Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ನಿಧನ ಹೊಂದಿದ್ದಕ್ಕೆ ಹೊರ ಹೋದ್ರಾ ಗೋಲ್ಡ್ ಸುರೇಶ್? ಇಲ್ಲಿದೆ ಅಸಲಿ ವಿಚಾರ

ಸುರೇಶ್ ಅವರು ಬಿಗ್ ಬಾಸ್ ಮನೆಯಲ್ಲಿ ತೊಂದರೆ ಅನುಭವಿಸಿದ್ದರು. ಅವರು ಟಾಸ್ಕ್ ಆಡುವಾಗ ಪೆಟ್ಟು ಮಾಡಿಕೊಂಡಿದ್ದರು. ಇದು ಅವರಿಗೆ ತೀವ್ರ ಹಿನ್ನಡೆ ಉಂಟು ಮಾಡಿತ್ತು. ಕೆಲ ವಾರ ಅವರಿಗೆ ಆಡಲು ತೊಂದರೆ ಆಗಿತ್ತು. ಇದೆಲ್ಲ ಅಡೆತಡೆಯನ್ನು ಮೀರಿ ಅವರು ಮುಂದೆ ಬಂದಿದ್ದರು. ಆದರೆ, ಈಗ ಅವರು ದೊಡ್ಮನೆಯಿಂದ ಹೊರ ಹೋಗುವ ಪರಿಸ್ಥಿತಿ ಬಂದಿದೆ.

ತಂದೆ ನಿಧನ ಹೊಂದಿದ್ದಕ್ಕೆ ಹೊರ ಹೋದ್ರಾ ಗೋಲ್ಡ್ ಸುರೇಶ್? ಇಲ್ಲಿದೆ ಅಸಲಿ ವಿಚಾರ
ಸುರೇಶ್
Follow us
ರಾಜೇಶ್ ದುಗ್ಗುಮನೆ
|

Updated on: Dec 16, 2024 | 7:03 AM

ಗೋಲ್ಡ್ ಸುರೇಶ್ ಅವರು ದೊಡ್ಮನೆಯಿಂದ ಹೊರ ಹೋಗಿದ್ದಾರೆ. ಅವರು ಈ ವಾರ ಕ್ಯಾಪ್ಟನ್ ಆದರು. ಆದರೆ, ಆ ವಾರವೇ ಅವರು ದೊಡ್ಮನೆಯಿಂದ ಹೊರ ಹೋಗಿದ್ದಾರೆ. ಮನೆಯಲ್ಲಿ ಎಮರ್ಜೆನ್ಸಿ ಪರಿಸ್ಥಿತಿ ಉಂಟಾಗಿದ್ದರಿಂದ ಅವರು ಹೊರ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಎಲ್ಲರೂ ಸುರೇಶ್ ತಂದೆ ನಿಧನ ಹೊಂದಿದ್ದಾಗಿ ವರದಿ ಮಾಡಿದ್ದರು. ಆದರೆ, ಅಸಲಿ ವಿಚಾರ ಹಾಗಿಲ್ಲ ಎನ್ನಲಾಗಿದೆ. ಈ ಬೆಳವಣಿಗೆಯನ್ನು ಇಂದಿನ (ಡಿಸೆಂಬರ್ 16) ಎಪಿಸೋಡ್​ನಲ್ಲಿ ಪ್ರಸಾರ ಮಾಡಲಿದ್ದಾರೆ.

ಸುರೇಶ್ ಅವರು ಬಿಗ್ ಬಾಸ್ ಮನೆಯಲ್ಲಿ ತೊಂದರೆ ಅನುಭವಿಸಿದ್ದರು. ಅವರು ಟಾಸ್ಕ್ ಆಡುವಾಗ ಪೆಟ್ಟು ಮಾಡಿಕೊಂಡಿದ್ದರು. ಇದು ಅವರಿಗೆ ತೀವ್ರ ಹಿನ್ನಡೆ ಉಂಟು ಮಾಡಿತ್ತು. ಕೆಲ ವಾರ ಅವರಿಗೆ ಆಡಲು ತೊಂದರೆ ಆಗಿತ್ತು. ಇದೆಲ್ಲ ಅಡೆತಡೆಯನ್ನು ಮೀರಿ ಅವರು ಮುಂದೆ ಬಂದಿದ್ದರು. ಆದರೆ, ಈಗ ಅವರು ದೊಡ್ಮನೆಯಿಂದ ಹೊರ ಹೋಗುವ ಪರಿಸ್ಥಿತಿ ಬಂದಿದೆ.

‘ಮನೆಯಲ್ಲಿ ತುರ್ತುಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಗೋಲ್ಡ್ ಸುರೇಶ್ ನೀವು ಈ ಕೂಡಲೇ ಹೊರಡಬೇಕು’ ಎಂದು ಬಿಗ್ ಬಾಸ್ ಘೋಷಣೆ ಮಾಡಿದರು. ಈ ವೇಳೆ ಗೋಲ್ಡ್ ಸುರೇಶ್ ಅವರು ಕಣ್ಣೀರು ಹಾಕಿದರು. ಏನಾಗಿರಬಹುದು ಎಂದು ಊಹಿಸಿ ಅವರಿಗೆ ಅಳು ಬಂತು. ಆ ಬಳಿಕ ಚಿನ್ನ ಹಾಕಿಕೊಂಡೇ ದೊಡ್ಮನೆಯಿಂದ ಹೊರಟರು. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿ ಹಬ್ಬಿದೆ. ಸುರೇಶ್ ತಂದೆ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ, ಅದರಲ್ಲಿ ನಿಜವಿಲ್ಲ.

ಇದನ್ನೂ ಓದಿ: ಕ್ಯಾಪ್ಟನ್ ಆದ ಗೋಲ್ಡ್ ಸುರೇಶ್; ಮೈ ತುಂಬಾ ಬಂಗಾರ ಧರಿಸಿ ಅಧಿಕಾರ ಸ್ವೀಕಾರ

ಶಿವಗೌಡ ಎಂಬುದು ಸುರೇಶ್ ತಂದೆ ಹೆಸರು. ಆದರೆ, ಅಸಲಿಗೆ ಅವರ ತಂದೆ ನಿಧನ ಹೊಂದಿಲ್ಲ. ಅವರು ಬದುಕಿಯೇ ಇದ್ದಾರೆ. ಕಾಲು ನೋವಿನ ಕಾರಣದಿಂದ ಹೊರ ಬಂದಿರಬಹುದು ಎಂದು ಅವರ ತಂದೆ ಅನುಮಾನ ಹೊರಹಾಕಿದ್ದಾರೆ. ಇಂದಿನ ಎಪಿಸೋಡ್​ನಲ್ಲಿ ಆ ಬಗ್ಗೆ ಮಾಹಿತಿ ಸಿಗೋ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ