AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಬಿಜೆಪಿ ಸೋಲಿಸಿದವರಿಗೆ ಸೋನು ನಿಗಮ್ ಛೀಮಾರಿ? ಅಸಲಿಯತ್ತು ಏನು?

ಸೋನು ನಿಗಮ್ ಅವರು ಅಯೋಧ್ಯೆ ಜನರಿಗೆ ಛೀಮಾರಿ ಹಾಕಿದ್ದಾರೆ ಎನ್ನಲಾಗಿತ್ತು. ಈ ವಿಚಾರದ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ನಾನು ಆ ರೀತಿ ಹೇಳಿಯೇ ಇಲ್ಲ. ಈ ಕಾರಣದಿಂದಲೇ ನಾನು ಸೋಶಿಯಲ್ ಮೀಡಿಯಾವನ್ನು ಏಳು ವರ್ಷದ ಹಿಂದೆ ತೊರೆದೆ’ ಎಂದಿದ್ದಾರೆ ಸೋನು.  

ಅಯೋಧ್ಯೆಯಲ್ಲಿ ಬಿಜೆಪಿ ಸೋಲಿಸಿದವರಿಗೆ ಸೋನು ನಿಗಮ್ ಛೀಮಾರಿ? ಅಸಲಿಯತ್ತು ಏನು?
ಸೋನು ನಿಗಮ್
ರಾಜೇಶ್ ದುಗ್ಗುಮನೆ
|

Updated on:Jun 06, 2024 | 10:55 AM

Share

ಸೋನು ನಿಗಮ್ (Sonu Nigam) ಅವರು ಸೋಶಿಯಲ್ ಮೀಡಿಯಾದಿಂದ ದೂರವೇ ಇದ್ದಾರೆ. ಅವರ ಈ ನಿರ್ಧಾರಕ್ಕೆ ಒಂದು ಕಾರಣ ಇದೆ. ಅದುವೇ ಸುಳ್ಳು ಸುದ್ದಿ. ಸೋನು ನಿಗಮ್ ಹೆಸರಲ್ಲಿ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹಬ್ಬಿಸೋ ಕೆಲಸ ಆಗುತ್ತಿದೆ. ಈಗ ಅವರು ಸೋಶಿಯಲ್ ಮೀಡಿಯಾ ಬಿಟ್ಟರೂ ಕೆಲವು ಕಿಡಿಗೇಡಿಗಳು ಸೋನು ನಿಗಮ್ ಹೆಸರನ್ನು ಕೆಡಿಸೋ ಕೆಲಸ ಮುಂದುವರಿಸಿದ್ದಾರೆ. ಉತ್ತರ ಪ್ರದೇಶದ ಮಂದಿ ಬಿಜೆಪಿಯನ್ನು ಬೆಂಬಲಿಸದ್ದಕ್ಕೆ ಸೋನು ಛೀಮಾರಿ ಹಾಕಿದ್ದಾರೆ ಎಂಬ ಪೋಸ್ಟ್ ವೈರಲ್ ಆಗಿದೆ. ಆದರೆ, ಸೋನು ಈ ರೀತಿ ಹೇಳಿಯೇ ಇಲ್ಲವಂತೆ.

ಸೋನು ನಿಗಮ್ ಸಿಂಗ್ ಹೆಸರಿನ ಟ್ವಿಟರ್ ಖಾತೆ ಮೂಲಕ ಟ್ವೀಟ್ ಮಾಡಲಾಗಿದೆ. ‘ಇಡೀ ಅಯೋಧ್ಯೆಯನ್ನು ಅದ್ಭುತವಾಗಿ ನಿರ್ಮಿಸಲಾಗಿದೆ. ಹೊಸ ವಿಮಾನ ನಿಲ್ದಾಣ, ರೈಲು ನಿಲ್ದಾಣವನ್ನು ಸರ್ಕಾರ ನೀಡಿದೆ. 500 ವರ್ಷಗಳ ನಂತರ ರಾಮ ಮಂದಿರವನ್ನು ನಿರ್ಮಿಸಿದೆ. ದೇವಾಲಯವನ್ನು ಸುಂದರವಾಗಿ ನಿರ್ಮಿಸುತ್ತಿದೆ. ಅಂಥ ಪಕ್ಷವು ಅಯೋಧ್ಯೆಯಲ್ಲಿ ಗೆಲ್ಲಲಾಗಿಲ್ಲ. ಅಯೋಧ್ಯೆಯ ಜನರು ನಾಚಿಕೆಪಡಬೇಕು’ ಎಂದು ಸೋನು ನಿಗಮ್ ಸಿಂಗ್ ಹೆಸರಿನ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ.

ಸೋನು ನಿಗಮ್ ಅವರೇ ಈ ರೀತಿ ಹೇಳಿದ್ದಾರೆ ಎಂದು ಕೆಲವರು ತಪ್ಪಾಗಿ ಭಾವಿಸಿದರು. ಈ ಬಗ್ಗೆ ವರದಿ ಕೂಡ ಮಾಡಿದರು. ಈ ವಿಚಾರದ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ನಾನು ಆ ರೀತಿ ಹೇಳಿಯೇ ಇಲ್ಲ. ಈ ಕಾರಣದಿಂದಲೇ ನಾನು ಸೋಶಿಯಲ್ ಮೀಡಿಯಾವನ್ನು ಏಳು ವರ್ಷದ ಹಿಂದೆ ತೊರೆದೆ’ ಎಂದಿದ್ದಾರೆ ಸೋನು.

‘ಜನರು ಹಾಗೂ ಸುದ್ದಿ ವಾಹಿನಿಗಳು ಈ ಬಗ್ಗೆ ಸ್ವಲ್ಪವೂ ಯೋಚಿಸದೇ ಹೇಗೆ ಸುದ್ದಿ ಮಾಡುತ್ತಾರೆ ಎಂದು ನನಗೆ ಆಶ್ಚರ್ಯ ಆಗುತ್ತದೆ. ಅವರ ಸೋಶಿಯಲ್ ಮೀಡಿಯಾ ಹ್ಯಾಂಡಲ್ ಸೋನು ನಿಗಮ್ ಸಿಂಗ್ ಎಂದು ಬರೆದಿದೆ. ಅವರ ಖಾತೆಯಲ್ಲಿ ಅವರು ಬಿಹಾರದ ಕ್ರಿಮಿನಲ್ ವಕೀಲ ಎಂದು ಸ್ಪಷ್ಟವಾಗಿ ಬರೆಯಲಾಗಿದೆ’ ಎಂದು ಸೋನು ಹೇಳಿದ್ದಾರೆ.

ಇದನ್ನೂ ಓದಿ: ಗಾಯಕ ಸೋನು ನಿಗಮ್ ತಂದೆಯ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ

‘ಈ ರೀತಿಯ ವಿಚಾರಕ್ಕೆ ನಾನು ಟ್ವಿಟರ್ ಬಿಟ್ಟೆ. ಆ ರೀತಿಯ ರಾಜಕೀಯ ಹೇಳಿಕೆ ಕೊಡುವುದರಲ್ಲಿ ಅರ್ಥವಿಲ್ಲ. ನನ್ನ ಗಮನ ಏನಿದ್ದರೂ ಕೆಲಸದ ಮೇಲೆ. ಈ ಘಟನೆ ಎಚ್ಚರಿಕೆಯ ಘಂಟೆ. ನನಗೆ ಮಾತ್ರವಲ್ಲ, ನನ್ನ ಕುಟುಂಬಕ್ಕೂ’ ಎಂದು ಸೋನು ಬೇಸರ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:54 am, Thu, 6 June 24

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ