AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದ ಬಳಿಕ ಕಂಬ್ಯಾಕ್ ಮಾಡೋಕೆ ನಭಾ ನಟೇಶ್ ರೆಡಿ; ಸಿಕ್ಕಿದೆ ಎರಡು ಆಫರ್

ನಭಾ ನಟೇಶ್​ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸಾಕಷ್ಟು ಗಾಯಗೊಂಡಿದ್ದರು. ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಅವರು ರಿಕವರಿ ಆಗಿದ್ದಾರೆ. ಸಂಪೂರ್ಣ ಚೇತರಿಕೆ ಕಂಡಿರುವ ಅವರು ನಟನೆಗೆ ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ.

ಅಪಘಾತದ ಬಳಿಕ ಕಂಬ್ಯಾಕ್ ಮಾಡೋಕೆ ನಭಾ ನಟೇಶ್ ರೆಡಿ; ಸಿಕ್ಕಿದೆ ಎರಡು ಆಫರ್
ನಭಾ
ರಾಜೇಶ್ ದುಗ್ಗುಮನೆ
|

Updated on: Mar 26, 2024 | 7:28 AM

Share

ನಟಿ ನಭಾ ನಟೇಶ್ (Nabha Natesh) ಅವರು ಕನ್ನಡದಲ್ಲಿ ಯಶಸ್ಸು ಕಂಡ ಬಳಿಕ ತೆಲುಗಿಗೆ ಹಾರಿದರು. ‘ಇಸ್ಮಾರ್ಟ್ ಶಂಕರ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿತ್ತು. ಇದಾದ ಬಳಿಕ ಅವರಿಗೆ ಅಂಥ ಯಶಸ್ಸು ಒಲಿಯಲಿಲ್ಲ. ಕೊನೆಗೆ ಅವರು ಸಿನಿಮಾ ಒಪ್ಪಿಕೊಳ್ಳುವುದನ್ನೇ ನಿಲ್ಲಿಸಿದ್ದರು. ಕೋಟಿ ಕೋಟಿ ಡಿಮ್ಯಾಂಡ್ ಮಾಡಿದ್ದರಿಂದ ನಭಾಗೆ ಆಫರ್ ಸಿಕ್ಕಿಲ್ಲ ಎಂದೆಲ್ಲ ಸುದ್ದಿ ಹರಡಿಸಲಾಯಿತು. ಆದರೆ, ಅಸಲಿಗೆ ಅವರು ಅಪಘಾತಕ್ಕೆ ಒಳಗಾಗಿದ್ದರು. ಈಗ ನಭಾ ನಟೇಶ್ ಸಂಪೂರ್ಣ ರಿಕವರ್ ಆಗಿದ್ದಾರೆ. ಅವರು ಕಂಬ್ಯಾಕ್ ಮಾಡೋಕೆ ರೆಡಿ ಆಗಿದ್ದಾರೆ.

ನಭಾ ನಟೇಶ್​ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸಾಕಷ್ಟು ಗಾಯಗೊಂಡಿದ್ದರು. ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಅವರು ರಿಕವರಿ ಆಗಿದ್ದಾರೆ. ಸಂಪೂರ್ಣ ಚೇತರಿಕೆ ಕಂಡಿರುವ ಅವರು ನಟನೆಗೆ ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ. ನಿಖಿಲ್ ಸ್ವಯಂಬು ಅವರ ಸಿನಿಮಾದಲ್ಲಿ ನಭಾ ನಟೇಶ್ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಇವರ ಜೊತೆ ಸಂಯುಕ್ತಾ ಮೆನನ್ ಕೂಡ ಇರಲಿದ್ದಾರೆ. ಈ ಸಿನಿಮಾ ಅವರಿಗೆ ದೊಡ್ಡ ಮಟ್ಟದಲ್ಲಿ ಬೂಸ್ಟ್ ಕೊಡೋ ಸಾಧ್ಯತೆ ಇದೆ.

ನಭಾ ನಟೇಶ್ ಅವರು ಮಹಿಳಾ ಪ್ರಧಾನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಹನುಮಾನ್’ ನಿರ್ಮಾಪಕರು ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಭಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇವೆರಡೂ ಸಿನಿಮಾಗಳು ನಭಾ ನಟೇಶ್​ಗೆ ಮೈಲೇಜ್ ನೀಡೋ ಸಾಧ್ಯತೆ ಇದೆ.

ಇದನ್ನೂ ಓದಿ: ಬಾರ್ಬಿ ಗರ್ಲ್​ ರೀತಿ ಪೋಸ್​ ನೀಡಿದ ಕನ್ನಡತಿ ನಭಾ ನಟೇಶ್​

ಚಿತ್ರರಂಗದಿಂದ ಸ್ವಲ್ಪ ದಿನ ದೂರ ಇದ್ದರೂ ಪ್ರೇಕ್ಷಕರು ಅವರನ್ನು ಮರೆತು ಬಿಡುವ ಸಾಧ್ಯತೆ ಇರುತ್ತದೆ. ಈ ರೀತಿ ಆಗಬಾರದು ಎನ್ನುವ ಕಾರಣದಿಂದಲೇ ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ. ನಭಾ ಕನ್ನಡ ಚಿತ್ರರಂಗಕ್ಕೂ ಕಂಬ್ಯಾಕ್ ಮಾಡಲಿ ಅನ್ನೋದು ಅನೇಕರ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!