ಅಸಲಿಯತ್ತು ಬೇರೆ

ಈ ಫೋಟೋದಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ ಅವರು ಖುಷಿ ಖುಷಿಯಾಗಿ ಪೋಸ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಇದು ಹೊಸ ಫೋಟೋ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಈ ಫೋಟೋ ಹಿಂದಿನ ಅಸಲಿ ಕಹಾನಿ ಬೇರೆಯೇ ಇದೆ.

ಅನುಷ್ಕಾ ಶರ್ಮಾ ಬೇಬಿ ಬಂಪ್​ ಫೋಟೋ ವೈರಲ್​; ಆದರೆ ಇದರ ಅಸಲಿಯತ್ತು ಬೇರೆ
ಅನುಷ್ಕಾ ಶರ್ಮಾ, ವಿರಾಟ್​ ಕೊಯ್ಲಿ
ಮದನ್​ ಕುಮಾರ್​
|

Updated on: Dec 15, 2023 | 2:30 PM

Share

ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟರ್​ ವಿರಾಟ್​ ಕೊಹ್ಲಿ (Virat Kohli) ಅವರು ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ ಎಂದು ಕೆಲವು ದಿನಗಳಿಂದ ಸುದ್ದಿ ಕೇಳಿಬರುತ್ತಲೇ ಇದೆ. ಆದರೆ ಈ ವಿಚಾರವನ್ನು ಅನುಷ್ಕಾ  ಶರ್ಮಾ (Anushka Sharma) ಅವರಾಗಲೀ, ವಿರಾಟ್​ ಅವರಾಗಲೀ ಸ್ಪಷ್ಟಪಡಿಸಿಲ್ಲ. ಹಾಗಿದ್ದರೂ ಕೂಡ ಗಾಸಿಪ್​ ಜೋರಾಗಿದೆ. ಅದರ ಜೊತೆಗೆ ಕೆಲವು ಫೋಟೋಗಳು ಕೂಡ ವೈರಲ್​ ಆಗಿವೆ. ಸೋಶಿಯಲ್​ ಮೀಡಿಯಾದಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್​ (Baby Bump) ಫೋಟೋ ಹರಿದಾಡುತ್ತಿದೆ. ಅದನ್ನು ಕೆಲವರು ನಿಜವೆಂದು ನಂಬಿದ್ದಾರೆ.

ಅನುಷ್ಕಾ ಶರ್ಮಾ ಎರಡನೇ ಬಾರಿ ಪ್ರೆಗ್ನೆಂಟ್​ ಆಗಿದ್ದಾರೆ ಎಂಬ ಗಾಸಿಪ್​ ಹಬ್ಬಲು ಅನೇಕ ಕಾರಣಗಳು ಇವೆ. ‘ಜೀರೋ’ ಸಿನಿಮಾ ತೆರೆಕಂಡ ಬಳಿಕ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಈಗಾಗಲೇ ಒಪ್ಪಿಕೊಂಡ ‘ಚಕ್ದಾ ಎಕ್ಸ್​ಪ್ರೆಸ್​’ ಸಿನಿಮಾದ ಬಿಡುಗಡೆ ತಡವಾಗುತ್ತಿದೆ. ಎರಡನೇ ಮಗು ಪಡೆಯುವ ಉದ್ದೇಶದಿಂದಲೇ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ ಎಂಬುದು ಹಲವರ ಊಹೆ.

ಈ ಫೋಟೋದಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಖುಷಿ ಖುಷಿಯಾಗಿ ಪೋಸ್​ ನೀಡಿದ್ದಾರೆ. ಆದರೆ ಇದು ಹೊಸ ಫೋಟೋ ಅಲ್ಲ ಎಂಬುದು ಅಷ್ಟೇ ಸ್ಪಷ್ಟ. 2018ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೋ ಇದು. ಅದನ್ನೇ ಈಗ ತಿರುಚಿದ ರೀತಿಯಲ್ಲಿ ಎಡಿಟ್​ ಮಾಡಿ ಮತ್ತೊಮ್ಮೆ ವೈರಲ್​ ಮಾಡುವ ಮೂಲಕ ಗಾಸಿಪ್​ ಹಬ್ಬಿಸಲಾಗಿದೆ. ಅನೇಕರು ಅದನ್ನು ನಿಜ ಎಂದು ನಂಬಿಕೊಂಡಿದ್ದಾರೆ.

ಇದನ್ನೂ ಓದಿ: 2ನೇ ಮಗು ಆದ ಬಳಿಕ ನಟನೆಗೆ ಗುಡ್​ಬೈ ಹೇಳ್ತಾರಾ ಅನುಷ್ಕಾ ಶರ್ಮಾ? ಗುಮಾನಿಗೆ ಕಾರಣ ಆಗಿದೆ ಈ ವಿಡಿಯೋ

ಮದುವೆ ಬಳಿಕ ಕೆಲವು ನಟಿಯರು ಸಿನಿಮಾಗಳಿಂದ ದೂರ ಉಳಿದುಕೊಳ್ಳುತ್ತಾರೆ. ಮಗು ಪಡೆದ ನಂತರ ಸಿನಿಮಾ ಕೆಲಸಗಳಿಗೆ ಸಮಯ ನೀಡಲು ಕಷ್ಟವಾಗುತ್ತದೆ. ಅನುಷ್ಕಾ ಶರ್ಮಾ ಅವರು 2021ರ ಜನವರಿಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಮಗಳ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಹಾಗಾಗಿ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಅವರ ಕಡೆಯಿಂದ ಆದಷ್ಟು ಬೇಗ ಗುಡ್​ನ್ಯೂಸ್​ ಸಿಗಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ