AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನ್ ವೆಜ್ ತಿನ್ನಲ್ಲ ಎಂದು ಸುಳ್ಳು ಹೇಳಿದ್ರಾ ರಣಬೀರ್? ಫೋಟೋ ವೈರಲ್

ನೆಟ್​ಫ್ಲಿಕ್ಸ್ ಈಗ ‘ಡೈನಿಂಗ್ ವಿತ್ ಕಪೂರ್ಸ್’ ಎಂಬ ಶೋ ಮಾಡಿದ್ದು ಕಪೂರ್ ಕುಟುಂಬ ಹಾಜರಿ ಹಾಕಿದೆ. ರಾಜ್ ಕಪೂರ್ ಅವರ ಲೆಗಸಿಯನ್ನು ನೆನಪಿಸಿಕೊಳ್ಳುವುದು ಶೋನ ಮುಖ್ಯ ಉದ್ದೇಶ. ರಣಬೀರ್ ಅವರು ಕಪೂರ್ ಕುಟುಂಬದ ಪ್ರಮುಖ ಕುಡಿ. ಈ ಶೋನಲ್ಲಿ ಅವರು ಕೂಡ ಭಾಗವಹಿಸಿದ್ದರು. ಅವರು ಶೋನಲ್ಲಿ ನಾನ್ ವೆಜ್ ಸೇವನೆ ಮಾಡಿದರೇ ಎಂಬ ಪ್ರಶ್ನೆ ಮೂಡಿದೆ

ನಾನ್ ವೆಜ್ ತಿನ್ನಲ್ಲ ಎಂದು ಸುಳ್ಳು ಹೇಳಿದ್ರಾ ರಣಬೀರ್? ಫೋಟೋ ವೈರಲ್
ರಣಬೀರ್
ರಾಜೇಶ್ ದುಗ್ಗುಮನೆ
|

Updated on:Nov 25, 2025 | 3:04 PM

Share

ನಟ ರಣಬೀರ್ ಕಪೂರ್ ಅವರು ಹೆಣ್ಣುಮಕ್ಕಳಿಗೆ ಮೋಸ ಮಾಡುತ್ತಾರೆ ಎಂಬ ಆರೋಪ ಇದೆ. ಅವರು ಮದ್ಯ ಸೇವನೆ ಮಾಡುತ್ತಾರೆ, ನಾನ್ ವೆಜ್ ತಿನ್ನುತ್ತಾರೆ. ಅವರು ರಾಮನ ಪಾತ್ರ ಮಾಡುತ್ತಿದ್ದಾರೆ ಎಂದಾಗ ಟೀಕೆ ಎದುರಾಗಿತ್ತು. ಅವರು ಮದ್ಯ ಸೇವನೆ ಹಾಗೂ ನಾನ್ ವೆಜ್ ತ್ಯಜಿಸಿದ್ದಾರೆ ಎಂದು ತಂಡದವರು ಮಾಹಿತಿ ನೀಡಿದ್ದರು. ಈಗ ಅವರು ಹೊಸ ಶೋ ಒಂದಕ್ಕೆ ಬಂದಿದ್ದಾರೆ. ಇದರಲ್ಲಿ ಅವರು ನಾನ್ ವೆಜ್ ಸೇವನೆ ಮಾಡಿದರೇ ಎಂಬ ಪ್ರಶ್ನೆ ಮೂಡಿದೆ.

ನೆಟ್​ಫ್ಲಿಕ್ಸ್ ಈಗ ‘ಡೈನಿಂಗ್ ವಿತ್ ಕಪೂರ್ಸ್’ ಎಂಬ ಶೋ ಮಾಡಿದ್ದು ಕಪೂರ್ ಕುಟುಂಬ ಹಾಜರಿ ಹಾಕಿದೆ. ರಾಜ್ ಕಪೂರ್ ಅವರ ಲೆಗಸಿಯನ್ನು ನೆನಪಿಸಿಕೊಳ್ಳುವುದು ಶೋನ ಮುಖ್ಯ ಉದ್ದೇಶ. ರಣಬೀರ್ ಅವರು ಕಪೂರ್ ಕುಟುಂಬದ ಪ್ರಮುಖ ಕುಡಿ. ಈ ಶೋನಲ್ಲಿ ಅವರು ಕೂಡ ಭಾಗವಹಿಸಿದ್ದರು. ಅವರು ಶೋನಲ್ಲಿ ನಾನ್ ವೆಜ್ ಸೇವನೆ ಮಾಡಿದರೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಟೀಕೆ ವ್ಯಕ್ತವಾಗಿದೆ.

ಊಟ ಮಾಡುತ್ತಾ ಮಾತನಾಡುವುದು ಶೋನ ಥೀಮ್. ಈ ಶೋನ ಮೆನ್ಯುದಲ್ಲಿ ಬಹುತೇಕವು ನಾನ್ ವೆಜ್ ಊಟಗಳೇ ಇದ್ದವು. ಸಸ್ಯಾಹಾರಿ ತಿನಿಸುಗಳು ಯಾವುದೂ ಟೇಬಲ್ ಮೇಲೆ ಕಾಣಿಸಿಲ್ಲ. ರಣಬೀರ್ ಕಪೂರ್ ನಾನ್ ವೆಜ್ ತಿನ್ನೋದು ನೇರವಾಗಿ ಎಲ್ಲಿಯೂ ತೋರಿಸಿಲ್ಲ. ಆದರೆ, ಅವರು ಮಾಂಸಾಹಾರದ ಮುಂದೆ ಕುಳಿತಿರುವುದನ್ನು ಅನೇಕರು ತಪ್ಪು ಎಂದು ಕರೆದಿದ್ದಾರೆ. ಇನ್ನೂ ಕೆಲವರು, ಅವರು ನಾನ್​ವೆಜ್ ಸೇವಿಸಿರಬಹುದು ಎಂದು ಗುಮಾನಿ ಹೊರಹಾಕಿದ್ದಾರೆ.

ರಣಬೀರ್ ಕಪೂರ್ ಅವರು ರಾಮನ ಪಾತ್ರ ಮಾಡೋದು ಒಂದು ವರ್ಗದ ಜನರಿಗೆ ಇಷ್ಟ ಇಲ್ಲ. ಹೀಗಾಗಿ, ಅವರು ಸಿನಿಮಾದಲ್ಲಿ ಇರೋದನ್ನು ಕೆಲವರು ಮೊದಲಿನಿಂದಲೂ ಟೀಕೆ ಮಾಡುತ್ತಲೇ ಬರುತ್ತಿದ್ದಾರೆ. ಈಗ ಅವರೆಲ್ಲರಿಗೂ ಒಳ್ಳೆಯ ಅಸ್ತ್ರ ಸಿಕ್ಕಂತೆ ಆಗಿದೆ. ಅವರೆಲ್ಲರೂ ಈಗ ರಣಬೀರ್ ಕಪೂರ್ ಅವರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ.

ಇದನ್ನೂ ಓದಿ: ಆಲಿಯಾ-ರಣಬೀರ್ ಹೊಸ ಮನೆಯಲ್ಲಿ ಕಂಗೊಳಿಸಲಿದೆ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ಸಿನಿಮಾ ವಿಚಾರಕ್ಕೆ ಬರೋದಾದರೆ ರಣಬೀರ್ ಕಪೂರ್ ಅವರು ರಾಮಾಯಣ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಲವ್ ಆ್ಯಂಡ್ ವಾರ್’ ಸಿನಿಮಾದ ಭಾಗ ಕೂಡ ಆಗಿದ್ದಾರೆ. 2026ರ ದೀಪಾವಳಿಗೆ ‘ರಾಮಾಯಣ’ ಒಂದನೇ ಭಾಗ ಹಾಗೂ 2027ರ ದೀಪಾವಳಿಗೆ ‘ರಾಮಾಯಣ 2’ ರಿಲೀಸ್ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:03 pm, Tue, 25 November 25

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್