Mythri Movie Makers: ‘ಪುಷ್ಪ 2’ ನಿರ್ಮಾಪಕರ ಮೇಲೆ ಐಟಿ ದಾಳಿ; ಸಂಕಷ್ಟದಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ

IT Raid | Mythri Movie Makers: ಹಲವು ಚಿತ್ರಗಳ ಮೇಲೆ ಈ ಸಂಸ್ಥೆ 700 ಕೋಟಿ ರೂಪಾಯಿ ಬಂಡವಾಳ ಹೂಡುತ್ತಿದೆ. ಇದರ ಆದಾಯದ ಮೂಲದ ಬಗ್ಗೆ ಸೂಕ್ತ ದಾಖಲೆ ಒದಗಿಸಿಲ್ಲ ಎಂದು ಹೇಳಲಾಗುತ್ತಿದೆ.

Mythri Movie Makers: ‘ಪುಷ್ಪ 2’ ನಿರ್ಮಾಪಕರ ಮೇಲೆ ಐಟಿ ದಾಳಿ; ಸಂಕಷ್ಟದಲ್ಲಿ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ
ಸಾಂದರ್ಭಿಕ ಚಿತ್ರImage Credit source: PTI
Follow us
| Updated By: ಮದನ್​ ಕುಮಾರ್​

Updated on: Dec 13, 2022 | 9:30 AM

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ (Mythri Movie Makers) ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸೋಮವಾರ (ಡಿ.12) ಈ ದಾಳಿ ನಡೆದಿದ್ದು, ಮಂಗಳವಾರ ಕೂಡ ಪರಿಶೀಲನೆ ಮುಂದುವರಿದಿದೆ. ಈ ಸಂಸ್ಥೆ ಮೇಲೆ ಜಿಎಸ್​ಟಿ ವಂಚನೆ ಆರೋಪ ಎದುರಾಗಿದೆ. ಅಲ್ಲು ಅರ್ಜುನ್​ ನಟನೆಯ ‘ಪುಷ್ಟ 2’ (Pushpa 2) ಸೇರಿದಂತೆ ಅನೇಕ ಸಿನಿಮಾಗಳನ್ನು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಿಸುತ್ತಿರುವ ಈ ಸಂಸ್ಥೆಯ ಹಣಕಾಸಿನ ವ್ಯವಹಾರದ ಮೇಲೆ ಐಟಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಬೆಂಗಳೂರು, ಹೈದರಾಬಾದ್​ ಕಚೇರಿ ಸೇರಿ 15 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ (IT Raid) ಮಾಡಲಾಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ನಲ್ಲಿ ವಿದೇಶಿ ಹಣ ಹೂಡಿಕೆ ಆಗಿದೆ ಎಂಬ ಮಾಹಿತಿ ಆಧರಿಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆಯ ಪ್ರಮುಖರಾದ ಎರ್ನೇನು ನವೀನ್​, ಚೆರುಕುರಿ ಮೋಹನ್​, ಯಲಮಂಚಿಲಿ ರವಿಶಂಕರ್​ ಅವರ ನಿವಾಸ ಮೇಲೂ ಐಟಿ ದಾಳಿ ಮಾಡಲಾಗಿದೆ. ಟಾಲಿವುಡ್​ನಲ್ಲಿ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಮೈತ್ರಿ ಮೂವೀ ಮೇಕರ್ಸ್​’ ಬೆಳೆದು ನಿಂತಿದೆ. ‘ಶ್ರೀಮಂತುಡು’, ‘ರಂಗಸ್ಥಲಂ’, ‘ಜನತಾ ಗ್ಯಾರೇಜ್​’, ‘ಉಪ್ಪೆನಾ’, ‘ಪುಷ್ಪ’, ‘ಸರ್ಕಾರು ವಾರಿ ಪಾಟ’ ಸೇರಿದಂತೆ ಅನೇಕ ಸಿನಿಮಾಗಳು ಈ ಸಂಸ್ಥೆ ಮೂಲಕ ಮೂಡಿಬಂದಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಚಿತ್ರಕ್ಕೆ ಭಯಾನಕ ವಿಲನ್​ ಎಂಟ್ರಿ? ವಿದೇಶಿ ನಟನಿಗೆ ಮಣೆ ಹಾಕಿದ ನಿರ್ದೇಶಕ ಸುಕುಮಾರ್​

ಇದನ್ನೂ ಓದಿ
Image
‘ಪುಷ್ಪ 2’ ಬಗ್ಗೆ ಹೆಚ್ಚಿತು ಅಂತೆ-ಕಂತೆ; ‘ಇಂಥ ಸುದ್ದಿ ಎಲ್ಲಿ ಸಿಗುತ್ತದೆ’ ಎಂದು ನೇರವಾಗಿ ಪ್ರಶ್ನೆ ಮಾಡಿದ ಮನೋಜ್​ ಬಾಜ್​ಪಾಯಿ
Image
Pushpa 2: ಫಾರಿನ್​ ಹುಡುಗಿ ಜತೆ ಅಲ್ಲು ಅರ್ಜುನ್​​ ರೊಮ್ಯಾನ್ಸ್​; ‘ಪುಷ್ಪ 2’ ಚಿತ್ರದಲ್ಲಿ ರಶ್ಮಿಕಾ ಪಾತ್ರಕ್ಕೆ ಬೀಳುತ್ತಾ ಕತ್ತರಿ?
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ

ಸಾಲು ಸಾಲು ಸಿನಿಮಾಗಳಿಗೆ ‘ಮೈತ್ರಿ ಮೂವೀ ಮೇಕರ್ಸ್​’ ಬಂಡವಾಳ ಹೂಡುತ್ತಿದೆ. ‘ವೀರ ಸಿಂಹ ರೆಡ್ಡಿ’, ‘ವಾಲ್ತೇರ್​ ವೀರಯ್ಯ’, ‘ಖುಷಿ’, ‘ಉಸ್ತಾದ್​ ಭಗತ್​ ಸಿಂಗ್​’, ‘ಪುಷ್ಪ 2’ ಮುಂತಾದ ಸಿನಿಮಾಗಳು ಈ ಸಂಸ್ಥೆ ಮೂಲಕ ತಯಾರಾಗುತ್ತಿವೆ. ಎಲ್ಲ ಸೇರಿ ಒಟ್ಟು 700 ಕೋಟಿ ರೂಪಾಯಿ ಬಂಡವಾಳ ಹೂಡಲಾಗುತ್ತಿದೆ. ಇದರ ಆದಾಯದ ಮೂಲದ ಬಗ್ಗೆ ಸೂಕ್ತ ದಾಖಲೆ ಒದಗಿಸಿಲ್ಲ ಎಂದು ಹೇಳಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಐಟಿ ದಾಳಿ ಮಾಡಲಾಗಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಚಿತ್ರಕ್ಕೆ ಸಂಭಾವನೆ ಪಡೆಯಲ್ವಾ ನಿರ್ದೇಶಕ ಸುಕುಮಾರ್? ಇಲ್ಲಿದೆ ದೊಡ್ಡ ಪ್ಲ್ಯಾನ್​

ಈ ಸಂಸ್ಥೆಯಿಂದ ಕಳೆದ ವರ್ಷ ನಡೆದ ಹಣಕಾಸಿನ ವ್ಯವಹಾರದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. 2022-23ನೇ ಸಾಲಿನ ಐಟಿ ರಿಟರ್ನ್ಸ್​ನಲ್ಲಿ ಆದಾಯದ ಮೂಲದ ಬಗ್ಗೆ ಸರಿಯಾಗಿ ಮಾಹಿತಿ ಒದಗಿಸಿಲ್ಲ. ಆ ಕಾರಣದಿಂದಲೇ ಐಟ ದಾಳಿ ನಡೆದಿದೆ ಎಂದು ವರದಿ ಆಗಿದೆ. ಈ ದಾಳಿಯಿಂದಾಗಿ ಮುಂಬರುವ ಸಿನಿಮಾಗಳ ನಿರ್ಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

‘ಜನ ಸೇನಾ’ ಪಕ್ಷದ ಮುಖಂಡ ಪವನ್​ ಕಲ್ಯಾಣ್​ ಅವರ ‘ಉಸ್ತಾದ್​ ಭಗತ್​ ಸಿಂಗ್​’ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್​’ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ಭಾನುವಾರ (ಡಿ.11) ಮುಹೂರ್ತ ಮಾಡಲಾಗಿತ್ತು. ಅದರ ಬೆನ್ನಲ್ಲೇ ಐಟಿ ದಾಳಿ ನಡೆದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು