Radhe Shyam: ಓಟಿಟಿ ರಿಲೀಸ್ ಮಾಡುವಂತೆ ‘ರಾಧೆ ಶ್ಯಾಮ್’ಗೆ ಬರೋಬ್ಬರಿ 350 ಕೋಟಿ ಆಫರ್; ಚಿತ್ರತಂಡದ ಪ್ಲಾನ್ ಏನು?

Prabhas | Pooja Hegde: ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟನೆಯ ಬಹುನಿರೀಕ್ಷಿತ ‘ರಾಧೆ ಶ್ಯಾಮ್’ ಚಿತ್ರ ಜನವರಿ 14ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಆದರೆ ಅನಿಶ್ಚಿತತೆಗಳು ಮುಂದುವರೆದಂತೆ, ಚಿತ್ರತಂಡಕ್ಕೆ ಓಟಿಟಿ ಬಿಡುಗಡೆಗೆ ದೊಡ್ಡ ಮೊತ್ತದ ಆಫರ್ ಸಿಕ್ಕಿದೆ ಎಂಬ ಸುದ್ದಿ ಕೇಳಿಬಂದಿದೆ. ಆದರೆ ಚಿತ್ರತಂಡದ ನಿಲುವೇನು?

Radhe Shyam: ಓಟಿಟಿ ರಿಲೀಸ್ ಮಾಡುವಂತೆ ‘ರಾಧೆ ಶ್ಯಾಮ್’ಗೆ ಬರೋಬ್ಬರಿ 350 ಕೋಟಿ ಆಫರ್; ಚಿತ್ರತಂಡದ ಪ್ಲಾನ್ ಏನು?
ಪ್ರಭಾಸ್​
Follow us
| Updated By: shivaprasad.hs

Updated on:Jan 04, 2022 | 8:26 AM

ಭಾರತದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ತೆರೆ ಕಾಣಲು ಸಿದ್ಧವಾಗಿದ್ದ ಬಿಗ್ ಬಜೆಟ್ ಸಿನಿಮಾಗಳು ಬಿಡುಗಡೆಯಿಂದ ಹಿಂದೆ ಸರಿದಿವೆ. ಶಾಹಿದ್ ಕಪೂರ್ ಅಭಿನಯದ ‘ಜೆರ್ಸಿ’ ಹಾಗೂ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ‘ಆರ್​​ಆರ್​​​ಆರ್​​’ ಈ ಪಟ್ಟಿಯಲ್ಲಿ ಪ್ರಮುಖವಾದವುಗಳು. ಜನವರಿ 14ರಂದು ತೆರೆಕಾಣಲು ನಿರ್ಧರಿಸಿರುವ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಅಭಿನಯದ ಮತ್ತೊಂದು ಬಹುನಿರೀಕ್ಷಿತ ಚಿತ್ರ ‘ರಾಧೆ ಶ್ಯಾಮ್’ ಇನ್ನೂ ಚಿತ್ರದ ಬಿಡುಗಡೆ ಮುಂದೂಡಿಲ್ಲ. ಪ್ಯಾನ್ ಇಂಡಿಯಾ ಚಿತ್ರವಾದ ‘ರಾಧೆ ಶ್ಯಾಮ್’ ಬಿಡುಗಡೆಯಾದರೂ ಕಲೆಕ್ಷನ್​ಗೆ ಹೊಡೆತ ಬೀಳುವುದು ಪಕ್ಕಾ ಎನ್ನುತ್ತಿದ್ದಾರೆ ಬಾಕ್ಸಾಫೀಸ್ ಪಂಡಿತರು. ದೆಹಲಿ ಸೇರಿದಂತೆ ಹಲವೆಡೆ ಚಿತ್ರಮಂದಿರಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು, ಬಹುತೇಕ ರಾಜ್ಯಗಳಲ್ಲಿ ಅರ್ಧ ಪ್ರತಿಶತ ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳು ಕಾರ್ಯನಿರ್ವಹಿಸುತ್ತಿವೆ. ಒಂದು ವೇಳೆ ಪ್ರಕರಣಗಳು ಏರಿಕೆಯಾದರೆ ಈ ನಿಯಮಗಳು ಬದಲಾಗಿ ಇತರೆಡೆಯೂ ಚಿತ್ರಮಂದಿರಗಳು ಬಂದ್ ಆಗುವ ಸಾಧ್ಯತೆ ಇಲ್ಲದಿಲ್ಲ. ಹೀಗಿರುವಾಗ ‘ರಾಧೇ ಶ್ಯಾಮ್’ ರಿಲೀಸ್ ರಿಸ್ಕ್ ತೆಗೆದುಕೊಳ್ಳುತ್ತದೆಯೇ ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆ. ಇತ್ತೀಚೆಗೆ ಬಂದಿರುವ ಮಾಹಿತಿಗಳ ಪ್ರಕಾರ ‘ರಾಧೆ ಶ್ಯಾಮ್​’ಗೆ ಬಹುದೊಡ್ಡ ಮೊತ್ತದ ಓಟಿಟಿ ಆಫರ್ ಸಿಕ್ಕಿದೆಯಂತೆ!

ಹೌದು. ಓಟಿಟಿ ದೈತ್ಯರಾದ ನೆಟ್​​ಫ್ಲಿಕ್ಸ್ ಹಾಗೂ ಅಮೆಜಾನ್ ಪ್ರೈಮ್ ವಿಡಿಯೋಗಳು ‘ರಾಧೆ ಶ್ಯಾಮ್’ ಹಕ್ಕುಗಳನ್ನು ಪಡೆಯಲು ಬಹುದೊಡ್ಡ ಮೊತ್ತವನ್ನು ಆಫರ್ ಮಾಡಿವೆ. ಚಿತ್ರದ ಬಿಡುಗಡೆ ಅನುಮಾನವಿರುವುದರಿಂದ ನೇರವಾಗಿ ಓಟಿಟಿಯಲ್ಲಿ ತೆರೆಕಾಣಿಸುವ ಒಪ್ಪಂದವನ್ನು ಅವು ಮುಂದಿಟ್ಟಿವೆ. ನೆಟ್​​​ಫ್ಲಿಕ್ಸ್ ಇದಕ್ಕಾಗಿ ಬರೋಬ್ಬರಿ ₹ 300 ಕೋಟಿ ಆಫರ್ ಮಾಡಿತ್ತಂತೆ. ಅಮೆಜಾನ್ ಪ್ರೈಮ್ ವಿಡಿಯೋ ಇದಕ್ಕೂ ಒಂದು ಹೆಜ್ಜೆ ಮುಂದೆ ಹೋಗಿ ₹ 350 ಕೋಟಿ ಆಫರ್ ನೀಡಿದೆಯಂತೆ! ಚಿತ್ರಮಂದಿರದಲ್ಲಿ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಬೇಕು ಎಂದು ಕಾದ ಅಭಿಮಾನಿಗಳಿಗೆ ಇದು ಶಾಕಿಂಗ್ ಎನ್ನಿಸಿತ್ತು. ಆದರೆ ಇದೀಗ ಅಭಿಮಾನಿಗಳಿಗೆ ಸ್ಪಷ್ಟನೆ ಸಿಕ್ಕಿದ್ದು, ಸಮಾಧಾನಪಟ್ಟುಕೊಂಡಿದ್ದಾರೆ.

ಓಟಿಟಿಯಲ್ಲಿ ಬಿಡುಗಡೆಯಾಗಲಿದೆಯಾ ರಾಧೆ ಶ್ಯಾಮ್? ಚಿತ್ರತಂಡದ ನಡೆಯೇನು? ಕಂಪನಿಗಳು ನೀಡಿದ ನೇರವಾಗಿ ಓಟಿಟಿ ಬಿಡುಗಡೆ ಆಫರ್​ಅನ್ನು ನಯವಾಗಿಯೇ ಚಿತ್ರತಂಡ ತಿರಸ್ಕರಿಸಿದೆ. ಇಂತಹ ಚಿತ್ರಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದರೇ ಚೆನ್ನ. ಆದ್ದರಿಂದ ನೇರವಾಗಿ ಓಟಿಟಿಯಲ್ಲಿ ತೆರೆಕಾಣಿಸುವ ಯಾವುದೇ ಯೋಜನೆಗಳಿಲ್ಲ ಎಂದಿದೆ ಚಿತ್ರತಂಡ. ಇದು ಪ್ರಭಾಸ್ ಅಭಿಮಾನಿಗಳೂ ಸೇರಿ ಚಿತ್ರ ಪ್ರೇಮಿಗಳಿಗೆ ಸಮಾಧಾನ ತಂದಿದೆ. ಆದರೆ ಚಿತ್ರ ಬಿಡುಗಡೆಯ ಕುರಿತು ಅನಿಶ್ಚಿತತೆ ಇದ್ದು, ದಿನಾಂಕ ಮುಂದೂಡುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ:

Puneeth Rajkumar: ದೇಶ- ಭಾಷೆ ಮೀರಿ ಜನರನ್ನು ತಲುಪುತ್ತಿದೆ ‘ರಾಜಕುಮಾರ’; ಚಿತ್ರಕ್ಕೆ ಲಭ್ಯವಾಯ್ತು ವಿಶೇಷ ಗರಿಮೆ

‘ಈಗ’ದ ತಯಾರಿಗೆ ನೊಣಗಳನ್ನು ಫ್ರಿಡ್ಜ್​ನಲ್ಲಿಟ್ಟು ಅಧ್ಯಯನ ಮಾಡಿದ್ದ ರಾಜಮೌಳಿ; ಇಲ್ಲಿವೆ ಹಲವು ಅಚ್ಚರಿಯ ವಿಚಾರಗಳು!

Published On - 8:12 am, Tue, 4 January 22

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ