AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mythri Movie Makers: ‘ಪುಷ್ಪ 2’ ನಿರ್ಮಾಪಕರ ಮೇಲೆ ಐಟಿ ದಾಳಿ; ಸಂಕಷ್ಟದಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ

IT Raid | Mythri Movie Makers: ಹಲವು ಚಿತ್ರಗಳ ಮೇಲೆ ಈ ಸಂಸ್ಥೆ 700 ಕೋಟಿ ರೂಪಾಯಿ ಬಂಡವಾಳ ಹೂಡುತ್ತಿದೆ. ಇದರ ಆದಾಯದ ಮೂಲದ ಬಗ್ಗೆ ಸೂಕ್ತ ದಾಖಲೆ ಒದಗಿಸಿಲ್ಲ ಎಂದು ಹೇಳಲಾಗುತ್ತಿದೆ.

Mythri Movie Makers: ‘ಪುಷ್ಪ 2’ ನಿರ್ಮಾಪಕರ ಮೇಲೆ ಐಟಿ ದಾಳಿ; ಸಂಕಷ್ಟದಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ
ಸಾಂದರ್ಭಿಕ ಚಿತ್ರImage Credit source: PTI
TV9 Web
| Edited By: |

Updated on: Dec 13, 2022 | 9:30 AM

Share

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ (Mythri Movie Makers) ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೋಮವಾರ (ಡಿ.12) ಈ ದಾಳಿ ನಡೆದಿದ್ದು, ಮಂಗಳವಾರ ಕೂಡ ಪರಿಶೀಲನೆ ಮುಂದುವರಿದಿದೆ. ಈ ಸಂಸ್ಥೆ ಮೇಲೆ ಜಿಎಸ್​ಟಿ ವಂಚನೆ ಆರೋಪ ಎದುರಾಗಿದೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಟ 2’ (Pushpa 2) ಸೇರಿದಂತೆ ಅನೇಕ ಸಿನಿಮಾಗಳನ್ನು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಿಸುತ್ತಿರುವ ಈ ಸಂಸ್ಥೆಯ ಹಣಕಾಸಿನ ವ್ಯವಹಾರದ ಮೇಲೆ ಐಟಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಬೆಂಗಳೂರು, ಹೈದರಾಬಾದ್​ ಕಚೇರಿ ಸೇರಿ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ (IT Raid) ಮಾಡಲಾಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ನಲ್ಲಿ ವಿದೇಶಿ ಹಣ ಹೂಡಿಕೆ ಆಗಿದೆ ಎಂಬ ಮಾಹಿತಿ ಆಧರಿಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಪ್ರಮುಖರಾದ ಎರ್ನೇನು ನವೀನ್​, ಚೆರುಕುರಿ ಮೋಹನ್​, ಯಲಮಂಚಿಲಿ ರವಿಶಂಕರ್​ ಅವರ ನಿವಾಸ ಮೇಲೂ ಐಟಿ ದಾಳಿ ಮಾಡಲಾಗಿದೆ. ಟಾಲಿವುಡ್​ನಲ್ಲಿ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಮೈತ್ರಿ ಮೂವೀ ಮೇಕರ್ಸ್​’ ಬೆಳೆದು ನಿಂತಿದೆ. ‘ಶ್ರೀಮಂತುಡು’, ‘ರಂಗಸ್ಥಲಂ’, ‘ಜನತಾ ಗ್ಯಾರೇಜ್​’, ‘ಉಪ್ಪೆನಾ’, ‘ಪುಷ್ಪ’, ‘ಸರ್ಕಾರು ವಾರಿ ಪಾಟ’ ಸೇರಿದಂತೆ ಅನೇಕ ಸಿನಿಮಾಗಳು ಈ ಸಂಸ್ಥೆ ಮೂಲಕ ಮೂಡಿಬಂದಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಚಿತ್ರಕ್ಕೆ ಭಯಾನಕ ವಿಲನ್​ ಎಂಟ್ರಿ? ವಿದೇಶಿ ನಟನಿಗೆ ಮಣೆ ಹಾಕಿದ ನಿರ್ದೇಶಕ ಸುಕುಮಾರ್​

ಇದನ್ನೂ ಓದಿ
Image
‘ಪುಷ್ಪ 2’ ಬಗ್ಗೆ ಹೆಚ್ಚಿತು ಅಂತೆ-ಕಂತೆ; ‘ಇಂಥ ಸುದ್ದಿ ಎಲ್ಲಿ ಸಿಗುತ್ತದೆ’ ಎಂದು ನೇರವಾಗಿ ಪ್ರಶ್ನೆ ಮಾಡಿದ ಮನೋಜ್​ ಬಾಜ್​ಪಾಯಿ
Image
Pushpa 2: ಫಾರಿನ್​ ಹುಡುಗಿ ಜತೆ ಅಲ್ಲು ಅರ್ಜುನ್​​ ರೊಮ್ಯಾನ್ಸ್​; ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಪಾತ್ರಕ್ಕೆ ಬೀಳುತ್ತಾ ಕತ್ತರಿ?
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ

ಸಾಲು ಸಾಲು ಸಿನಿಮಾಗಳಿಗೆ ‘ಮೈತ್ರಿ ಮೂವೀ ಮೇಕರ್ಸ್​’ ಬಂಡವಾಳ ಹೂಡುತ್ತಿದೆ. ‘ವೀರ ಸಿಂಹ ರೆಡ್ಡಿ’, ‘ವಾಲ್ತೇರ್​ ವೀರಯ್ಯ’, ‘ಖುಷಿ’, ‘ಉಸ್ತಾದ್​ ಭಗತ್​ ಸಿಂಗ್​’, ‘ಪುಷ್ಪ 2’ ಮುಂತಾದ ಸಿನಿಮಾಗಳು ಈ ಸಂಸ್ಥೆ ಮೂಲಕ ತಯಾರಾಗುತ್ತಿವೆ. ಎಲ್ಲ ಸೇರಿ ಒಟ್ಟು 700 ಕೋಟಿ ರೂಪಾಯಿ ಬಂಡವಾಳ ಹೂಡಲಾಗುತ್ತಿದೆ. ಇದರ ಆದಾಯದ ಮೂಲದ ಬಗ್ಗೆ ಸೂಕ್ತ ದಾಖಲೆ ಒದಗಿಸಿಲ್ಲ ಎಂದು ಹೇಳಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಐಟಿ ದಾಳಿ ಮಾಡಲಾಗಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಚಿತ್ರಕ್ಕೆ ಸಂಭಾವನೆ ಪಡೆಯಲ್ವಾ ನಿರ್ದೇಶಕ ಸುಕುಮಾರ್? ಇಲ್ಲಿದೆ ದೊಡ್ಡ ಪ್ಲ್ಯಾನ್​

ಈ ಸಂಸ್ಥೆಯಿಂದ ಕಳೆದ ವರ್ಷ ನಡೆದ ಹಣಕಾಸಿನ ವ್ಯವಹಾರದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. 2022-23ನೇ ಸಾಲಿನ ಐಟಿ ರಿಟರ್ನ್ಸ್​ನಲ್ಲಿ ಆದಾಯದ ಮೂಲದ ಬಗ್ಗೆ ಸರಿಯಾಗಿ ಮಾಹಿತಿ ಒದಗಿಸಿಲ್ಲ. ಆ ಕಾರಣದಿಂದಲೇ ಐಟ ದಾಳಿ ನಡೆದಿದೆ ಎಂದು ವರದಿ ಆಗಿದೆ. ಈ ದಾಳಿಯಿಂದಾಗಿ ಮುಂಬರುವ ಸಿನಿಮಾಗಳ ನಿರ್ಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

‘ಜನ ಸೇನಾ’ ಪಕ್ಷದ ಮುಖಂಡ ಪವನ್​ ಕಲ್ಯಾಣ್​ ಅವರ ‘ಉಸ್ತಾದ್​ ಭಗತ್​ ಸಿಂಗ್​’ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್​’ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ಭಾನುವಾರ (ಡಿ.11) ಮುಹೂರ್ತ ಮಾಡಲಾಗಿತ್ತು. ಅದರ ಬೆನ್ನಲ್ಲೇ ಐಟಿ ದಾಳಿ ನಡೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ