AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಸಿನಿಮಾದಲ್ಲಿ ಸಾಯಿ ಪಲ್ಲವಿ? ಚಿತ್ರತಂಡ ಹೇಳಿದ್ದೇನು?

Sai Pallavi: ಜೂ ಎನ್​ಟಿಆರ್ ಅವರ ಹೊಸ ಸಿನಿಮಾನಲ್ಲಿ ಸಾಯಿ ಪಲ್ಲವಿ ಸಹ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಚಿತ್ರತಂಡ ಹೇಳಿರುವುದೇನು?

ಜೂ ಎನ್​ಟಿಆರ್ ಸಿನಿಮಾದಲ್ಲಿ ಸಾಯಿ ಪಲ್ಲವಿ? ಚಿತ್ರತಂಡ ಹೇಳಿದ್ದೇನು?
ಜೂ ಎನ್​ಟಿಆರ್-ಸಾಯಿ ಪಲ್ಲವಿ
ಮಂಜುನಾಥ ಸಿ.
| Edited By: |

Updated on: Jun 28, 2023 | 8:00 AM

Share

ಆರ್​ಆರ್​ಆರ್ (RRR) ಸಿನಿಮಾದ ಬಳಿಕ ಜೂ ಎನ್​ಟಿಆರ್ (Jr NTR) ಗ್ಲೋಬಲ್ ಸ್ಟಾರ್ ಆಗಿದ್ದಾರೆ. ಆರ್​ಆರ್​ಆರ್  ನಂತರ ಇದೀಗ ಹೊಸದೊಂದು ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸುತ್ತಿದ್ದು ಸಿನಿಮಾಕ್ಕೆ ದೇವರ ಎಂದು ಹೆಸರಿಡಲಾಗಿದೆ. ಸೈಫ್ ಅಲಿ ಖಾನ್ (Saif Ali Khan), ಜಾನ್ಹವಿ ಕಪೂರ್ ಅಂಥಹಾ ದೊಡ್ಡ ಬಾಲಿವುಡ್ ತಾರೆಯರು ಈ ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆ ನಟಿಸುತ್ತಿದ್ದಾರೆ. ಆದರೆ ಇದೇ ಸಿನಿಮಾದಲ್ಲಿ ದಕ್ಷಿಣ ಭಾರತದ ಪ್ರತಿಭಾವಂತ ನಟಿ ಸಾಯಿ ಪಲ್ಲವಿ (Sai Pallavi) ಸಹ ಇರಲಿದ್ದಾರೆ ಎನ್ನಲಾಗುತ್ತಿದೆ.

ದೇವರ ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆಗೆ ಎರಡನೇ ನಾಯಕಿಯಾಗಿ ಸಾಯಿ ಪಲ್ಲವಿ ಸಹ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿನಿಮಾದ ಫ್ಲಾಷ್​ಬ್ಯಾಕ್​ ಕತೆಗೆ ಸಾಯಿ ಪಲ್ಲವಿ ಜೂ ಎನ್​ಟಿಆರ್​ಗೆ ನಾಯಕಿ ಆಗಿರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಸುದ್ದಿಗಳು, ಫೋಟೊಗಳು ವೈರಲ್ ಆಗುತ್ತಿವೆ.

ಆದರೆ ಈ ಬಗ್ಗೆ ದೇವರ ಸಿನಿಮಾದ ತಂಡ ಅಧಿಕೃತವಾಗಿ ಹೇಳಿಕೆ ನೀಡಿದೆ. ಸಿನಿಮಾದ ಅಧಿಕೃತ ಟ್ವಿಟ್ಟರ್ ಹ್ಯಾಂಡ್​ನಿಂದ ಈ ಬಗ್ಗೆ ಟ್ವೀಟ್ ಒಂದನ್ನು ಮಾಡಲಾಗಿದ್ದು, ದೇವರ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎಂಬ ಸುದ್ದಿ ಸುಳ್ಳು ಎಂದಿದೆ. ಆ ಮೂಲಕ ಹಲವು ಸಾಯಿ ಪಲ್ಲವಿ ಹಾಗೂ ಜೂ ಎನ್​ಟಿಆರ್ ಅಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ. ಸಾಯಿ ಪಲ್ಲವಿ ಸ್ವತಃ ಅದ್ಭುತ ನಟಿ ಹಾಗೂ ನೃತ್ಯಗಾರ್ತಿ. ಜೂ ಎನ್​ಟಿಆರ್ ಸಹ ಅದ್ಭುತವಾದ ಡ್ಯಾನ್ಸರ್. ಇಬ್ಬರೂ ಒಟ್ಟಿಗೆ ಡ್ಯಾನ್ಸ್ ಮಾಡುವುದನ್ನು ನೋಡುವ ಆಸೆಯಲ್ಲಿ ಇಬ್ಬರು ನಟರ ಅಭಿಮಾನಿಗಳಿದ್ದರು ಆದರೆ ಅದು ಸುಳ್ಳಾಗಿದೆ.

ಇದನ್ನೂ ಓದಿ:Sai Pallavi: ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿ ಆದ ಸಾಯಿ ಪಲ್ಲವಿ; ಎಷ್ಟಿದೆ ನಟಿಯ ಆಸ್ತಿ?

ಸಾಯಿ ಪಲ್ಲವಿಗೆ ಹಲವು ಅವಕಾಶಗಳಿದ್ದರೂ ಸಹ ಉದ್ದೇಶಪೂರ್ವಕವಾಗಿ ಔಟ್ ಆಂಡ್ ಔಟ್ ಕಮರ್ಶಿಯಲ್ ಮಸಾಲಾ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ತೆಲುಗಿನ ನಟ ಚಿರಂಜೀವಿ ಅವರ ಭೋಲಾ ಶಂಕರ್ ಸಿನಿಮಾದಲ್ಲಿ ನಟಿಸುವ ಅವಕಾಶವನ್ನು ಸಾಯಿ ಪಲ್ಲವಿ ನಿರಾಕರಿಸಿದ್ದಾರೆ. ಮಾತ್ರವಲ್ಲದೆ ಅಜಿತ್ ಹಾಗೂ ವಿಜಯ್​ರ ಸಿನಿಮಾಗಳ ಅವಕಾಶವನ್ನೂ ಸಹ ಸಾಯಿ ಪಲ್ಲವಿ ನಿರಾಕರಿಸಿದ್ದಾರೆ. ಸಾಯಿ ಪಲ್ಲವಿ ಕೇವಲ ಮಹಿಳಾ ಪ್ರಧಾನ ಹಾಗೂ ನಾಯಕಿ ಪಾತ್ರಕ್ಕೆ ಹೆಚ್ಚಿನ ಸ್ಕೋಪ್ ಇರುವ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಹಾಗಾಗಿ ಅವರು ದೊಡ್ಡ ಸ್ಟಾರ್ ನಟರ ಸಿನಿಮಾಗಳನ್ನು ನಿರಾಕರಿಸುತ್ತಿದ್ದಾರೆ.

ಇನ್ನು ಜೂ ಎನ್​ಟಿಆರ್ ಅವರ ದೇವರ ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದು, ಆರ್​ಆರ್​ಆರ್ ಮಾದರಿಯಲ್ಲಿಯೇ ಈ ಸಿನಿಮಾವನ್ನು ಸಹ ದೊಡ್ಡ ಸ್ಕೇಲ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾಕ್ಕೆ ನಾಯಕಿಯಾಗಿ ಬಾಲಿವುಡ್ ಯುವನಟಿ ಜಾನ್ಹವಿ ಕಪೂರ್ ಅನ್ನು ಕರೆತರಲಾಗಿದೆ. ಸಿನಿಮಾದ ವಿಲನ್ ಪಾತ್ರಕ್ಕೆ ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅನ್ನು ಕರೆತರಲಾಗಿದೆ. ಇನ್ನು ಸಿನಿಮಾದ ಕೆಲವು ಆಕ್ಷನ್ ದೃಶ್ಯಗಳಿಗಾಗಿ ಹಾಲಿವುಡ್​ನ ಪ್ರಖ್ಯಾತ ಆಕ್ಷನ್ ನಿರ್ದೇಶಕರನ್ನು ಕರೆತರಲಾಗಿದೆ. ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು ಮುಂದಿನ ಸಂಕ್ರಾಂತಿಗೆ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ದೇವರ ಸಿನಿಮಾದ ಬಳಿಕ ಜೂ ಎನ್​ಟಿಆರ್, ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲವಾದರೂ ಒಂದು ಪೋಸ್ಟರ್ ಅನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಬಳಿಕ ಮತ್ತೊಮ್ಮೆ ರಾಜಮೌಳಿಯ ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್