Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಸಿನಿಮಾದಲ್ಲಿ ಸಾಯಿ ಪಲ್ಲವಿ? ಚಿತ್ರತಂಡ ಹೇಳಿದ್ದೇನು?

Sai Pallavi: ಜೂ ಎನ್​ಟಿಆರ್ ಅವರ ಹೊಸ ಸಿನಿಮಾನಲ್ಲಿ ಸಾಯಿ ಪಲ್ಲವಿ ಸಹ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಚಿತ್ರತಂಡ ಹೇಳಿರುವುದೇನು?

ಜೂ ಎನ್​ಟಿಆರ್ ಸಿನಿಮಾದಲ್ಲಿ ಸಾಯಿ ಪಲ್ಲವಿ? ಚಿತ್ರತಂಡ ಹೇಳಿದ್ದೇನು?
ಜೂ ಎನ್​ಟಿಆರ್-ಸಾಯಿ ಪಲ್ಲವಿ
Follow us
ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ

Updated on: Jun 28, 2023 | 8:00 AM

ಆರ್​ಆರ್​ಆರ್ (RRR) ಸಿನಿಮಾದ ಬಳಿಕ ಜೂ ಎನ್​ಟಿಆರ್ (Jr NTR) ಗ್ಲೋಬಲ್ ಸ್ಟಾರ್ ಆಗಿದ್ದಾರೆ. ಆರ್​ಆರ್​ಆರ್  ನಂತರ ಇದೀಗ ಹೊಸದೊಂದು ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸುತ್ತಿದ್ದು ಸಿನಿಮಾಕ್ಕೆ ದೇವರ ಎಂದು ಹೆಸರಿಡಲಾಗಿದೆ. ಸೈಫ್ ಅಲಿ ಖಾನ್ (Saif Ali Khan), ಜಾನ್ಹವಿ ಕಪೂರ್ ಅಂಥಹಾ ದೊಡ್ಡ ಬಾಲಿವುಡ್ ತಾರೆಯರು ಈ ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆ ನಟಿಸುತ್ತಿದ್ದಾರೆ. ಆದರೆ ಇದೇ ಸಿನಿಮಾದಲ್ಲಿ ದಕ್ಷಿಣ ಭಾರತದ ಪ್ರತಿಭಾವಂತ ನಟಿ ಸಾಯಿ ಪಲ್ಲವಿ (Sai Pallavi) ಸಹ ಇರಲಿದ್ದಾರೆ ಎನ್ನಲಾಗುತ್ತಿದೆ.

ದೇವರ ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆಗೆ ಎರಡನೇ ನಾಯಕಿಯಾಗಿ ಸಾಯಿ ಪಲ್ಲವಿ ಸಹ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿನಿಮಾದ ಫ್ಲಾಷ್​ಬ್ಯಾಕ್​ ಕತೆಗೆ ಸಾಯಿ ಪಲ್ಲವಿ ಜೂ ಎನ್​ಟಿಆರ್​ಗೆ ನಾಯಕಿ ಆಗಿರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಸುದ್ದಿಗಳು, ಫೋಟೊಗಳು ವೈರಲ್ ಆಗುತ್ತಿವೆ.

ಆದರೆ ಈ ಬಗ್ಗೆ ದೇವರ ಸಿನಿಮಾದ ತಂಡ ಅಧಿಕೃತವಾಗಿ ಹೇಳಿಕೆ ನೀಡಿದೆ. ಸಿನಿಮಾದ ಅಧಿಕೃತ ಟ್ವಿಟ್ಟರ್ ಹ್ಯಾಂಡ್​ನಿಂದ ಈ ಬಗ್ಗೆ ಟ್ವೀಟ್ ಒಂದನ್ನು ಮಾಡಲಾಗಿದ್ದು, ದೇವರ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎಂಬ ಸುದ್ದಿ ಸುಳ್ಳು ಎಂದಿದೆ. ಆ ಮೂಲಕ ಹಲವು ಸಾಯಿ ಪಲ್ಲವಿ ಹಾಗೂ ಜೂ ಎನ್​ಟಿಆರ್ ಅಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ. ಸಾಯಿ ಪಲ್ಲವಿ ಸ್ವತಃ ಅದ್ಭುತ ನಟಿ ಹಾಗೂ ನೃತ್ಯಗಾರ್ತಿ. ಜೂ ಎನ್​ಟಿಆರ್ ಸಹ ಅದ್ಭುತವಾದ ಡ್ಯಾನ್ಸರ್. ಇಬ್ಬರೂ ಒಟ್ಟಿಗೆ ಡ್ಯಾನ್ಸ್ ಮಾಡುವುದನ್ನು ನೋಡುವ ಆಸೆಯಲ್ಲಿ ಇಬ್ಬರು ನಟರ ಅಭಿಮಾನಿಗಳಿದ್ದರು ಆದರೆ ಅದು ಸುಳ್ಳಾಗಿದೆ.

ಇದನ್ನೂ ಓದಿ:Sai Pallavi: ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿ ಆದ ಸಾಯಿ ಪಲ್ಲವಿ; ಎಷ್ಟಿದೆ ನಟಿಯ ಆಸ್ತಿ?

ಸಾಯಿ ಪಲ್ಲವಿಗೆ ಹಲವು ಅವಕಾಶಗಳಿದ್ದರೂ ಸಹ ಉದ್ದೇಶಪೂರ್ವಕವಾಗಿ ಔಟ್ ಆಂಡ್ ಔಟ್ ಕಮರ್ಶಿಯಲ್ ಮಸಾಲಾ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ತೆಲುಗಿನ ನಟ ಚಿರಂಜೀವಿ ಅವರ ಭೋಲಾ ಶಂಕರ್ ಸಿನಿಮಾದಲ್ಲಿ ನಟಿಸುವ ಅವಕಾಶವನ್ನು ಸಾಯಿ ಪಲ್ಲವಿ ನಿರಾಕರಿಸಿದ್ದಾರೆ. ಮಾತ್ರವಲ್ಲದೆ ಅಜಿತ್ ಹಾಗೂ ವಿಜಯ್​ರ ಸಿನಿಮಾಗಳ ಅವಕಾಶವನ್ನೂ ಸಹ ಸಾಯಿ ಪಲ್ಲವಿ ನಿರಾಕರಿಸಿದ್ದಾರೆ. ಸಾಯಿ ಪಲ್ಲವಿ ಕೇವಲ ಮಹಿಳಾ ಪ್ರಧಾನ ಹಾಗೂ ನಾಯಕಿ ಪಾತ್ರಕ್ಕೆ ಹೆಚ್ಚಿನ ಸ್ಕೋಪ್ ಇರುವ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಹಾಗಾಗಿ ಅವರು ದೊಡ್ಡ ಸ್ಟಾರ್ ನಟರ ಸಿನಿಮಾಗಳನ್ನು ನಿರಾಕರಿಸುತ್ತಿದ್ದಾರೆ.

ಇನ್ನು ಜೂ ಎನ್​ಟಿಆರ್ ಅವರ ದೇವರ ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದು, ಆರ್​ಆರ್​ಆರ್ ಮಾದರಿಯಲ್ಲಿಯೇ ಈ ಸಿನಿಮಾವನ್ನು ಸಹ ದೊಡ್ಡ ಸ್ಕೇಲ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾಕ್ಕೆ ನಾಯಕಿಯಾಗಿ ಬಾಲಿವುಡ್ ಯುವನಟಿ ಜಾನ್ಹವಿ ಕಪೂರ್ ಅನ್ನು ಕರೆತರಲಾಗಿದೆ. ಸಿನಿಮಾದ ವಿಲನ್ ಪಾತ್ರಕ್ಕೆ ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅನ್ನು ಕರೆತರಲಾಗಿದೆ. ಇನ್ನು ಸಿನಿಮಾದ ಕೆಲವು ಆಕ್ಷನ್ ದೃಶ್ಯಗಳಿಗಾಗಿ ಹಾಲಿವುಡ್​ನ ಪ್ರಖ್ಯಾತ ಆಕ್ಷನ್ ನಿರ್ದೇಶಕರನ್ನು ಕರೆತರಲಾಗಿದೆ. ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು ಮುಂದಿನ ಸಂಕ್ರಾಂತಿಗೆ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ದೇವರ ಸಿನಿಮಾದ ಬಳಿಕ ಜೂ ಎನ್​ಟಿಆರ್, ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲವಾದರೂ ಒಂದು ಪೋಸ್ಟರ್ ಅನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಬಳಿಕ ಮತ್ತೊಮ್ಮೆ ರಾಜಮೌಳಿಯ ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ