AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ತಪ್ಪು ಒಪ್ಪಿಕೊಂಡ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್

‘ಬೀಸ್ಟ್’ ಸಿನಿಮಾ 2022ರ ಏಪ್ರಿಲ್ 13ರಂದು ರಿಲೀಸ್ ಆಯಿತು. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತು. ಇಡೀ ಚಿತ್ರದ ಕಥೆ ಮಾಲ್ ಒಂದರಲ್ಲಿ ಸಾಗುತ್ತದೆ. ಜೊತೆಗೆ ಸಿನಿಮಾದಲ್ಲಿ ಯಾವುದೇ ಹೊಸತನ ಇರಲಿಲ್ಲ. ‘ಕೆಜಿಎಫ್ 2’ ಕೂಡ ಅದೇ ಸಂದರ್ಭದಲ್ಲಿ ರಿಲೀಸ್ ಆಗಿದ್ದರಿಂದ ಈ ಚಿತ್ರದ ಅಬ್ಬರ ಮತ್ತಷ್ಟು ಕಡಿಮೆ ಆಯಿತು.

ಕೊನೆಗೂ ತಪ್ಪು ಒಪ್ಪಿಕೊಂಡ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್
ರಜನಿ-ನೆಲ್ಸನ್-ವಿಜಯ್
ರಾಜೇಶ್ ದುಗ್ಗುಮನೆ
|

Updated on: Aug 19, 2023 | 6:30 AM

Share

ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ‘ಜೈಲರ್’ ಸಿನಿಮಾ (Jailer Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರ ನಿರ್ದೇಶನದಲ್ಲಿ ಮೂಡಿ ಬಂದ ‘ಬೀಸ್ಟ್’ ಸಿನಿಮಾ ಫ್ಲಾಪ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿತು. ‘ಜೈಲರ್’ ಸಿನಿಮಾ ಗೆದ್ದ ಖುಷಿಯಲ್ಲಿ ಇರುವ ನೆಲ್ಸನ್ ಈಗ ‘ಬೀಸ್ಟ್’ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಲೆಕ್ಕಾಚಾರ ತಪ್ಪಾಗಿದೆ ಎಂಬ ವಿಚಾರವನ್ನು ಅವರು ಒಪ್ಪಿಕೊಂಡಿದ್ದಾರೆ.

‘ಬೀಸ್ಟ್’ ಸಿನಿಮಾ 2022ರ ಏಪ್ರಿಲ್ 13ರಂದು ರಿಲೀಸ್ ಆಯಿತು. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತು. ಇಡೀ ಚಿತ್ರದ ಕಥೆ ಮಾಲ್ ಒಂದರಲ್ಲಿ ಸಾಗುತ್ತದೆ. ಜೊತೆಗೆ ಸಿನಿಮಾದಲ್ಲಿ ಯಾವುದೇ ಹೊಸತನ ಇರಲಿಲ್ಲ. ‘ಕೆಜಿಎಫ್ 2’ ಕೂಡ ಅದೇ ಸಂದರ್ಭದಲ್ಲಿ ರಿಲೀಸ್ ಆಗಿದ್ದರಿಂದ ಈ ಚಿತ್ರದ ಅಬ್ಬರ ಮತ್ತಷ್ಟು ಕಡಿಮೆ ಆಯಿತು. ಸಿನಿಮಾ ಸೋಲಲು ಕಾರಣ ಏನು ಎಂಬುದನ್ನು ನೆಲ್ಸನ್ ಪುನರ್​ ವಿಮರ್ಶೆ ಮಾಡಿಕೊಂಡಿದ್ದಾರೆ.

‘ಬೀಸ್ಟ್’ ಸಿನಿಮಾ ಮಾಡುವಾಗ ಸಮಯದ ಕೊರತೆ ಉಂಟಾಯಿತು ಅನ್ನೋದು ಅವರು ಅಭಿಪ್ರಾಯ. ತಾವು ಮಾಡಿದ ತಪ್ಪು ಲೆಕ್ಕಾಚಾರದಿಂದ ಈ ರೀತಿ ಆಯಿತು ಎಂದಿದ್ದಾರೆ ಅವರು. ‘ನನಗೆ ಆರೇಳು ತಿಂಗಳು ಹೆಚ್ಚುವರಿಯಾಗಿ ಸಿಕ್ಕಿದ್ದರೆ ಖಂಡಿತವಾಗಿಯೂ ಚಿತ್ರವನ್ನು ಸರಿಯಾಗಿ ನಿರೂಪಣೆ ಮಾಡುತ್ತಿದ್ದೆ. ಬಹುಶಃ ಆಗ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಗುತ್ತಿರಲಿಲ್ಲ’ ಎಂದಿದ್ದಾರೆ ನೆಲ್ಸನ್. ‘ಬೀಸ್ಟ್’ ಸಿನಿಮಾ ಸೋತ ಬಗ್ಗೆ ವಿಜಯ್​ಗೆ ಬೇಸರ ಇದೆ. ಆ ವಿಚಾರ ನೆಲ್ಸನ್​ಗೂ ಗೊತ್ತಿದೆ. ‘ವಿಜಯ್ ಅವರ ನಿರೀಕ್ಷೆಯನ್ನು ತಲುಪಲು ಸಾಧ್ಯವಾಗದೇ ಇರುವುದಕ್ಕೆ ಬೇಸರ ಇದೆ’ ಎಂದು ನೆಲ್ಸನ್ ಹೇಳಿದ್ದಾರೆ.

ಇದನ್ನೂ ಓದಿ: 400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ? 

‘ಜೈಲರ್’ ಸಿನಿಮಾ ಹಿಟ್ ಆದ ಬಗ್ಗೆ ನೆಲ್ಸನ್​ಗೆ ಖುಷಿ ಇದೆ. ರಜನಿಕಾಂತ್ ಅವರಿಂದ ನಟನೆ ಮಾಡಿಸಿದ ರೀತಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಚಿತ್ರ ಎಂಟು ದಿನಕ್ಕೆ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 470 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್​ ಮೊದಲಾದ ಸ್ಟಾರ್ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!