AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ತಪ್ಪು ಒಪ್ಪಿಕೊಂಡ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್

‘ಬೀಸ್ಟ್’ ಸಿನಿಮಾ 2022ರ ಏಪ್ರಿಲ್ 13ರಂದು ರಿಲೀಸ್ ಆಯಿತು. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತು. ಇಡೀ ಚಿತ್ರದ ಕಥೆ ಮಾಲ್ ಒಂದರಲ್ಲಿ ಸಾಗುತ್ತದೆ. ಜೊತೆಗೆ ಸಿನಿಮಾದಲ್ಲಿ ಯಾವುದೇ ಹೊಸತನ ಇರಲಿಲ್ಲ. ‘ಕೆಜಿಎಫ್ 2’ ಕೂಡ ಅದೇ ಸಂದರ್ಭದಲ್ಲಿ ರಿಲೀಸ್ ಆಗಿದ್ದರಿಂದ ಈ ಚಿತ್ರದ ಅಬ್ಬರ ಮತ್ತಷ್ಟು ಕಡಿಮೆ ಆಯಿತು.

ಕೊನೆಗೂ ತಪ್ಪು ಒಪ್ಪಿಕೊಂಡ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್
ರಜನಿ-ನೆಲ್ಸನ್-ವಿಜಯ್
ರಾಜೇಶ್ ದುಗ್ಗುಮನೆ
|

Updated on: Aug 19, 2023 | 6:30 AM

Share

ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ‘ಜೈಲರ್’ ಸಿನಿಮಾ (Jailer Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರ ನಿರ್ದೇಶನದಲ್ಲಿ ಮೂಡಿ ಬಂದ ‘ಬೀಸ್ಟ್’ ಸಿನಿಮಾ ಫ್ಲಾಪ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸಾಧಾರಣ ಗಳಿಕೆ ಮಾಡಿತು. ‘ಜೈಲರ್’ ಸಿನಿಮಾ ಗೆದ್ದ ಖುಷಿಯಲ್ಲಿ ಇರುವ ನೆಲ್ಸನ್ ಈಗ ‘ಬೀಸ್ಟ್’ ಸೋಲಿನ ಬಗ್ಗೆ ಮಾತನಾಡಿದ್ದಾರೆ. ಲೆಕ್ಕಾಚಾರ ತಪ್ಪಾಗಿದೆ ಎಂಬ ವಿಚಾರವನ್ನು ಅವರು ಒಪ್ಪಿಕೊಂಡಿದ್ದಾರೆ.

‘ಬೀಸ್ಟ್’ ಸಿನಿಮಾ 2022ರ ಏಪ್ರಿಲ್ 13ರಂದು ರಿಲೀಸ್ ಆಯಿತು. ಈ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತು. ಇಡೀ ಚಿತ್ರದ ಕಥೆ ಮಾಲ್ ಒಂದರಲ್ಲಿ ಸಾಗುತ್ತದೆ. ಜೊತೆಗೆ ಸಿನಿಮಾದಲ್ಲಿ ಯಾವುದೇ ಹೊಸತನ ಇರಲಿಲ್ಲ. ‘ಕೆಜಿಎಫ್ 2’ ಕೂಡ ಅದೇ ಸಂದರ್ಭದಲ್ಲಿ ರಿಲೀಸ್ ಆಗಿದ್ದರಿಂದ ಈ ಚಿತ್ರದ ಅಬ್ಬರ ಮತ್ತಷ್ಟು ಕಡಿಮೆ ಆಯಿತು. ಸಿನಿಮಾ ಸೋಲಲು ಕಾರಣ ಏನು ಎಂಬುದನ್ನು ನೆಲ್ಸನ್ ಪುನರ್​ ವಿಮರ್ಶೆ ಮಾಡಿಕೊಂಡಿದ್ದಾರೆ.

‘ಬೀಸ್ಟ್’ ಸಿನಿಮಾ ಮಾಡುವಾಗ ಸಮಯದ ಕೊರತೆ ಉಂಟಾಯಿತು ಅನ್ನೋದು ಅವರು ಅಭಿಪ್ರಾಯ. ತಾವು ಮಾಡಿದ ತಪ್ಪು ಲೆಕ್ಕಾಚಾರದಿಂದ ಈ ರೀತಿ ಆಯಿತು ಎಂದಿದ್ದಾರೆ ಅವರು. ‘ನನಗೆ ಆರೇಳು ತಿಂಗಳು ಹೆಚ್ಚುವರಿಯಾಗಿ ಸಿಕ್ಕಿದ್ದರೆ ಖಂಡಿತವಾಗಿಯೂ ಚಿತ್ರವನ್ನು ಸರಿಯಾಗಿ ನಿರೂಪಣೆ ಮಾಡುತ್ತಿದ್ದೆ. ಬಹುಶಃ ಆಗ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಗುತ್ತಿರಲಿಲ್ಲ’ ಎಂದಿದ್ದಾರೆ ನೆಲ್ಸನ್. ‘ಬೀಸ್ಟ್’ ಸಿನಿಮಾ ಸೋತ ಬಗ್ಗೆ ವಿಜಯ್​ಗೆ ಬೇಸರ ಇದೆ. ಆ ವಿಚಾರ ನೆಲ್ಸನ್​ಗೂ ಗೊತ್ತಿದೆ. ‘ವಿಜಯ್ ಅವರ ನಿರೀಕ್ಷೆಯನ್ನು ತಲುಪಲು ಸಾಧ್ಯವಾಗದೇ ಇರುವುದಕ್ಕೆ ಬೇಸರ ಇದೆ’ ಎಂದು ನೆಲ್ಸನ್ ಹೇಳಿದ್ದಾರೆ.

ಇದನ್ನೂ ಓದಿ: 400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ? 

‘ಜೈಲರ್’ ಸಿನಿಮಾ ಹಿಟ್ ಆದ ಬಗ್ಗೆ ನೆಲ್ಸನ್​ಗೆ ಖುಷಿ ಇದೆ. ರಜನಿಕಾಂತ್ ಅವರಿಂದ ನಟನೆ ಮಾಡಿಸಿದ ರೀತಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಚಿತ್ರ ಎಂಟು ದಿನಕ್ಕೆ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 470 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್​ ಮೊದಲಾದ ಸ್ಟಾರ್ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!