ಕೊನೆಗೂ ತಪ್ಪು ಒಪ್ಪಿಕೊಂಡ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್

‘ಬೀಸ್ಟ್’ ಸಿನಿಮಾ 2022ರ ಏಪ್ರಿಲ್ 13ರಂದು ರಿಲೀಸ್ ಆಯಿತು. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತು. ಇಡೀ ಚಿತ್ರದ ಕಥೆ ಮಾಲ್ ಒಂದರಲ್ಲಿ ಸಾಗುತ್ತದೆ. ಜೊತೆಗೆ ಸಿನಿಮಾದಲ್ಲಿ ಯಾವುದೇ ಹೊಸತನ ಇರಲಿಲ್ಲ. ‘ಕೆಜಿಎಫ್ 2’ ಕೂಡ ಅದೇ ಸಂದರ್ಭದಲ್ಲಿ ರಿಲೀಸ್ ಆಗಿದ್ದರಿಂದ ಈ ಚಿತ್ರದ ಅಬ್ಬರ ಮತ್ತಷ್ಟು ಕಡಿಮೆ ಆಯಿತು.

ಕೊನೆಗೂ ತಪ್ಪು ಒಪ್ಪಿಕೊಂಡ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್
ರಜನಿ-ನೆಲ್ಸನ್-ವಿಜಯ್
Follow us
|

Updated on: Aug 19, 2023 | 6:30 AM

ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ‘ಜೈಲರ್’ ಸಿನಿಮಾ (Jailer Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರ ನಿರ್ದೇಶನದಲ್ಲಿ ಮೂಡಿ ಬಂದ ‘ಬೀಸ್ಟ್’ ಸಿನಿಮಾ ಫ್ಲಾಪ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿತು. ‘ಜೈಲರ್’ ಸಿನಿಮಾ ಗೆದ್ದ ಖುಷಿಯಲ್ಲಿ ಇರುವ ನೆಲ್ಸನ್ ಈಗ ‘ಬೀಸ್ಟ್’ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಲೆಕ್ಕಾಚಾರ ತಪ್ಪಾಗಿದೆ ಎಂಬ ವಿಚಾರವನ್ನು ಅವರು ಒಪ್ಪಿಕೊಂಡಿದ್ದಾರೆ.

‘ಬೀಸ್ಟ್’ ಸಿನಿಮಾ 2022ರ ಏಪ್ರಿಲ್ 13ರಂದು ರಿಲೀಸ್ ಆಯಿತು. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತು. ಇಡೀ ಚಿತ್ರದ ಕಥೆ ಮಾಲ್ ಒಂದರಲ್ಲಿ ಸಾಗುತ್ತದೆ. ಜೊತೆಗೆ ಸಿನಿಮಾದಲ್ಲಿ ಯಾವುದೇ ಹೊಸತನ ಇರಲಿಲ್ಲ. ‘ಕೆಜಿಎಫ್ 2’ ಕೂಡ ಅದೇ ಸಂದರ್ಭದಲ್ಲಿ ರಿಲೀಸ್ ಆಗಿದ್ದರಿಂದ ಈ ಚಿತ್ರದ ಅಬ್ಬರ ಮತ್ತಷ್ಟು ಕಡಿಮೆ ಆಯಿತು. ಸಿನಿಮಾ ಸೋಲಲು ಕಾರಣ ಏನು ಎಂಬುದನ್ನು ನೆಲ್ಸನ್ ಪುನರ್​ ವಿಮರ್ಶೆ ಮಾಡಿಕೊಂಡಿದ್ದಾರೆ.

‘ಬೀಸ್ಟ್’ ಸಿನಿಮಾ ಮಾಡುವಾಗ ಸಮಯದ ಕೊರತೆ ಉಂಟಾಯಿತು ಅನ್ನೋದು ಅವರು ಅಭಿಪ್ರಾಯ. ತಾವು ಮಾಡಿದ ತಪ್ಪು ಲೆಕ್ಕಾಚಾರದಿಂದ ಈ ರೀತಿ ಆಯಿತು ಎಂದಿದ್ದಾರೆ ಅವರು. ‘ನನಗೆ ಆರೇಳು ತಿಂಗಳು ಹೆಚ್ಚುವರಿಯಾಗಿ ಸಿಕ್ಕಿದ್ದರೆ ಖಂಡಿತವಾಗಿಯೂ ಚಿತ್ರವನ್ನು ಸರಿಯಾಗಿ ನಿರೂಪಣೆ ಮಾಡುತ್ತಿದ್ದೆ. ಬಹುಶಃ ಆಗ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಗುತ್ತಿರಲಿಲ್ಲ’ ಎಂದಿದ್ದಾರೆ ನೆಲ್ಸನ್. ‘ಬೀಸ್ಟ್’ ಸಿನಿಮಾ ಸೋತ ಬಗ್ಗೆ ವಿಜಯ್​ಗೆ ಬೇಸರ ಇದೆ. ಆ ವಿಚಾರ ನೆಲ್ಸನ್​ಗೂ ಗೊತ್ತಿದೆ. ‘ವಿಜಯ್ ಅವರ ನಿರೀಕ್ಷೆಯನ್ನು ತಲುಪಲು ಸಾಧ್ಯವಾಗದೇ ಇರುವುದಕ್ಕೆ ಬೇಸರ ಇದೆ’ ಎಂದು ನೆಲ್ಸನ್ ಹೇಳಿದ್ದಾರೆ.

ಇದನ್ನೂ ಓದಿ: 400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ? 

‘ಜೈಲರ್’ ಸಿನಿಮಾ ಹಿಟ್ ಆದ ಬಗ್ಗೆ ನೆಲ್ಸನ್​ಗೆ ಖುಷಿ ಇದೆ. ರಜನಿಕಾಂತ್ ಅವರಿಂದ ನಟನೆ ಮಾಡಿಸಿದ ರೀತಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಚಿತ್ರ ಎಂಟು ದಿನಕ್ಕೆ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 470 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್​ ಮೊದಲಾದ ಸ್ಟಾರ್ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ