AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಕೊನೆಯ ಚಿತ್ರವು ತೆಲುಗು ಸಿನಿಮಾದ ರಿಮೇಕ್?

‘ದಳಪತಿ 69’ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ದೇಶಕ ಹೆಚ್. ವಿನೋದ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಇದನ್ನು ನಿರ್ಮಾಣ ಮಾಡುತ್ತಿದೆ ಅನ್ನೋದು ವಿಶೇಷ. ಈ ಸಿನಿಮಾದ ಕಥೆಯ ಬಗ್ಗೆ ಈಗ ವರದಿ ಒಂದು ಹರಿದಾಡಿದೆ.

ದಳಪತಿ ವಿಜಯ್ ಕೊನೆಯ ಚಿತ್ರವು ತೆಲುಗು ಸಿನಿಮಾದ ರಿಮೇಕ್?
ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 02, 2024 | 3:01 PM

Share

ತಮಿಳಿನ ಸೂಪರ್ ಸ್ಟಾರ್ ವಿಜಯ್ ಅವರು ‘GOAT’ ಸಿನಿಮಾ ಮೂಲಕ ಸಾಧಾರಣ ಗೆಲುವು ಕಂಡಿದ್ದು ಗೊತ್ತೇ ಇದೆ. ಈ ಚಿತ್ರವು ಇತ್ತೀಚೆಗೆ ಬಿಡುಗಡೆ ಕಂಡಿದೆ. ಈ ಚಿತ್ರ ಅಂದುಕೊಂಡ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ ಎಂಬ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆಯಂತೆ. ಇದಕ್ಕೂ ಮೊದಲು ರಿಲೀಸ್ ಆದ ‘ಲಿಯೋ’ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತ್ತು ಎಂದೇ ಹೇಳಬಹುದು. ಈಗ ಅವರು ‘ದಳಪತಿ 69’ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ದೇಶಕ ಹೆಚ್. ವಿನೋದ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಇದನ್ನು ನಿರ್ಮಾಣ ಮಾಡುತ್ತಿದೆ ಅನ್ನೋದು ವಿಶೇಷ. ಈ ಸಿನಿಮಾದ ಕಥೆಯ ಬಗ್ಗೆ ಈಗ ವರದಿ ಒಂದು ಹರಿದಾಡಿದೆ.

ಈ ಚಿತ್ರಕ್ಕೆ ಅನಿರುದ್ಧ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಪ್ರಕಾಶ್ ರಾಜ್ ಅವರು ಈ ಸಿನಿಮಾದ ತಂಡ ಸೇರಿಕೊಂಡಿದ್ದಾರಂತೆ. ಇನ್ನು, ಮಲಯಾಳಂನ ನಟಿ ಮಮತಾ ಬೈಜು ಅವರು ಚಿತ್ರದ ಭಾಗವಾಗಲಿದ್ದಾರಂತೆ. ಅವರು ವಿಜಯ್ ತಂಗಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ತೆಲುಗು ಚಿತ್ರದ ರಿಮೇಕ್ ಎಂದು ಹೇಳಲಾಗುತ್ತಿದೆ.

ವಿಜಯ್ ಅವರು ‘ದಳಪತಿ 69’ ರಾಜಕೀಯದಲ್ಲಿ ಬ್ಯುಸಿ ಆಗಲಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗ ಅವರು ಈಗಾಗಲೇ ಪಕ್ಷವನ್ನು ಕೂಡ ಘೋಷಣೆ ಮಾಡಿದ್ದಾರೆ ಅನ್ನೋದು ವಿಶೇಷ. ಈ ಕಾರಣದಿಂದಲೇ ಅವರ ಕೊನೆಯ ಸಿನಿಮಾ ರಾಜಕೀಯಕ್ಕೆ ಸಂಬಂಧಿಸಿದಂತೆ ಇರಲಿದೆ ಎಂದು ಹೇಳಲಾಗುತ್ತಿದೆ. ಸಿನಿಮಾದ ಟೈಟಲ್ ರಿವೀಲ್ ಆದ ಬಳಿಕ ಇನ್ನೊಂದಷ್ಟು ವಿಚಾರಗಳು ರಿವೀಲ್ ಆಗಲಿವೆ. ಇದು ಯಾವ ತೆಲುಗು ಸಿನಿಮಾದ ರಿಮೇಕ್ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗಳು ಕೂಡ ನಡೆಯುತ್ತಿವೆ.

ಇದನ್ನೂ ಓದಿ: ಹೀರೋ ಆದವರು ನೆಗೆಟಿವ್ ರೋಲ್ ಮಾಡಿ ಸಾಕಷ್ಟು ಪ್ರಭಾವ ಬೀರಿದವರು ಇವರೇ ನೋಡಿ

ವಿಜಯ್ ಅವರು ರಾಜಕೀಯಕ್ಕೆ ಸೇರಿದ್ದು ಅವರ ಅಭಿಮಾನಿಗಳಿಗೆ ಬೇಸರ ಇದೆ ಎಂದು ಹೇಳಬಹುದು. ಏಕೇಂದರೆ ಅವರು ರಾಜಕೀಯಕ್ಕೆ ಹೋದ ಬಳಿಕ ಚಿತ್ರರಂಗವನ್ನು ಸಂಪೂರ್ಣವಾಗಿ ತೊರೆಯಲಿದ್ದಾರೆ. ಈ ವಿಚಾರವನ್ನು ಅವರ ಕಡೆಯಿಂದಲೇ ಅಧಿಕೃತವಾಗಿ ಘೋಷಣೆ ಆಗಿದೆ. ‘ಗೋಟ್’ ಸಿನಿಮಾ ಥಿಯೇಟರ್ನಲ್ಲಿ ಸಾಧಾರಣ ಗಳಿಕೆ ಮಾಡಿತು. ಅಕ್ಟೋಬರ್ 3ರಂದು ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?