AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ‘ಪುಷ್ಪ 2’ ನಿರ್ಮಾಪಕರ ಕಚೇರಿಯಲ್ಲಿ 5 ದಿನಕ್ಕೆ ಮುಗಿಯಿತು ಐಟಿ ಕಾರ್ಯಾಚರಣೆ; ಅಧಿಕಾರಿಗಳಿಗೆ ಸಿಕ್ಕಿದ್ದೇನು?

Mythri Movie Makers: ನಿರ್ಮಾಪಕ ನವೀನ್​ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಹಣಕಾಸು ಖಾತೆಗಳನ್ನು ನೋಡಿಕೊಳ್ಳುವ ಸಿಬ್ಬಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

IT Raid: ‘ಪುಷ್ಪ 2’ ನಿರ್ಮಾಪಕರ ಕಚೇರಿಯಲ್ಲಿ 5 ದಿನಕ್ಕೆ ಮುಗಿಯಿತು ಐಟಿ ಕಾರ್ಯಾಚರಣೆ; ಅಧಿಕಾರಿಗಳಿಗೆ ಸಿಕ್ಕಿದ್ದೇನು?
ಆದಾಯ ತೆರಿಗೆ ಇಲಾಖೆ. ಮೈತ್ರಿ ಮೂವೀ ಮೇಕರ್ಸ್​
ಮದನ್​ ಕುಮಾರ್​
|

Updated on:Apr 24, 2023 | 6:54 PM

Share

ಮುಖ್ಯಾಂಶಗಳು

  • ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಮೇಲೆ ಐಟಿ ದಾಳಿ
  • ಸತತ ಐದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡ
  • ‘ಪುಷ್ಪ 2’ ನಿರ್ಮಾಪಕರ ಲೆಕ್ಕಪತ್ರಗಳನ್ನು ಪರಿಶೀಲಿಸಿದ ತೆರಿಗೆ ಅಧಿಕಾರಿಗಳು

ನಟ ಅಲ್ಲು ಅರ್ಜುನ್​ ಅಭಿನಯದ ‘ಪುಷ್ಪ 2’ (Pushpa 2) ಸಿನಿಮಾಗೆ ಬಹುಕೋಟಿ ರೂಪಾಯಿ ಬಂಡವಾಳ ಹೂಡಲಾಗುತ್ತಿದೆ. ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಕಚೇರಿ ಮೇಲೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ (IT Raid) ಮಾಡಿದ್ದರು. ಸತತ 5 ದಿನಗಳ ಕಾಲ ಶೋಧಕಾರ್ಯ ಮಾಡಲಾಗಿದೆ. ಟಾಲಿವುಡ್​ನಲ್ಲಿ ಹಲವು ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ನವೀನ್​ ಅವರಿಗೆ ಸಂಬಂಧಿಸಿದ ಹಲವು ಖಾತೆಗಳನ್ನು ಪರಿಶೀಲನೆ ಮಾಡಲಾಗಿದೆ. ನಿರ್ಮಾಣ ಸಂಸ್ಥೆಯ ಎಲ್ಲ ಲೆಕ್ಕಪತ್ರಗಳನ್ನೂ ತಾಳೆ ಹಾಕಲಾಗಿದೆ. ಈಗ ಐಟಿ ಅಧಿಕಾರಿಗಳ ಕಾರ್ಯಾಚರಣೆ ಮುಕ್ತಾಯ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ (Mythri Movie Makers) ಕಡೆಯಿಂದ ಯಾವುದೇ ಹಣಕಾಸು ಅವ್ಯವಹಾರ ನಡೆದ ಬಗ್ಗೆ ದಾಖಲೆ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.

2015ರಿಂದಲೂ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯು ಚಿತ್ರರಂಗದಲ್ಲಿ ಸಕ್ರಿಯವಾಗಿದೆ. ಮಹೇಶ್​ ಬಾಬು, ಅಲ್ಲು ಅರ್ಜುನ್​, ಜೂನಿಯರ್​ ಎನ್​ಟಿಆರ್​, ರಾಮ್​ ಚರಣ್​, ವಿಜಯ್​ ದೇವರಕೊಂಡ, ‘ಮೆಗಾಸ್ಟಾರ್​’ ಚಿರಂಜೀವಿ, ಬಾಲಯ್ಯ ಮುಂತಾದ ಸ್ಟಾರ್​ ಕಲಾವಿದರ ಸಿನಿಮಾಗಳಿಗೆ ಈ ಸಂಸ್ಥೆ ಬಂಡವಾಳ ಹೂಡಿದೆ. ಜಿಎಸ್​ಟಿ ವಿಚಾರದಲ್ಲಿ ವಂಚನೆ ಆಗಿದೆ ಎಂಬ ಆರೋಪದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು ಎನ್ನಲಾಗಿದೆ. ಆದರೆ ಆದಾಯ ತೆರಿಗೆ, ಜಿಎಸ್​ಟಿ, ಟಿಡಿಎಸ್​ ಮುಂತಾದ ಯಾವುದೇ ವಿಚಾರದಲ್ಲೂ ತಪ್ಪು ಲೆಕ್ಕ ನೀಡಿರುವುದು ಕಂಡುಬಂದಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದೆ.

ಇದನ್ನೂ ಓದಿ: ಐಟಿ ದಾಳಿ ಬೆನ್ನಲ್ಲೆ ಆಸ್ಪತ್ರೆಗೆ ದಾಖಲಾದ ಪುಷ್ಪ ನಿರ್ಮಾಪಕ

ಶೋಧಕಾರ್ಯದ ಸಂದರ್ಭದಲ್ಲಿ ನಿರ್ಮಾಪಕ ನವೀನ್​ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ಅಲ್ಲದೇ, ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಹಣಕಾಸು ಖಾತೆಗಳನ್ನು ನೋಡಿಕೊಳ್ಳುವ ಸಿಬ್ಬಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಎಲ್ಲ ಆಯಾಮದಿಂದಲೂ ಪರಿಶೀಲನೆ ಮಾಡಲಾಗಿದ್ದು, ಯಾವುದೇ ಅಕ್ರಮ ನಡೆದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:  Pushpa 2: ಮತ್ತೊಂದು ಹಂತದ ಶೂಟಿಂಗ್​ಗೆ ಮೈ ಕೊಡವಿ ನಿಂತ ಅಲ್ಲು ಅರ್ಜುನ್​; ಇಲ್ಲಿದೆ ‘ಪುಷ್ಪ 2’ ಅಪ್​ಡೇಟ್​

‘ಮೈತ್ರಿ ಮೂವೀ ಮೇಕರ್ಸ್​’ ಮೂಲಕ ‘ಪುಷ್ಪ 2’ ಸಿನಿಮಾ ನಿರ್ಮಾಣ ಆಗುತ್ತಿದೆ. ‘ಪುಷ್ಪ’ ಚಿತ್ರ ಸೂಪರ್​ ಹಿಟ್​ ಆಗಿದ್ದರಿಂದ ಈಗ ಅದರ ಸೀಕ್ವೆಲ್ ಮೇಲೆ ಭರ್ಜರಿ ನಿರೀಕ್ಷೆ ಇದೆ. ಆ ನಿರೀಕ್ಷೆಯ ಮಟ್ಟವನ್ನು ತಲುಪಲು ನಿರ್ದೇಶಕ ಸುಕುಮಾರ್​ ಅವರು ಸ್ಕ್ರಿಪ್ಟ್​ನಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ನಿರ್ಮಾಪಕರು ಬಹುಕೋಟಿ ರೂಪಾಯಿ ರೂಪಾಯಿ ಬಂಡವಾಳ ಹೂಡುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ಫಸ್ಟ್​ ಗ್ಲಿಂಪ್ಸ್​ನಿಂದ ‘ಪುಷ್ಪ 2’ ಸಿನಿಮಾ ಮೇಲಿನ ಹೈಪ್​ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:54 pm, Mon, 24 April 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್