Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್​-ರೋಜಾ ಜಟಾಪಟಿ ಮಧ್ಯೆ ಸನ್ನಿ ಲಿಯೋನ್ ಎಂಟ್ರಿ

‘ಪವನ್ ಕಲ್ಯಾಣ್ ಮೌಲ್ಯಗಳ ಬಗ್ಗೆ ಮಾತನಾಡುವುದೂ ಒಂದೇ, ಸನ್ನಿ ಲಿಯೋನ್ ನಮಗೆ ವೇದಗಳನ್ನು ಕಲಿಸುವುದೂ ಒಂದೇ’ ಎಂದು ಟೀಕೆ ಮಾಡಿದ್ದರು.

ಪವನ್ ಕಲ್ಯಾಣ್​-ರೋಜಾ ಜಟಾಪಟಿ ಮಧ್ಯೆ ಸನ್ನಿ ಲಿಯೋನ್ ಎಂಟ್ರಿ
ರೋಜಾ-ಸನ್ನಿ
Follow us
ರಾಜೇಶ್ ದುಗ್ಗುಮನೆ
|

Updated on: Jul 17, 2023 | 1:20 PM

ಜನಸೇನಾ ನಾಯಕ ಹಾಗೂ ನಟ ಪವನ್ ಕಲ್ಯಾಣ್ (Pawan Kalyan) ಅವರು ಸಿನಿಮಾ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇದ್ದಾರೆ. ಅವರು ಇತ್ತೀಚೆಗೆ ಸಿಎಂ ವೈಎಸ್​ ಜಗನ್ ಮೋಹನ್ ರೆಡ್ಡಿ ಹಾಗೂ ವೈಎಸ್​ಆರ್​ ಸರ್ಕಾರವನ್ನು ಟೀಕಿಸಿದ್ದರು. ಈ ಹೇಳಿಕೆಯನ್ನು ಸಚಿವೆ ರೋಜಾ ಖಂಡಿಸಿದ್ದಾರೆ. ಪವನ್ ಅವರನ್ನು ಸನ್ನಿ ಲಿಯೋನ್​ಗೆ ಹೋಲಿಕೆ ಮಾಡಿದ್ದಾರೆ. ಸಿನಿಮಾ ನಟಿಯಾಗಿರುವ ರೋಜಾ ಮತ್ತೋರ್ವ ನಟಿಯನ್ನು ಹೀಯಾಳಿಸುವುದು ಎಷ್ಟು ಸರಿ ಎಂಬ ಚರ್ಚೆ ನಡೆದಿದೆ.

ರೋಜಾ ಹೇಳಿಕೆ ಏನು?

ಪವನ್ ಕಲ್ಯಾಣ್ ಅವರು ಜಗನ್ ಮೇಲೆ ಮೌಕಿಕ ದಾಳಿ ಮಾಡಿದ್ದನ್ನು ರೋಜಾ ಖಂಡಿಸಿದ್ದರು. ‘ಪವನ್ ಕಲ್ಯಾಣ್ ಮೌಲ್ಯಗಳ ಬಗ್ಗೆ ಮಾತನಾಡುವುದೂ ಒಂದೇ, ಸನ್ನಿ ಲಿಯೋನ್ ನಮಗೆ ವೇದಗಳನ್ನು ಕಲಿಸುವುದೂ ಒಂದೇ’ ಎಂದು ಟೀಕೆ ಮಾಡಿದ್ದಾರೆ. ಸನ್ನಿ ಲಿಯೋನ್ ಅವರು ಈ ಮೊದಲು ಪೋರ್ನ್​ ಇಂಡಸ್ಟ್ರಿಯಲ್ಲಿ ಇದ್ದರು. ಆ ಬಳಿಕ ಅದನ್ನು ತೊರೆದರು. ಈಗ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ನೀಲಿ ಚಿತ್ರರಂಗವನ್ನು ತೊರೆದ ಬಳಿಕವೂ ಅದರ ಬಗ್ಗೆ ಮಾತನಾಡುವುದು ಏಕೆ ಎಂದು ಅನೇಕರು ರೋಜಾ ಅವರನ್ನು ಪ್ರಶ್ನೆ ಮಾಡಿದ್ದಾರೆ.

ವೈರಲ್ ಆಯ್ತು ಫೇಕ್ ಉತ್ತರ

ರೋಜಾ ಹೇಳಿಕೆಗೆ ಸನ್ನಿ ಲಿಯೋನ್ ಪ್ರತಿಕ್ರಿಯಿಸಿದ್ದಾರೆ ಎಂಬ ಪೋಸ್ಟ್ ಒಂದು ವೈರಲ್ ಆಗಿದೆ. ಆದರೆ, ಅಸಲಿಗೆ ಅಲ್ಲಿ ಆಗಿರುವುದೇ ಬೇರೆ. ಸನ್ನಿ ಲಿಯೋನ್ ಹೆಸರಿನಲ್ಲಿರುವ ನಕಲಿ ಖಾತೆ ಮೂಲಕ ಪ್ರತಿಕ್ರಿಯೆ ನೀಡಲಾಗಿದೆ.

ಫೇಕ್ ಖಾತೆ ಮೂಲಕ ಹೇಳಿದ್ದೇನು?

‘ನಾನು ಪೋರ್ನ್‌ಸ್ಟಾರ್ ಆಗಿದ್ದೆ ಮತ್ತು ಆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನಗೆ ಏನು ಮಾಡಬೇಕು ಅನಿಸಿತೋ ಅದನ್ನು ನಾನು ಓಪನ್ ಆಗಿ ಮಾಡಿದ್ದೇನೆ. ನನಗೆ ಹಾಗೂ ನಿಮಗೆ ಇರುವ ವ್ಯತ್ಯಾಸ ಏನು ಎಂದರೆ ನಾನು ಇಂಡಸ್ಟ್ರಿಯನ್ನು ಬಿಟ್ಟೆ, ಆದರೆ ನೀವು ಬಿಡಲಿಲ್ಲ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಅಶ್ಲೀಲ ಸಿನಿಮಾ ನಿರ್ಮಾಣ ಸಂಸ್ಥೆಗಳನ್ನು ‘ಧರ್ಮ ಪ್ರೊಡಕ್ಷನ್​’, ‘ಯಶ್​ ರಾಜ್​ ಫಿಲ್ಮ್ಸ್​’ಗೆ ಹೋಲಿಸಿದ ಸನ್ನಿ ಲಿಯೋನ್​

ಇದೇ ನಿಜವೆಂದು ನಂಬಿದ ಫ್ಯಾನ್ಸ್

ಸನ್ನಿ ಲಿಯೋನ್ ಫೇಕ್ ಅಕೌಂಟ್​ನಿಂದ ಮಾಡಲಾದ ಕಮೆಂಟ್​ನ ಅನೇಕರು ನಂಬಿದ್ದಾರೆ. ಇದು ನಿಜಕ್ಕೂ ಸನ್ನಿ ಲಿಯೋನ್ ಕೊಟ್ಟ ಉತ್ತರ ಎಂದು ಅನೇಕರು ಭಾವಿಸಿದ್ದಾರೆ. ಉತ್ತರ ನೀಡಿದ ಫೇಕ್​ ಅಕೌಂಟ್​ಗೆ ಯಾವುದೇ ಬ್ಲ್ಯೂಟಿಕ್ ಇಲ್ಲ. ಹೀಗಾಗಿ, ಇದು ನಕಲಿ ಖಾತೆ ಎಂದು ಹೇಳುವ ಪ್ರಯತ್ನ ಕೆಲವರಿಂದ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ