AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶೆಟ್ಟಿ ಸಿನಿಮಾ ಪ್ರಮೋಷನ್​ನಿಂದ ದೂರ ಇರೋಕೆ ಪ್ರಭಾಸ್ ಕಾರಣ? ಇಲ್ಲಿದೆ ನಿಜಾಂಶ

ಅನುಷ್ಕಾ ಶೆಟ್ಟಿ ಅವರು ಯಾವುದೇ ಸಿನಿಮಾ ಪ್ರಚಾರದಲ್ಲಿ ಭಾಗಿ ಆಗುವುದಿಲ್ಲ. ಇದಕ್ಕೆ ಕಾರಣವನ್ನು ಅವರು ರಿವೀಲ್ ಮಾಡಿಲ್ಲ. ಸಿನಿಮಾ ತಂಡದವರೇ ಪ್ರಮೋಷನ್​ನಲ್ಲಿ ಭಾಗಿ ಆಗಿಲ್ಲ ಎಂದರೆ ಚಿತ್ರಕ್ಕೆ ಹಿನ್ನಡೆ ಆಗುತ್ತದೆ. ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಸಿನಿಮಾಗೂ ಹಿನ್ನಡೆ ಆಗಿದೆ. ಅನುಷ್ಕಾ ಸಿನಿಮಾ ಪ್ರಚಾರಕ್ಕೆ ಏಕೆ ಬರುವುದಿಲ್ಲ ಎನ್ನುವ ಬಗ್ಗೆ ಹೊಸ ಸುದ್ದಿ ಹರಿದಾಡಿದೆ.

ಅನುಷ್ಕಾ ಶೆಟ್ಟಿ ಸಿನಿಮಾ ಪ್ರಮೋಷನ್​ನಿಂದ ದೂರ ಇರೋಕೆ ಪ್ರಭಾಸ್ ಕಾರಣ? ಇಲ್ಲಿದೆ ನಿಜಾಂಶ
ಅನುಷ್ಕಾ ಶೆಟ್ಟಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 20, 2023 | 12:18 PM

Share

ನಟಿ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ (Prabhas) ಜೋಡಿಯನ್ನು ಅನೇಕರು ಇಷ್ಟಪಟ್ಟಿದ್ದಾರೆ. ತೆರೆಮೇಲೆ ಮಿಂಚಿರುವ ಈ ಜೋಡಿ ನಿಜ ಜೀವನದಲ್ಲೂ ಒಂದಾಗಬೇಕು ಎಂಬುದು ಅನೇಕರ ಆಸೆ. ಆದರೆ, ಅದು ಸಾಧ್ಯವಾಗಿಲ್ಲ. ಇದಕ್ಕೆ ಕಾರಣ ಕೂಡ ತಿಳಿದು ಬಂದಿಲ್ಲ. ಅನುಷ್ಕಾ ಶೆಟ್ಟಿ (Anushka Shetty) ಯಾವುದೇ ಸಿನಿಮಾ ಪ್ರಚಾರಕ್ಕೆ ಕರೆದರೂ ಹೋಗುವುದಿಲ್ಲ. ಇದಕ್ಕೆ ಪ್ರಭಾಸ್ ಜೊತೆಗಿನ ಪ್ರೇಮ ಕಹಾನಿಯೇ (Anushka Shetty Love Story) ಕಾರಣ ಎನ್ನಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ನವೀನ್ ಪೊಲಿಶೆಟ್ಟಿ ಅವರು ಅನುಷ್ಕಾಗೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಬಗ್ಗೆ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. ಸಮಂತಾ ಸೇರಿ ಅನೇಕ ಸೆಲೆಬ್ರಿಟಿಗಳು ಸಿನಿಮಾಗೆ ಭೇಷ್ ಎಂದಿದ್ದಾರೆ. ಅವರು ಸಿನಿಮಾ ಪ್ರಚಾರಕ್ಕೆ ಅಷ್ಟಾಗಿ ಹೋಗಿಲ್ಲ. ಇದು ಸಿನಿಮಾಗೆ ಹಿನ್ನಡೆ ಆಗಿದೆ.

ಅನುಷ್ಕಾ ಶೆಟ್ಟಿ ಅವರು ಯಾವುದೇ ಸಿನಿಮಾ ಪ್ರಚಾರದಲ್ಲಿ ಭಾಗಿ ಆಗುವುದಿಲ್ಲ. ಇದಕ್ಕೆ ಕಾರಣವನ್ನು ಅವರು ರಿವೀಲ್ ಮಾಡಿಲ್ಲ. ಸಿನಿಮಾ ತಂಡದವರೇ ಪ್ರಮೋಷನ್​ನಲ್ಲಿ ಭಾಗಿ ಆಗಿಲ್ಲ ಎಂದರೆ ಚಿತ್ರಕ್ಕೆ ಹಿನ್ನಡೆ ಆಗುತ್ತದೆ. ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಸಿನಿಮಾಗೂ ಹಿನ್ನಡೆ ಆಗಿದೆ. ಅನುಷ್ಕಾ ಸಿನಿಮಾ ಪ್ರಚಾರಕ್ಕೆ ಏಕೆ ಬರುವುದಿಲ್ಲ ಎನ್ನುವ ಬಗ್ಗೆ ಹೊಸ ಸುದ್ದಿ ಹರಿದಾಡಿದೆ. ಅನುಷ್ಕಾ ಸಂದರ್ಶನಕ್ಕೆ ಹಾಜರಾದರೆ ಮದುವೆ ಬಗ್ಗೆ ಕೇಳಲಾಗುತ್ತದೆ. ಇದಕ್ಕೆ ಅವರು ಯಾವುದೋ ಒಂದು ಸ್ಪಷ್ಟನೆ ನೀಡಬಹುದು. ಆ ಬಳಿಕ ಸಹಜವಾಗಿಯೇ ಪ್ರಭಾಸ್ ಜೊತೆಗಿನ ಲಿಂಕಪ್ ಬಗ್ಗೆ ಕೇಳಲಾಗುತ್ತದೆ. ಈ ಕಾರಣದಿಂದಲೇ ಅವರು ಯಾವುದೇ ಸಿನಿಮಾ ಪ್ರಚಾರಕ್ಕೆ ಹೋಗಿಲ್ಲ.

ಇದನ್ನೂ ಓದಿ: ಬೆಂಗಳೂರಿನಲ್ಲಿ 3 ದಿನ ಕಂಬಳ; ಉದ್ಘಾಟನೆಗೆ ಬರಲಿದ್ದಾರೆ ಖ್ಯಾತ ನಟಿ ಅನುಷ್ಕಾ ಶೆಟ್ಟಿ

ಅನುಷ್ಕಾ ಶೆಟ್ಟಿ ಅವರ ದೇಹದ ತೂಕ ಹೆಚ್ಚಾಗಿದೆ. ಅವರು ತೂಕ ಕಡಿಮೆ ಮಾಡಿಕೊಳ್ಳಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ. ಈ ಕಾರಣದಿಂದಲೇ ಅವರು ಕೆಲವು ಸಿನಿಮಾಗಳ ಆಫರ್ ರಿಜೆಕ್ಟ್ ಮಾಡಿದ್ದಾರಂತೆ. ಅವರು ಹಲವು ರೀತಿಯ ವ್ಯಾಯಾಮ ಮಾಡುತ್ತಿದ್ದಾರೆ. ಕಠಿಣ ಡಯಟ್ ಫಾಲೋ ಮಾಡುತ್ತಿದ್ದಾರೆ. ಆ ಮೂಲಕ ತೂಕ ಇಳಿಸಿಕೊಳ್ಳುವ ಆಲೋಚನೆಯಲ್ಲಿದ್ದಾರೆ.

ಇದನ್ನೂ ಓದಿ: ಬಾಹುಬಲಿ ಸಿನಿಮಾ ಬಳಿಕ ಚಿತ್ರರಂಗದಿಂದ ದೂರಾದರೇಕೆ ಅನುಷ್ಕಾ ಶೆಟ್ಟಿ?

ಚಿರಂಜೀವಿ ಮುಂದಿನ ಸಿನಿಮಾಗೆ ಅನುಷ್ಕಾ ಶೆಟ್ಟಿ ಅವರು ನಾಯಕಿ ಎನ್ನಲಾಗಿದೆ. ಈ ಚಿತ್ರದ ಶೂಟಿಂಗ್ 2024ರಲ್ಲಿ ಆರಂಭ ಆಗಲಿದೆ ಎನ್ನಲಾಗಿದೆ. ಯುವಿ ಕ್ರಿಯೇಷನ್ಸ್ ಬಂಡವಾಳ ಹೂಡಲಿದೆ ಎನ್ನುತ್ತಿವೆ ಮೂಲಗಳು. ಈ ಸಿನಿಮಾ ಶೂಟಿಂಗ್ ಆರಂಭಕ್ಕೂ ಮೊದಲು ಅನುಷ್ಕಾ ಶೆಟ್ಟಿ ತೂಕ ಇಳಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಇಬ್ಬರೂ ಬೆಸ್ಟ್​ ಫ್ರೆಂಡ್ಸ್ ಎಂದೇ ಹೇಳಿಕೊಳ್ಳುತ್ತಾ ಬರುತ್ತಿದ್ದಾರೆ. ಆದರೆ, ಇತ್ತೀಚೆಗೆ ಇವರು ಮುಖಾಮುಖಿ ಆಗಿಲ್ಲ. ಅನುಷ್ಕಾ ಉದ್ಯಮಿಯನ್ನು ಮದುವೆ ಆಗಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ