AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anushka Shetty: ಖ್ಯಾತ ಸ್ಟಾರ್ ಜತೆ ತೆರೆಹಂಚಿಕೊಳ್ಳುವ ಮೂಲಕ ಭರ್ಜರಿ ಕಮ್​ಬ್ಯಾಕ್ ಮಾಡಲಿದ್ದಾರಾ ಅನುಷ್ಕಾ?

Chiranjeevi: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಅವರ ಕಮ್​ಬ್ಯಾಕ್ ಕುರಿತು ಸುದ್ದಿ ಹರಿದಾಡುತ್ತಿದ್ದು, ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

Anushka Shetty: ಖ್ಯಾತ ಸ್ಟಾರ್ ಜತೆ ತೆರೆಹಂಚಿಕೊಳ್ಳುವ ಮೂಲಕ ಭರ್ಜರಿ ಕಮ್​ಬ್ಯಾಕ್ ಮಾಡಲಿದ್ದಾರಾ ಅನುಷ್ಕಾ?
ಅನುಷ್ಕಾ ಶೆಟ್ಟಿ
TV9 Web
| Updated By: shivaprasad.hs|

Updated on: Jan 12, 2022 | 7:00 AM

Share

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಚಿತ್ರರಂಗದಿಂದ ತುಸು ಬ್ರೇಕ್ ತೆಗೆದುಕೊಂಡಿದ್ದಾರೆ. 2020ರಲ್ಲಿ ತೆರೆಕಂಡ ‘ನಿಶ್ಶಬ್ದಂ’ ನಂತರ ಅವರು ಯಾವ ಚಿತ್ರವನ್ನೂ ಒಪ್ಪಿಕೊಂಡಿಲ್ಲ. ಅದಕ್ಕೂ ಹಿಂದೆ ಅವರು 2018ರಲ್ಲಿ ‘ಭಾಗಮತಿ’ಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅನುಷ್ಕಾ ಮುಂದಿನ ಚಿತ್ರದ ಕುರಿತು ಸುದ್ದಿ ಹರಿದಾಡುತ್ತಿದ್ದು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಟಾಲಿವುಡ್ ಅಂಗಳದಲ್ಲಿ ಓಡಾಡುತ್ತಿರುವ ಹೊಸ ಸುದ್ದಿಯ ಪ್ರಕಾರ, ಖ್ಯಾತ ನಟರೊಬ್ಬರ ಚಿತ್ರದ ಮೂಲಕ ಅನುಷ್ಕಾ ಕಮ್​ಬ್ಯಾಕ್ ಮಾಡಲಿದ್ದಾರೆ . ಆ ನಟ ಬೇರಾರೂ ಅಲ್ಲ, ಟಾಲಿವುಡ್​ನ ಹಿರಿಯ ನಟ ಮೆಗಾಸ್ಟಾರ್​ ಚಿರಂಜೀವಿ! ಅನುಷ್ಕಾ ಹಾಗೂ ಮೆಗಾಸ್ಟಾರ್ ಮೊತ್ತಮೊದಲ ಬಾರಿಗೆ ಜತೆಯಾಗಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂಬುದು ಟಾಲಿವುಡ್​ ಅಂಗಳದ ಲೇಟೆಸ್ಟ್ ಸುದ್ದಿ!

ಈರ್ವರೂ ತಾರೆಯರಿಗೆ ದಕ್ಷಿಣ ಭಾರತದಲ್ಲಿ ದೊಡ್ಡ ಅಭಿಮಾನಿ ಬಳಗವಿದೆ. ಆದರೆ ಅಭಿಮಾನಿಗಳಿಗಿರುವ ದೊಡ್ಡ ಕೊರಗೆಂದರೆ ಅನುಷ್ಕಾ ಹಾಗೂ ಚಿರಂಜೀವಿ ಜತೆಯಾಗಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿಲ್ಲ ಎಂಬುದು. 2006ರಲ್ಲಿ ತೆರೆಕಂಡ ‘ಸ್ಟಾಲಿನ್’ ಚಿತ್ರದಲ್ಲಿ ಅನುಷ್ಕಾ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. ಹತ್ತು ವರ್ಷಗಳ ನಂತರ ಅನುಷ್ಕಾ ನಟಿಸಿದ ‘ರುದ್ರಮ್ಮದೇವಿ’ ಚಿತ್ರವನ್ನು ಚಿರಂಜೀವಿ ನಿರೂಪಿಸಿದ್ದರು. ‘ಸೈ ರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಅನುಷ್ಕಾ ರಾಣಿ ಲಕ್ಷ್ಮಿ ಬಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈರ್ವರೂ ಒಟ್ಟಾಗಿ ಪ್ರಮುಖ ಪಾತ್ರದಲ್ಲಿ ಬಣ್ಣಹಚ್ಚಿಲ್ಲ.

ಮುಂದಿನ ಚಿತ್ರದಲ್ಲಿ ಅನುಷ್ಕಾ- ಚಿರಂಜೀವಿ ಜತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದ್ದು, ಈ ಮೂಲಕ ಅಭಿಮಾನಿಗಳ ಬಹುಕಾಲದ ಬೇಡಿಕೆ ಈಡೇರುವ ನಿರೀಕ್ಷೆ ಇದೆ. ಸದ್ಯ ಚಿರಂಜೀವಿ ಕೊರಟಾಲ ಶಿವ ನಿರ್ದೇಶನದ ‘ಆಚಾರ್ಯ’ದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೇ ‘ಗಾಡ್​ಫಾದರ್’ ಹಾಗೂ ‘ಭೋಲಾ ಶಂಕರ್​’ನಲ್ಲೂ ಅವರು ಬಣ್ಣಹಚ್ಚುತ್ತಿದ್ದಾರೆ. ಈ ಚಿತ್ರಗಳ ನಂತರ ಮುಂದಿನ ಚಿತ್ರ ಸೆಟ್ಟೇರಲಿದೆ.

ಇದನ್ನೂ ಓದಿ:

Salman Khan: ಸಲ್ಮಾನ್- ಸಮಂತಾ ಜತೆಯಿರುವ ಚಿತ್ರಗಳು ವೈರಲ್; ಏನಿದು ಸಮಾಚಾರ?

Rashmika Mandanna: ‘ಈ ಲುಕ್ ಹೇಗಿದೆ?’; ಹೊಸ ಪೋಟೋಗಳನ್ನು ಹಂಚಿಕೊಂಡು ರಶ್ಮಿಕಾ ಪ್ರಶ್ನೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ