AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mythri Movie Makers: ‘ಪುಷ್ಪ 2’ ನಿರ್ಮಾಪಕರ ಮೇಲೆ ಐಟಿ ದಾಳಿ; ಸಂಕಷ್ಟದಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ

IT Raid | Mythri Movie Makers: ಹಲವು ಚಿತ್ರಗಳ ಮೇಲೆ ಈ ಸಂಸ್ಥೆ 700 ಕೋಟಿ ರೂಪಾಯಿ ಬಂಡವಾಳ ಹೂಡುತ್ತಿದೆ. ಇದರ ಆದಾಯದ ಮೂಲದ ಬಗ್ಗೆ ಸೂಕ್ತ ದಾಖಲೆ ಒದಗಿಸಿಲ್ಲ ಎಂದು ಹೇಳಲಾಗುತ್ತಿದೆ.

Mythri Movie Makers: ‘ಪುಷ್ಪ 2’ ನಿರ್ಮಾಪಕರ ಮೇಲೆ ಐಟಿ ದಾಳಿ; ಸಂಕಷ್ಟದಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ
ಸಾಂದರ್ಭಿಕ ಚಿತ್ರImage Credit source: PTI
TV9 Web
| Edited By: |

Updated on: Dec 13, 2022 | 9:30 AM

Share

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ (Mythri Movie Makers) ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೋಮವಾರ (ಡಿ.12) ಈ ದಾಳಿ ನಡೆದಿದ್ದು, ಮಂಗಳವಾರ ಕೂಡ ಪರಿಶೀಲನೆ ಮುಂದುವರಿದಿದೆ. ಈ ಸಂಸ್ಥೆ ಮೇಲೆ ಜಿಎಸ್​ಟಿ ವಂಚನೆ ಆರೋಪ ಎದುರಾಗಿದೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಟ 2’ (Pushpa 2) ಸೇರಿದಂತೆ ಅನೇಕ ಸಿನಿಮಾಗಳನ್ನು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಿಸುತ್ತಿರುವ ಈ ಸಂಸ್ಥೆಯ ಹಣಕಾಸಿನ ವ್ಯವಹಾರದ ಮೇಲೆ ಐಟಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಬೆಂಗಳೂರು, ಹೈದರಾಬಾದ್​ ಕಚೇರಿ ಸೇರಿ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ (IT Raid) ಮಾಡಲಾಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ನಲ್ಲಿ ವಿದೇಶಿ ಹಣ ಹೂಡಿಕೆ ಆಗಿದೆ ಎಂಬ ಮಾಹಿತಿ ಆಧರಿಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಪ್ರಮುಖರಾದ ಎರ್ನೇನು ನವೀನ್​, ಚೆರುಕುರಿ ಮೋಹನ್​, ಯಲಮಂಚಿಲಿ ರವಿಶಂಕರ್​ ಅವರ ನಿವಾಸ ಮೇಲೂ ಐಟಿ ದಾಳಿ ಮಾಡಲಾಗಿದೆ. ಟಾಲಿವುಡ್​ನಲ್ಲಿ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಮೈತ್ರಿ ಮೂವೀ ಮೇಕರ್ಸ್​’ ಬೆಳೆದು ನಿಂತಿದೆ. ‘ಶ್ರೀಮಂತುಡು’, ‘ರಂಗಸ್ಥಲಂ’, ‘ಜನತಾ ಗ್ಯಾರೇಜ್​’, ‘ಉಪ್ಪೆನಾ’, ‘ಪುಷ್ಪ’, ‘ಸರ್ಕಾರು ವಾರಿ ಪಾಟ’ ಸೇರಿದಂತೆ ಅನೇಕ ಸಿನಿಮಾಗಳು ಈ ಸಂಸ್ಥೆ ಮೂಲಕ ಮೂಡಿಬಂದಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಚಿತ್ರಕ್ಕೆ ಭಯಾನಕ ವಿಲನ್​ ಎಂಟ್ರಿ? ವಿದೇಶಿ ನಟನಿಗೆ ಮಣೆ ಹಾಕಿದ ನಿರ್ದೇಶಕ ಸುಕುಮಾರ್​

ಇದನ್ನೂ ಓದಿ
Image
‘ಪುಷ್ಪ 2’ ಬಗ್ಗೆ ಹೆಚ್ಚಿತು ಅಂತೆ-ಕಂತೆ; ‘ಇಂಥ ಸುದ್ದಿ ಎಲ್ಲಿ ಸಿಗುತ್ತದೆ’ ಎಂದು ನೇರವಾಗಿ ಪ್ರಶ್ನೆ ಮಾಡಿದ ಮನೋಜ್​ ಬಾಜ್​ಪಾಯಿ
Image
Pushpa 2: ಫಾರಿನ್​ ಹುಡುಗಿ ಜತೆ ಅಲ್ಲು ಅರ್ಜುನ್​​ ರೊಮ್ಯಾನ್ಸ್​; ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಪಾತ್ರಕ್ಕೆ ಬೀಳುತ್ತಾ ಕತ್ತರಿ?
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ

ಸಾಲು ಸಾಲು ಸಿನಿಮಾಗಳಿಗೆ ‘ಮೈತ್ರಿ ಮೂವೀ ಮೇಕರ್ಸ್​’ ಬಂಡವಾಳ ಹೂಡುತ್ತಿದೆ. ‘ವೀರ ಸಿಂಹ ರೆಡ್ಡಿ’, ‘ವಾಲ್ತೇರ್​ ವೀರಯ್ಯ’, ‘ಖುಷಿ’, ‘ಉಸ್ತಾದ್​ ಭಗತ್​ ಸಿಂಗ್​’, ‘ಪುಷ್ಪ 2’ ಮುಂತಾದ ಸಿನಿಮಾಗಳು ಈ ಸಂಸ್ಥೆ ಮೂಲಕ ತಯಾರಾಗುತ್ತಿವೆ. ಎಲ್ಲ ಸೇರಿ ಒಟ್ಟು 700 ಕೋಟಿ ರೂಪಾಯಿ ಬಂಡವಾಳ ಹೂಡಲಾಗುತ್ತಿದೆ. ಇದರ ಆದಾಯದ ಮೂಲದ ಬಗ್ಗೆ ಸೂಕ್ತ ದಾಖಲೆ ಒದಗಿಸಿಲ್ಲ ಎಂದು ಹೇಳಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಐಟಿ ದಾಳಿ ಮಾಡಲಾಗಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಚಿತ್ರಕ್ಕೆ ಸಂಭಾವನೆ ಪಡೆಯಲ್ವಾ ನಿರ್ದೇಶಕ ಸುಕುಮಾರ್? ಇಲ್ಲಿದೆ ದೊಡ್ಡ ಪ್ಲ್ಯಾನ್​

ಈ ಸಂಸ್ಥೆಯಿಂದ ಕಳೆದ ವರ್ಷ ನಡೆದ ಹಣಕಾಸಿನ ವ್ಯವಹಾರದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. 2022-23ನೇ ಸಾಲಿನ ಐಟಿ ರಿಟರ್ನ್ಸ್​ನಲ್ಲಿ ಆದಾಯದ ಮೂಲದ ಬಗ್ಗೆ ಸರಿಯಾಗಿ ಮಾಹಿತಿ ಒದಗಿಸಿಲ್ಲ. ಆ ಕಾರಣದಿಂದಲೇ ಐಟ ದಾಳಿ ನಡೆದಿದೆ ಎಂದು ವರದಿ ಆಗಿದೆ. ಈ ದಾಳಿಯಿಂದಾಗಿ ಮುಂಬರುವ ಸಿನಿಮಾಗಳ ನಿರ್ಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

‘ಜನ ಸೇನಾ’ ಪಕ್ಷದ ಮುಖಂಡ ಪವನ್​ ಕಲ್ಯಾಣ್​ ಅವರ ‘ಉಸ್ತಾದ್​ ಭಗತ್​ ಸಿಂಗ್​’ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್​’ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ಭಾನುವಾರ (ಡಿ.11) ಮುಹೂರ್ತ ಮಾಡಲಾಗಿತ್ತು. ಅದರ ಬೆನ್ನಲ್ಲೇ ಐಟಿ ದಾಳಿ ನಡೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು