AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್ ಕಲ್ಯಾಣ್​-ರೋಜಾ ಜಟಾಪಟಿ ಮಧ್ಯೆ ಸನ್ನಿ ಲಿಯೋನ್ ಎಂಟ್ರಿ

‘ಪವನ್ ಕಲ್ಯಾಣ್ ಮೌಲ್ಯಗಳ ಬಗ್ಗೆ ಮಾತನಾಡುವುದೂ ಒಂದೇ, ಸನ್ನಿ ಲಿಯೋನ್ ನಮಗೆ ವೇದಗಳನ್ನು ಕಲಿಸುವುದೂ ಒಂದೇ’ ಎಂದು ಟೀಕೆ ಮಾಡಿದ್ದರು.

ಪವನ್ ಕಲ್ಯಾಣ್​-ರೋಜಾ ಜಟಾಪಟಿ ಮಧ್ಯೆ ಸನ್ನಿ ಲಿಯೋನ್ ಎಂಟ್ರಿ
ರೋಜಾ-ಸನ್ನಿ
ರಾಜೇಶ್ ದುಗ್ಗುಮನೆ
|

Updated on: Jul 17, 2023 | 1:20 PM

Share

ಜನಸೇನಾ ನಾಯಕ ಹಾಗೂ ನಟ ಪವನ್ ಕಲ್ಯಾಣ್ (Pawan Kalyan) ಅವರು ಸಿನಿಮಾ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇದ್ದಾರೆ. ಅವರು ಇತ್ತೀಚೆಗೆ ಸಿಎಂ ವೈಎಸ್​ ಜಗನ್ ಮೋಹನ್ ರೆಡ್ಡಿ ಹಾಗೂ ವೈಎಸ್​ಆರ್​ ಸರ್ಕಾರವನ್ನು ಟೀಕಿಸಿದ್ದರು. ಈ ಹೇಳಿಕೆಯನ್ನು ಸಚಿವೆ ರೋಜಾ ಖಂಡಿಸಿದ್ದಾರೆ. ಪವನ್ ಅವರನ್ನು ಸನ್ನಿ ಲಿಯೋನ್​ಗೆ ಹೋಲಿಕೆ ಮಾಡಿದ್ದಾರೆ. ಸಿನಿಮಾ ನಟಿಯಾಗಿರುವ ರೋಜಾ ಮತ್ತೋರ್ವ ನಟಿಯನ್ನು ಹೀಯಾಳಿಸುವುದು ಎಷ್ಟು ಸರಿ ಎಂಬ ಚರ್ಚೆ ನಡೆದಿದೆ.

ರೋಜಾ ಹೇಳಿಕೆ ಏನು?

ಪವನ್ ಕಲ್ಯಾಣ್ ಅವರು ಜಗನ್ ಮೇಲೆ ಮೌಕಿಕ ದಾಳಿ ಮಾಡಿದ್ದನ್ನು ರೋಜಾ ಖಂಡಿಸಿದ್ದರು. ‘ಪವನ್ ಕಲ್ಯಾಣ್ ಮೌಲ್ಯಗಳ ಬಗ್ಗೆ ಮಾತನಾಡುವುದೂ ಒಂದೇ, ಸನ್ನಿ ಲಿಯೋನ್ ನಮಗೆ ವೇದಗಳನ್ನು ಕಲಿಸುವುದೂ ಒಂದೇ’ ಎಂದು ಟೀಕೆ ಮಾಡಿದ್ದಾರೆ. ಸನ್ನಿ ಲಿಯೋನ್ ಅವರು ಈ ಮೊದಲು ಪೋರ್ನ್​ ಇಂಡಸ್ಟ್ರಿಯಲ್ಲಿ ಇದ್ದರು. ಆ ಬಳಿಕ ಅದನ್ನು ತೊರೆದರು. ಈಗ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ನೀಲಿ ಚಿತ್ರರಂಗವನ್ನು ತೊರೆದ ಬಳಿಕವೂ ಅದರ ಬಗ್ಗೆ ಮಾತನಾಡುವುದು ಏಕೆ ಎಂದು ಅನೇಕರು ರೋಜಾ ಅವರನ್ನು ಪ್ರಶ್ನೆ ಮಾಡಿದ್ದಾರೆ.

ವೈರಲ್ ಆಯ್ತು ಫೇಕ್ ಉತ್ತರ

ರೋಜಾ ಹೇಳಿಕೆಗೆ ಸನ್ನಿ ಲಿಯೋನ್ ಪ್ರತಿಕ್ರಿಯಿಸಿದ್ದಾರೆ ಎಂಬ ಪೋಸ್ಟ್ ಒಂದು ವೈರಲ್ ಆಗಿದೆ. ಆದರೆ, ಅಸಲಿಗೆ ಅಲ್ಲಿ ಆಗಿರುವುದೇ ಬೇರೆ. ಸನ್ನಿ ಲಿಯೋನ್ ಹೆಸರಿನಲ್ಲಿರುವ ನಕಲಿ ಖಾತೆ ಮೂಲಕ ಪ್ರತಿಕ್ರಿಯೆ ನೀಡಲಾಗಿದೆ.

ಫೇಕ್ ಖಾತೆ ಮೂಲಕ ಹೇಳಿದ್ದೇನು?

‘ನಾನು ಪೋರ್ನ್‌ಸ್ಟಾರ್ ಆಗಿದ್ದೆ ಮತ್ತು ಆ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ. ನನಗೆ ಏನು ಮಾಡಬೇಕು ಅನಿಸಿತೋ ಅದನ್ನು ನಾನು ಓಪನ್ ಆಗಿ ಮಾಡಿದ್ದೇನೆ. ನನಗೆ ಹಾಗೂ ನಿಮಗೆ ಇರುವ ವ್ಯತ್ಯಾಸ ಏನು ಎಂದರೆ ನಾನು ಇಂಡಸ್ಟ್ರಿಯನ್ನು ಬಿಟ್ಟೆ, ಆದರೆ ನೀವು ಬಿಡಲಿಲ್ಲ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಅಶ್ಲೀಲ ಸಿನಿಮಾ ನಿರ್ಮಾಣ ಸಂಸ್ಥೆಗಳನ್ನು ‘ಧರ್ಮ ಪ್ರೊಡಕ್ಷನ್​’, ‘ಯಶ್​ ರಾಜ್​ ಫಿಲ್ಮ್ಸ್​’ಗೆ ಹೋಲಿಸಿದ ಸನ್ನಿ ಲಿಯೋನ್​

ಇದೇ ನಿಜವೆಂದು ನಂಬಿದ ಫ್ಯಾನ್ಸ್

ಸನ್ನಿ ಲಿಯೋನ್ ಫೇಕ್ ಅಕೌಂಟ್​ನಿಂದ ಮಾಡಲಾದ ಕಮೆಂಟ್​ನ ಅನೇಕರು ನಂಬಿದ್ದಾರೆ. ಇದು ನಿಜಕ್ಕೂ ಸನ್ನಿ ಲಿಯೋನ್ ಕೊಟ್ಟ ಉತ್ತರ ಎಂದು ಅನೇಕರು ಭಾವಿಸಿದ್ದಾರೆ. ಉತ್ತರ ನೀಡಿದ ಫೇಕ್​ ಅಕೌಂಟ್​ಗೆ ಯಾವುದೇ ಬ್ಲ್ಯೂಟಿಕ್ ಇಲ್ಲ. ಹೀಗಾಗಿ, ಇದು ನಕಲಿ ಖಾತೆ ಎಂದು ಹೇಳುವ ಪ್ರಯತ್ನ ಕೆಲವರಿಂದ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?