AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ‘ಪುಷ್ಪ 2’ ನಿರ್ಮಾಪಕರ ಕಚೇರಿಯಲ್ಲಿ 5 ದಿನಕ್ಕೆ ಮುಗಿಯಿತು ಐಟಿ ಕಾರ್ಯಾಚರಣೆ; ಅಧಿಕಾರಿಗಳಿಗೆ ಸಿಕ್ಕಿದ್ದೇನು?

Mythri Movie Makers: ನಿರ್ಮಾಪಕ ನವೀನ್​ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಹಣಕಾಸು ಖಾತೆಗಳನ್ನು ನೋಡಿಕೊಳ್ಳುವ ಸಿಬ್ಬಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

IT Raid: ‘ಪುಷ್ಪ 2’ ನಿರ್ಮಾಪಕರ ಕಚೇರಿಯಲ್ಲಿ 5 ದಿನಕ್ಕೆ ಮುಗಿಯಿತು ಐಟಿ ಕಾರ್ಯಾಚರಣೆ; ಅಧಿಕಾರಿಗಳಿಗೆ ಸಿಕ್ಕಿದ್ದೇನು?
ಆದಾಯ ತೆರಿಗೆ ಇಲಾಖೆ. ಮೈತ್ರಿ ಮೂವೀ ಮೇಕರ್ಸ್​
ಮದನ್​ ಕುಮಾರ್​
|

Updated on:Apr 24, 2023 | 6:54 PM

Share

ನಟ ಅಲ್ಲು ಅರ್ಜುನ್​ ಅಭಿನಯದ ‘ಪುಷ್ಪ 2’ (Pushpa 2) ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗುತ್ತಿದೆ. ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಕಚೇರಿ ಮೇಲೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ (IT Raid) ಮಾಡಿದ್ದರು. ಸತತ 5 ದಿನಗಳ ಕಾಲ ಶೋಧಕಾರ್ಯ ಮಾಡಲಾಗಿದೆ. ಟಾಲಿವುಡ್​ನಲ್ಲಿ ಹಲವು ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ನವೀನ್​ ಅವರಿಗೆ ಸಂಬಂಧಿಸಿದ ಹಲವು ಖಾತೆಗಳನ್ನು ಪರಿಶೀಲನೆ ಮಾಡಲಾಗಿದೆ. ನಿರ್ಮಾಣ ಸಂಸ್ಥೆಯ ಎಲ್ಲ ಲೆಕ್ಕಪತ್ರಗಳನ್ನೂ ತಾಳೆ ಹಾಕಲಾಗಿದೆ. ಈಗ ಐಟಿ ಅಧಿಕಾರಿಗಳ ಕಾರ್ಯಾಚರಣೆ ಮುಕ್ತಾಯ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ (Mythri Movie Makers) ಕಡೆಯಿಂದ ಯಾವುದೇ ಹಣಕಾಸು ಅವ್ಯವಹಾರ ನಡೆದ ಬಗ್ಗೆ ದಾಖಲೆ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

2015ರಿಂದಲೂ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಚಿತ್ರರಂಗದಲ್ಲಿ ಸಕ್ರಿಯವಾಗಿದೆ. ಮಹೇಶ್​ ಬಾಬು, ಅಲ್ಲು ಅರ್ಜುನ್​, ಜೂನಿಯರ್​ ಎನ್​ಟಿಆರ್​, ರಾಮ್​ ಚರಣ್​, ವಿಜಯ್​ ದೇವರಕೊಂಡ, ‘ಮೆಗಾಸ್ಟಾರ್​’ ಚಿರಂಜೀವಿ, ಬಾಲಯ್ಯ ಮುಂತಾದ ಸ್ಟಾರ್​ ಕಲಾವಿದರ ಸಿನಿಮಾಗಳಿಗೆ ಈ ಸಂಸ್ಥೆ ಬಂಡವಾಳ ಹೂಡಿದೆ. ಜಿಎಸ್​ಟಿ ವಿಚಾರದಲ್ಲಿ ವಂಚನೆ ಆಗಿದೆ ಎಂಬ ಆರೋಪದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು ಎನ್ನಲಾಗಿದೆ. ಆದರೆ ಆದಾಯ ತೆರಿಗೆ, ಜಿಎಸ್​ಟಿ, ಟಿಡಿಎಸ್​ ಮುಂತಾದ ಯಾವುದೇ ವಿಚಾರದಲ್ಲೂ ತಪ್ಪು ಲೆಕ್ಕ ನೀಡಿರುವುದು ಕಂಡುಬಂದಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದೆ.

ಇದನ್ನೂ ಓದಿ: ಐಟಿ ದಾಳಿ ಬೆನ್ನಲ್ಲೆ ಆಸ್ಪತ್ರೆಗೆ ದಾಖಲಾದ ಪುಷ್ಪ ನಿರ್ಮಾಪಕ

ಶೋಧಕಾರ್ಯದ ಸಂದರ್ಭದಲ್ಲಿ ನಿರ್ಮಾಪಕ ನವೀನ್​ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ಅಲ್ಲದೇ, ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಹಣಕಾಸು ಖಾತೆಗಳನ್ನು ನೋಡಿಕೊಳ್ಳುವ ಸಿಬ್ಬಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಎಲ್ಲ ಆಯಾಮದಿಂದಲೂ ಪರಿಶೀಲನೆ ಮಾಡಲಾಗಿದ್ದು, ಯಾವುದೇ ಅಕ್ರಮ ನಡೆದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:  Pushpa 2: ಮತ್ತೊಂದು ಹಂತದ ಶೂಟಿಂಗ್​ಗೆ ಮೈ ಕೊಡವಿ ನಿಂತ ಅಲ್ಲು ಅರ್ಜುನ್​; ಇಲ್ಲಿದೆ ‘ಪುಷ್ಪ 2’ ಅಪ್​ಡೇಟ್​

‘ಮೈತ್ರಿ ಮೂವೀ ಮೇಕರ್ಸ್​’ ಮೂಲಕ ‘ಪುಷ್ಪ 2’ ಸಿನಿಮಾ ನಿರ್ಮಾಣ ಆಗುತ್ತಿದೆ. ‘ಪುಷ್ಪ’ ಚಿತ್ರ ಸೂಪರ್​ ಹಿಟ್​ ಆಗಿದ್ದರಿಂದ ಈಗ ಅದರ ಸೀಕ್ವೆಲ್ ಮೇಲೆ ಭರ್ಜರಿ ನಿರೀಕ್ಷೆ ಇದೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಲು ನಿರ್ದೇಶಕ ಸುಕುಮಾರ್​ ಅವರು ಸ್ಕ್ರಿಪ್ಟ್​ನಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ನಿರ್ಮಾಪಕರು ಬಹುಕೋಟಿ ರೂಪಾಯಿ ರೂಪಾಯಿ ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಫಸ್ಟ್​ ಗ್ಲಿಂಪ್ಸ್​ನಿಂದ ‘ಪುಷ್ಪ 2’ ಸಿನಿಮಾ ಮೇಲಿನ ಹೈಪ್​ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:54 pm, Mon, 24 April 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ