AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದ ಬಳಿಕ ಕಂಬ್ಯಾಕ್ ಮಾಡೋಕೆ ನಭಾ ನಟೇಶ್ ರೆಡಿ; ಸಿಕ್ಕಿದೆ ಎರಡು ಆಫರ್

ನಭಾ ನಟೇಶ್​ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸಾಕಷ್ಟು ಗಾಯಗೊಂಡಿದ್ದರು. ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಅವರು ರಿಕವರಿ ಆಗಿದ್ದಾರೆ. ಸಂಪೂರ್ಣ ಚೇತರಿಕೆ ಕಂಡಿರುವ ಅವರು ನಟನೆಗೆ ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ.

ಅಪಘಾತದ ಬಳಿಕ ಕಂಬ್ಯಾಕ್ ಮಾಡೋಕೆ ನಭಾ ನಟೇಶ್ ರೆಡಿ; ಸಿಕ್ಕಿದೆ ಎರಡು ಆಫರ್
ನಭಾ
ರಾಜೇಶ್ ದುಗ್ಗುಮನೆ
|

Updated on: Mar 26, 2024 | 7:28 AM

Share

ನಟಿ ನಭಾ ನಟೇಶ್ (Nabha Natesh) ಅವರು ಕನ್ನಡದಲ್ಲಿ ಯಶಸ್ಸು ಕಂಡ ಬಳಿಕ ತೆಲುಗಿಗೆ ಹಾರಿದರು. ‘ಇಸ್ಮಾರ್ಟ್ ಶಂಕರ್’ ಚಿತ್ರದಿಂದ ಅವರಿಗೆ ದೊಡ್ಡ ಗೆಲುವು ಸಿಕ್ಕಿತ್ತು. ಇದಾದ ಬಳಿಕ ಅವರಿಗೆ ಅಂಥ ಯಶಸ್ಸು ಒಲಿಯಲಿಲ್ಲ. ಕೊನೆಗೆ ಅವರು ಸಿನಿಮಾ ಒಪ್ಪಿಕೊಳ್ಳುವುದನ್ನೇ ನಿಲ್ಲಿಸಿದ್ದರು. ಕೋಟಿ ಕೋಟಿ ಡಿಮ್ಯಾಂಡ್ ಮಾಡಿದ್ದರಿಂದ ನಭಾಗೆ ಆಫರ್ ಸಿಕ್ಕಿಲ್ಲ ಎಂದೆಲ್ಲ ಸುದ್ದಿ ಹರಡಿಸಲಾಯಿತು. ಆದರೆ, ಅಸಲಿಗೆ ಅವರು ಅಪಘಾತಕ್ಕೆ ಒಳಗಾಗಿದ್ದರು. ಈಗ ನಭಾ ನಟೇಶ್ ಸಂಪೂರ್ಣ ರಿಕವರ್ ಆಗಿದ್ದಾರೆ. ಅವರು ಕಂಬ್ಯಾಕ್ ಮಾಡೋಕೆ ರೆಡಿ ಆಗಿದ್ದಾರೆ.

ನಭಾ ನಟೇಶ್​ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸಾಕಷ್ಟು ಗಾಯಗೊಂಡಿದ್ದರು. ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಅವರು ರಿಕವರಿ ಆಗಿದ್ದಾರೆ. ಸಂಪೂರ್ಣ ಚೇತರಿಕೆ ಕಂಡಿರುವ ಅವರು ನಟನೆಗೆ ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ. ನಿಖಿಲ್ ಸ್ವಯಂಬು ಅವರ ಸಿನಿಮಾದಲ್ಲಿ ನಭಾ ನಟೇಶ್ ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಇವರ ಜೊತೆ ಸಂಯುಕ್ತಾ ಮೆನನ್ ಕೂಡ ಇರಲಿದ್ದಾರೆ. ಈ ಸಿನಿಮಾ ಅವರಿಗೆ ದೊಡ್ಡ ಮಟ್ಟದಲ್ಲಿ ಬೂಸ್ಟ್ ಕೊಡೋ ಸಾಧ್ಯತೆ ಇದೆ.

ನಭಾ ನಟೇಶ್ ಅವರು ಮಹಿಳಾ ಪ್ರಧಾನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಹನುಮಾನ್’ ನಿರ್ಮಾಪಕರು ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಭಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇವೆರಡೂ ಸಿನಿಮಾಗಳು ನಭಾ ನಟೇಶ್​ಗೆ ಮೈಲೇಜ್ ನೀಡೋ ಸಾಧ್ಯತೆ ಇದೆ.

ಇದನ್ನೂ ಓದಿ: ಬಾರ್ಬಿ ಗರ್ಲ್​ ರೀತಿ ಪೋಸ್​ ನೀಡಿದ ಕನ್ನಡತಿ ನಭಾ ನಟೇಶ್​

ಚಿತ್ರರಂಗದಿಂದ ಸ್ವಲ್ಪ ದಿನ ದೂರ ಇದ್ದರೂ ಪ್ರೇಕ್ಷಕರು ಅವರನ್ನು ಮರೆತು ಬಿಡುವ ಸಾಧ್ಯತೆ ಇರುತ್ತದೆ. ಈ ರೀತಿ ಆಗಬಾರದು ಎನ್ನುವ ಕಾರಣದಿಂದಲೇ ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಆಗಾಗ ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ. ನಭಾ ಕನ್ನಡ ಚಿತ್ರರಂಗಕ್ಕೂ ಕಂಬ್ಯಾಕ್ ಮಾಡಲಿ ಅನ್ನೋದು ಅನೇಕರ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್