AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ನಿಧನ ಹೊಂದಿದ್ದಕ್ಕೆ ಹೊರ ಹೋದ್ರಾ ಗೋಲ್ಡ್ ಸುರೇಶ್? ಇಲ್ಲಿದೆ ಅಸಲಿ ವಿಚಾರ

ಸುರೇಶ್ ಅವರು ಬಿಗ್ ಬಾಸ್ ಮನೆಯಲ್ಲಿ ತೊಂದರೆ ಅನುಭವಿಸಿದ್ದರು. ಅವರು ಟಾಸ್ಕ್ ಆಡುವಾಗ ಪೆಟ್ಟು ಮಾಡಿಕೊಂಡಿದ್ದರು. ಇದು ಅವರಿಗೆ ತೀವ್ರ ಹಿನ್ನಡೆ ಉಂಟು ಮಾಡಿತ್ತು. ಕೆಲ ವಾರ ಅವರಿಗೆ ಆಡಲು ತೊಂದರೆ ಆಗಿತ್ತು. ಇದೆಲ್ಲ ಅಡೆತಡೆಯನ್ನು ಮೀರಿ ಅವರು ಮುಂದೆ ಬಂದಿದ್ದರು. ಆದರೆ, ಈಗ ಅವರು ದೊಡ್ಮನೆಯಿಂದ ಹೊರ ಹೋಗುವ ಪರಿಸ್ಥಿತಿ ಬಂದಿದೆ.

ತಂದೆ ನಿಧನ ಹೊಂದಿದ್ದಕ್ಕೆ ಹೊರ ಹೋದ್ರಾ ಗೋಲ್ಡ್ ಸುರೇಶ್? ಇಲ್ಲಿದೆ ಅಸಲಿ ವಿಚಾರ
ಸುರೇಶ್
ರಾಜೇಶ್ ದುಗ್ಗುಮನೆ
|

Updated on: Dec 16, 2024 | 7:03 AM

Share

ಗೋಲ್ಡ್ ಸುರೇಶ್ ಅವರು ದೊಡ್ಮನೆಯಿಂದ ಹೊರ ಹೋಗಿದ್ದಾರೆ. ಅವರು ಈ ವಾರ ಕ್ಯಾಪ್ಟನ್ ಆದರು. ಆದರೆ, ಆ ವಾರವೇ ಅವರು ದೊಡ್ಮನೆಯಿಂದ ಹೊರ ಹೋಗಿದ್ದಾರೆ. ಮನೆಯಲ್ಲಿ ಎಮರ್ಜೆನ್ಸಿ ಪರಿಸ್ಥಿತಿ ಉಂಟಾಗಿದ್ದರಿಂದ ಅವರು ಹೊರ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಎಲ್ಲರೂ ಸುರೇಶ್ ತಂದೆ ನಿಧನ ಹೊಂದಿದ್ದಾಗಿ ವರದಿ ಮಾಡಿದ್ದರು. ಆದರೆ, ಅಸಲಿ ವಿಚಾರ ಹಾಗಿಲ್ಲ ಎನ್ನಲಾಗಿದೆ. ಈ ಬೆಳವಣಿಗೆಯನ್ನು ಇಂದಿನ (ಡಿಸೆಂಬರ್ 16) ಎಪಿಸೋಡ್​ನಲ್ಲಿ ಪ್ರಸಾರ ಮಾಡಲಿದ್ದಾರೆ.

ಸುರೇಶ್ ಅವರು ಬಿಗ್ ಬಾಸ್ ಮನೆಯಲ್ಲಿ ತೊಂದರೆ ಅನುಭವಿಸಿದ್ದರು. ಅವರು ಟಾಸ್ಕ್ ಆಡುವಾಗ ಪೆಟ್ಟು ಮಾಡಿಕೊಂಡಿದ್ದರು. ಇದು ಅವರಿಗೆ ತೀವ್ರ ಹಿನ್ನಡೆ ಉಂಟು ಮಾಡಿತ್ತು. ಕೆಲ ವಾರ ಅವರಿಗೆ ಆಡಲು ತೊಂದರೆ ಆಗಿತ್ತು. ಇದೆಲ್ಲ ಅಡೆತಡೆಯನ್ನು ಮೀರಿ ಅವರು ಮುಂದೆ ಬಂದಿದ್ದರು. ಆದರೆ, ಈಗ ಅವರು ದೊಡ್ಮನೆಯಿಂದ ಹೊರ ಹೋಗುವ ಪರಿಸ್ಥಿತಿ ಬಂದಿದೆ.

‘ಮನೆಯಲ್ಲಿ ತುರ್ತುಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಗೋಲ್ಡ್ ಸುರೇಶ್ ನೀವು ಈ ಕೂಡಲೇ ಹೊರಡಬೇಕು’ ಎಂದು ಬಿಗ್ ಬಾಸ್ ಘೋಷಣೆ ಮಾಡಿದರು. ಈ ವೇಳೆ ಗೋಲ್ಡ್ ಸುರೇಶ್ ಅವರು ಕಣ್ಣೀರು ಹಾಕಿದರು. ಏನಾಗಿರಬಹುದು ಎಂದು ಊಹಿಸಿ ಅವರಿಗೆ ಅಳು ಬಂತು. ಆ ಬಳಿಕ ಚಿನ್ನ ಹಾಕಿಕೊಂಡೇ ದೊಡ್ಮನೆಯಿಂದ ಹೊರಟರು. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿ ಹಬ್ಬಿದೆ. ಸುರೇಶ್ ತಂದೆ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ, ಅದರಲ್ಲಿ ನಿಜವಿಲ್ಲ.

ಇದನ್ನೂ ಓದಿ: ಕ್ಯಾಪ್ಟನ್ ಆದ ಗೋಲ್ಡ್ ಸುರೇಶ್; ಮೈ ತುಂಬಾ ಬಂಗಾರ ಧರಿಸಿ ಅಧಿಕಾರ ಸ್ವೀಕಾರ

ಶಿವಗೌಡ ಎಂಬುದು ಸುರೇಶ್ ತಂದೆ ಹೆಸರು. ಆದರೆ, ಅಸಲಿಗೆ ಅವರ ತಂದೆ ನಿಧನ ಹೊಂದಿಲ್ಲ. ಅವರು ಬದುಕಿಯೇ ಇದ್ದಾರೆ. ಕಾಲು ನೋವಿನ ಕಾರಣದಿಂದ ಹೊರ ಬಂದಿರಬಹುದು ಎಂದು ಅವರ ತಂದೆ ಅನುಮಾನ ಹೊರಹಾಕಿದ್ದಾರೆ. ಇಂದಿನ ಎಪಿಸೋಡ್​ನಲ್ಲಿ ಆ ಬಗ್ಗೆ ಮಾಹಿತಿ ಸಿಗೋ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್