AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ-ವಿಜಯ್ ದೇವರಕೊಂಡ ಒಂದೇ ಮನೆಯಲ್ಲಿ ವಾಸ? ಸಾಕ್ಷಿ ಹುಡುಕಿದ ಅಭಿಮಾನಿಗಳು

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆಯೇ? ಹೌದೆನ್ನುತ್ತಿದೆ ಈ ಚಿತ್ರ. ಅಭಿಮಾನಿಗಳ ಅನುಮಾನಕ್ಕೆ ಸ್ವತಃ ರಶ್ಮಿಕಾ ಮಂದಣ್ಣ ಉತ್ತರ ನೀಡಿದ್ದಾರೆ.

ರಶ್ಮಿಕಾ-ವಿಜಯ್ ದೇವರಕೊಂಡ ಒಂದೇ ಮನೆಯಲ್ಲಿ ವಾಸ? ಸಾಕ್ಷಿ ಹುಡುಕಿದ ಅಭಿಮಾನಿಗಳು
ವಿಜಯ್-ರಶ್ಮಿಕಾ
ಮಂಜುನಾಥ ಸಿ.
|

Updated on: Apr 06, 2023 | 3:17 PM

Share

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ (Vijay Deverakonda) ಅವರುಗಳು ಪ್ರೀತಿ-ಗೆಳೆತನದ ಬಗ್ಗೆ ಆಗಾಗ್ಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಇಬ್ಬರೂ ಆಫ್​ಸ್ಕ್ರೀನ್​ನಲ್ಲಿಯೂ ಬಹಳ ಆತ್ಮೀಯರಾಗಿದ್ದಾರಾದರೂ ತಮ್ಮ ನಡುವೆ ಪ್ರೀತಿ-ಗೀತಿ-ಇತ್ಯಾದಿಗಳಿಲ್ಲವೆಂದೇ ಹೇಳಿಕೊಂಡು ಬರುತ್ತಿದ್ದಾರೆ. ಆದರೆ ಸೋಷಿಯಲ್ ಮೀಡಿಯಾ ಕುತೂಹಲಿಗಳು, ಇವರಿಬ್ಬರು ಪರಸ್ಪರ ಪ್ರೀತಿಯಲ್ಲಿರುವ ಬಗ್ಗೆ ಗುಲ್ಲು ಹಬ್ಬಿಸುತ್ತಿರುತ್ತಾರೆ ಅದಕ್ಕೆ ತಕ್ಕಂತೆ ಸಾಕ್ಷಿಗಳನ್ನು ಸಹ ನೀಡುತ್ತಿರುತ್ತಾರೆ. ಇದೀಗ ಮತ್ತೆ ಇಂಥಹುದೇ ಸುದ್ದಿ ಹೊರಗೆ ಬಂದಿದೆ, ಇದಕ್ಕೆ ಕಾರಣವಾಗಿದ್ದು ನಿನ್ನೆಯಷ್ಟೆ (ಏಪ್ರಿಲ್ 5) ನಟಿ ರಶ್ಮಿಕಾ ಹಂಚಿಕೊಂಡಿದ್ದ ವಿಡಿಯೋ.

ಏಪ್ರಿಲ್ 05 ರಂದು ನಟಿ ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ. ಹಲವು ಸೆಲೆಬ್ರಿಟಿಗಳು ರಶ್ಮಿಕಾರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದರು. ಬಳಿಕ ರಶ್ಮಿಕಾ ಸಹ, ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡು, ತಮ್ಮ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದರು. ಬಿಳಿ ಬಣ್ಣದ ಉಡುಗೆ ತೊಟ್ಟು ಬೆರಳಿಗೆ ಸುಂದರವಾದ ಉಂಗುರ ತೊಟ್ಟು ವಿಡಿಯೋದಲ್ಲಿ ನಟಿ ಕಾಣಿಸಿಕೊಂಡಿದ್ದರು. ವಿಡಿಯೋ ರೆಕಾರ್ಡ್ ಮಾಡುವಾಗ ರಶ್ಮಿಕಾ ಕೂತಿದ್ದ ಕೋಣೆಯ ತಾರಸಿ, ಹಾಗೂ ಈ ಹಿಂದೆ ವಿಜಯ್ ದೇವರಕೊಂಡ ಹಂಚಿಕೊಂಡಿದ್ದ ಫೋಟೊ ಒಂದರ ತಾರಸಿ ಥೇಟ್ ಒಂದೇ ರೀತಿ ಇದೆ. ಇದು ಅಭಿಮಾನಿಗಳಲ್ಲಿ ಅನುಮಾನ ಮೂಡಿಸಿದೆ.

ನೆಟ್ಟಿಗನೊಬ್ಬ ಈ ಸೂಕ್ಷ್ಮವನ್ನು ಗುರುತಿಸಿ ಈ ಬಗ್ಗೆ ಟ್ವೀಟ್ ಮಾಡಿದ್ದು, ವಿಜಯ್ ದೇವರಕೊಂಡರ ಚಿತ್ರ ಹಾಗೂ ರಶ್ಮಿಕಾರ ವಿಡಿಯೋ ಅನ್ನು ಒಟ್ಟಿಗೆ ಟ್ವೀಟ್ ಮಾಡಿ ಎರಡರ ತಾರಸಿಯು ಒಂದೇ, ವಿಜಯ್ ಹಾಗೂ ರಶ್ಮಿಕಾ ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂಬುದಕ್ಕೆ ಇದಕ್ಕಿಂತಲೂ ಸಾಕ್ಷಿ ಬೇಕೆ ಎಂದಿದ್ದಾನೆ. ಮಾತ್ರವಲ್ಲದೆ, ವಿಡಿಯೋದಲ್ಲಿ ರಶ್ಮಿಕಾ ಧರಿಸಿರುವ ಉಂಗುರ ವಿಜಯ್ ದೇವರಕೊಂಡ ನೀಡಿದ್ದು ಎಂದು ಸಹ ಹೇಳಿದ್ದಾನೆ. ಆ ವ್ಯಕ್ತಿಯ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ನಟಿ ರಶ್ಮಿಕಾ ಮಂದಣ್ಣ, ಈ ಬಗ್ಗೆ ಬಹಳ ಯೋಚನೆ ಮಾಡಲು ಹೋಗಬೇಡಿ ಎಂದಿದ್ದಾರೆ.

ರಶ್ಮಿಕಾ ಕೆಲವು ದಿನಗಳ ಹಿಂದೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು ಆ ವಿಡಿಯೋದಲ್ಲಿ ವಿಜಯ್ ದೇವರಕೊಂಡ ಧ್ವನಿ ಹಿನ್ನೆಲೆಯಲ್ಲಿ ಕೇಳಿ ಬಂದಿತ್ತು. ಆಗಲೂ ಸಹ ನೆಟ್ಟಿಗರು ಇವರಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದಾರೆ, ಲಿವಿನ್ ರಿಲೇಶನ್​ಷಿಪ್​ನಲ್ಲಿದ್ದಾರೆ ಎಂದಿದ್ದರು. ಅದಕ್ಕೂ ಮುನ್ನ ರಶ್ಮಿಕಾ ಮಂದಣ್ಣ ವಿದೇಶ ಪ್ರವಾಸಕ್ಕೆ ಹೋಗಿದ್ದರು. ಅಲ್ಲಿಂದ ಚಿತ್ರಗಳನ್ನು ಹಂಚಿಕೊಂಡಿದ್ದರು. ಆ ಬಳಿಕ ವಿಜಯ್ ದೇವರಕೊಂಡ ಸಹ ತಮ್ಮ ಚಿತ್ರಗಳನ್ನು ಹಂಚಿಕೊಂಡಿದ್ದರು. ಇಬ್ಬರು ಚಿತ್ರಗಳು ಒಂದೇ ಜಾಗದ್ದಾಗಿದ್ದವು. ಇದು ಸಹ ಅನುಮಾನಕ್ಕೆ ಕಾರಣವಾಯ್ತು ಆದರೆ ಚಿತ್ರಗಳ ಬಗ್ಗೆ ಕ್ಲಾರಿಟಿ ನೀಡಿದ ನಟಿ ರಶ್ಮಿಕಾ, ಪ್ರವಾಸಕ್ಕೆ ಹೋಗಿದ್ದು ನಿಜ ಆದರೆ ನಾನೂ ಹಾಗೂ ವಿಜಯ್ ಮಾತ್ರವೇ ಹೋಗಿರಲಿಲ್ಲ, ಇನ್ನೂ ಹಲವು ಗೆಳೆಯರು ನಮ್ಮೊಟ್ಟಿಗೆ ಪ್ರವಾಸಕ್ಕೆ ಬಂದಿದ್ದರು, ಎಲ್ಲ ಗೆಳೆಯರು ಸೇರಿ ಪ್ರವಾಸಕ್ಕೆ ಹೋಗಿದ್ದೆವು ಎಂದಿದ್ದರು.

ಇದನ್ನೂ ಓದಿ: ವಿಜಯ್ ದೇವರಕೊಂಡ ಅಲ್ಲ, ತೆಲುಗಿನ ಈ ನಟನ ಜೊತೆ ರಶ್ಮಿಕಾ ಮಂದಣ್ಣ ಸುತ್ತಾಟ

ರಶ್ಮಿಕಾ ಹಾಗೂ ವಿಜಯ್ ಒಟ್ಟಿಗೆ ಗೀತ ಗೋವಿಂದಂ ಸಿನಿಮಾದಲ್ಲಿ ನಟಿಸಿದ್ದರು. ಆಗಿನಿಂದಲೂ ಈ ಇಬ್ಬರ ನಡುವೆ ಏನೋ ಇದೆ ಎಂಬ ಗುಲ್ಲು ಹರಿದಾಡುತ್ತಲೇ ಇದೆ. ಈ ವರೆಗೆ ಎರಡು ಸಿನಿಮಾಗಳಲ್ಲಿ ರಶ್ಮಿಕಾ ಹಾಗೂ ವಿಜಯ್ ಒಟ್ಟಿಗೆ ನಟಿಸಿದ್ದಾರೆ. ಗೀತ ಗೋವಿಂದಂ ಹಾಗೂ ಡಿಯರ್ ಕಾಮ್ರೆಡ್, ಇದೀಗ ಗೀತ ಗೋವಿಂದಂ ಸಿನಿಮಾದ ಎರಡನೇ ಭಾಗ ನಿರ್ಮಾಣವಾಗಲಿದ್ದು, ಈ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಾರೆಯೇ ಇಲ್ಲವೆ ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!