AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ನಿಧನ ಹೊಂದಿದ್ದಕ್ಕೆ ಹೊರ ಹೋದ್ರಾ ಗೋಲ್ಡ್ ಸುರೇಶ್? ಇಲ್ಲಿದೆ ಅಸಲಿ ವಿಚಾರ

ಸುರೇಶ್ ಅವರು ಬಿಗ್ ಬಾಸ್ ಮನೆಯಲ್ಲಿ ತೊಂದರೆ ಅನುಭವಿಸಿದ್ದರು. ಅವರು ಟಾಸ್ಕ್ ಆಡುವಾಗ ಪೆಟ್ಟು ಮಾಡಿಕೊಂಡಿದ್ದರು. ಇದು ಅವರಿಗೆ ತೀವ್ರ ಹಿನ್ನಡೆ ಉಂಟು ಮಾಡಿತ್ತು. ಕೆಲ ವಾರ ಅವರಿಗೆ ಆಡಲು ತೊಂದರೆ ಆಗಿತ್ತು. ಇದೆಲ್ಲ ಅಡೆತಡೆಯನ್ನು ಮೀರಿ ಅವರು ಮುಂದೆ ಬಂದಿದ್ದರು. ಆದರೆ, ಈಗ ಅವರು ದೊಡ್ಮನೆಯಿಂದ ಹೊರ ಹೋಗುವ ಪರಿಸ್ಥಿತಿ ಬಂದಿದೆ.

ತಂದೆ ನಿಧನ ಹೊಂದಿದ್ದಕ್ಕೆ ಹೊರ ಹೋದ್ರಾ ಗೋಲ್ಡ್ ಸುರೇಶ್? ಇಲ್ಲಿದೆ ಅಸಲಿ ವಿಚಾರ
ಸುರೇಶ್
ರಾಜೇಶ್ ದುಗ್ಗುಮನೆ
|

Updated on: Dec 16, 2024 | 7:03 AM

Share

ಗೋಲ್ಡ್ ಸುರೇಶ್ ಅವರು ದೊಡ್ಮನೆಯಿಂದ ಹೊರ ಹೋಗಿದ್ದಾರೆ. ಅವರು ಈ ವಾರ ಕ್ಯಾಪ್ಟನ್ ಆದರು. ಆದರೆ, ಆ ವಾರವೇ ಅವರು ದೊಡ್ಮನೆಯಿಂದ ಹೊರ ಹೋಗಿದ್ದಾರೆ. ಮನೆಯಲ್ಲಿ ಎಮರ್ಜೆನ್ಸಿ ಪರಿಸ್ಥಿತಿ ಉಂಟಾಗಿದ್ದರಿಂದ ಅವರು ಹೊರ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಎಲ್ಲರೂ ಸುರೇಶ್ ತಂದೆ ನಿಧನ ಹೊಂದಿದ್ದಾಗಿ ವರದಿ ಮಾಡಿದ್ದರು. ಆದರೆ, ಅಸಲಿ ವಿಚಾರ ಹಾಗಿಲ್ಲ ಎನ್ನಲಾಗಿದೆ. ಈ ಬೆಳವಣಿಗೆಯನ್ನು ಇಂದಿನ (ಡಿಸೆಂಬರ್ 16) ಎಪಿಸೋಡ್​ನಲ್ಲಿ ಪ್ರಸಾರ ಮಾಡಲಿದ್ದಾರೆ.

ಸುರೇಶ್ ಅವರು ಬಿಗ್ ಬಾಸ್ ಮನೆಯಲ್ಲಿ ತೊಂದರೆ ಅನುಭವಿಸಿದ್ದರು. ಅವರು ಟಾಸ್ಕ್ ಆಡುವಾಗ ಪೆಟ್ಟು ಮಾಡಿಕೊಂಡಿದ್ದರು. ಇದು ಅವರಿಗೆ ತೀವ್ರ ಹಿನ್ನಡೆ ಉಂಟು ಮಾಡಿತ್ತು. ಕೆಲ ವಾರ ಅವರಿಗೆ ಆಡಲು ತೊಂದರೆ ಆಗಿತ್ತು. ಇದೆಲ್ಲ ಅಡೆತಡೆಯನ್ನು ಮೀರಿ ಅವರು ಮುಂದೆ ಬಂದಿದ್ದರು. ಆದರೆ, ಈಗ ಅವರು ದೊಡ್ಮನೆಯಿಂದ ಹೊರ ಹೋಗುವ ಪರಿಸ್ಥಿತಿ ಬಂದಿದೆ.

‘ಮನೆಯಲ್ಲಿ ತುರ್ತುಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಗೋಲ್ಡ್ ಸುರೇಶ್ ನೀವು ಈ ಕೂಡಲೇ ಹೊರಡಬೇಕು’ ಎಂದು ಬಿಗ್ ಬಾಸ್ ಘೋಷಣೆ ಮಾಡಿದರು. ಈ ವೇಳೆ ಗೋಲ್ಡ್ ಸುರೇಶ್ ಅವರು ಕಣ್ಣೀರು ಹಾಕಿದರು. ಏನಾಗಿರಬಹುದು ಎಂದು ಊಹಿಸಿ ಅವರಿಗೆ ಅಳು ಬಂತು. ಆ ಬಳಿಕ ಚಿನ್ನ ಹಾಕಿಕೊಂಡೇ ದೊಡ್ಮನೆಯಿಂದ ಹೊರಟರು. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿ ಹಬ್ಬಿದೆ. ಸುರೇಶ್ ತಂದೆ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ, ಅದರಲ್ಲಿ ನಿಜವಿಲ್ಲ.

ಇದನ್ನೂ ಓದಿ: ಕ್ಯಾಪ್ಟನ್ ಆದ ಗೋಲ್ಡ್ ಸುರೇಶ್; ಮೈ ತುಂಬಾ ಬಂಗಾರ ಧರಿಸಿ ಅಧಿಕಾರ ಸ್ವೀಕಾರ

ಶಿವಗೌಡ ಎಂಬುದು ಸುರೇಶ್ ತಂದೆ ಹೆಸರು. ಆದರೆ, ಅಸಲಿಗೆ ಅವರ ತಂದೆ ನಿಧನ ಹೊಂದಿಲ್ಲ. ಅವರು ಬದುಕಿಯೇ ಇದ್ದಾರೆ. ಕಾಲು ನೋವಿನ ಕಾರಣದಿಂದ ಹೊರ ಬಂದಿರಬಹುದು ಎಂದು ಅವರ ತಂದೆ ಅನುಮಾನ ಹೊರಹಾಕಿದ್ದಾರೆ. ಇಂದಿನ ಎಪಿಸೋಡ್​ನಲ್ಲಿ ಆ ಬಗ್ಗೆ ಮಾಹಿತಿ ಸಿಗೋ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್