AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಸಿನಿಮಾ ನಿರ್ದೇಶಕ, ನಿರ್ಮಾಪಕರಿಗೆ ಶಾಕ್​; ಮನೆ, ಕಚೇರಿ ಮೇಲೆ ಐಟಿ ದಾಳಿ

ಸದ್ಯ ಶೋಧಕಾರ್ಯ ಮುಂದುವರಿದಿದೆ. ಐಟಿ ದಾಳಿ ವೇಳೆ ಯಾವುದಾದರೂ ಮಹತ್ವದ ದಾಖಲೆ ಸಿಕ್ಕಿದೆಯೇ ಎನ್ನುವ ವಿಚಾರ ಇನ್ನಷ್ಟೇ ಅಧಿಕೃತ ಆಗಬೇಕಿದೆ.

‘ಪುಷ್ಪ’ ಸಿನಿಮಾ ನಿರ್ದೇಶಕ, ನಿರ್ಮಾಪಕರಿಗೆ ಶಾಕ್​; ಮನೆ, ಕಚೇರಿ ಮೇಲೆ ಐಟಿ ದಾಳಿ
ಸುಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on: Apr 19, 2023 | 1:46 PM

‘ಪುಷ್ಪ’ ಸಿನಿಮಾ ನಿರ್ದೇಶಕ ಸುಕುಮಾರ್ (Sukumar) ಹಾಗೂ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಮೇಲೆ ಐಟಿ ಇಲಾಖೆ ದಾಳಿ ಮಾಡಿದೆ. ಇಂದು (ಏಪ್ರಿಲ್ 19) ಮುಂಜಾನೆಯೇ ಐಟಿ ಅಧಿಕಾರಿಗಳು ಪ್ರತ್ಯೇಕ ತಂಡ ಮಾಡಿಕೊಂಡು ಹೈದರಾಬಾದ್ ನಗರದ ವಿವಿಧ ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಸುಕುಮಾರ್​ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಶೋಧ ಮಾಡಲಾಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ (Mythri Movie Makers ) ನಿರ್ಮಾಪಕರಾದ ನವೀನ್ ಯೆರ್ನೇನಿ ಹಾಗೂ ರವಿ ಯಲಮಂಚಿಲಿ ಅವರ ಮನೆ ಮೇಲೂ ದಾಳಿ ಆಗಿದೆ. ಸದ್ಯ ಶೋಧ ಕಾರ್ಯ ಮುಂದುವರಿದಿದ್ದು, ಮಹತ್ವದ ದಾಖಲೆಗಳು ಸಿಗಲಿವೆಯೇ ಎಂಬುದನ್ನು ಕಾದು ನೋಡಬೇಕಿದೆ.

ಸುಕುಮಾರ್ ಅವರು ನಿರ್ದೇಶಕರಾಗಿ ಫೇಮಸ್ ಆಗಿದ್ದಾರೆ. ಇದರ ಜೊತೆಗೆ ಅವರು ನಿರ್ಮಾಣ ಸಂಸ್ಥೆಯನ್ನೂ ಹೊಂದಿದ್ದಾರೆ. ಇದಕ್ಕೆ ‘ಸುಕುಮಾರ್ ರೈಟಿಂಗ್ಸ್’ ಎಂದು ಹೆಸರು ಇಟ್ಟಿದ್ದಾರೆ. ಅನೇಕ ನಿರ್ಮಾಣ ಸಂಸ್ಥೆಗಳ ಜೊತೆ ಕೈ ಜೋಡಿಸಿ ಇವರು ಸಿನಿಮಾ ನಿರ್ಮಾಣ ಮಾಡುತ್ತಾರೆ. ವರುಣ್ ತೇಜ್ ಮುಂದಿನ ಸಿನಿಮಾ ‘ವಿರೂಪಾಕ್ಷ’ಕ್ಕೆ ಸುಕುಮಾರ್ ಬಂಡವಾಳ ಹೂಡಿದ್ದಾರೆ. ಈ ಚಿತ್ರ ಏಪ್ರಿಲ್ 21ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ರಿಲೀಸ್​ಗೆ ಕೆಲವೇ ದಿನ ಬಾಕಿ ಇರುವಾಗ ಐಟಿ ರೇಡ್​​ ನಡೆದಿದೆ.

ಇದನ್ನೂ ಓದಿ: Pushpa 2: ಪುಷ್ಪ 2 ಈ ವರ್ಷ ಬಿಡುಗಡೆ ಅನುಮಾನ, ಮರು ಚಿತ್ರೀಕರಣ ಮಾಡಲಿರುವ ಸುಕುಮಾರ್?

ಸದ್ಯ ಶೋಧಕಾರ್ಯ ಮುಂದುವರಿದಿದೆ. ಐಟಿ ದಾಳಿ ವೇಳೆ ಯಾವುದಾದರೂ ಮಹತ್ವದ ದಾಖಲೆ ಸಿಕ್ಕಿದೆಯೇ ಎನ್ನುವ ವಿಚಾರ ಇನ್ನಷ್ಟೇ ಅಧಿಕೃತ ಆಗಬೇಕಿದೆ. ಮೈತ್ರಿ ಮೂವೀ ಮೇಕರ್ಸ್​ ‘ಪುಷ್ಪ 2’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ದೊಡ್ಡ ಬಜೆಟ್​ನಲ್ಲಿ ಸಿನಿಮಾ ಸಿದ್ಧ ಆಗುತ್ತಿದೆ. ಇತ್ತೀಚೆಗಷ್ಟೇ ಸಿನಿಮಾ ಶೂಟಿಂಗ್ ಆರಂಭ ಆಗಿತ್ತು. ಈ ಮಧ್ಯೆ ನಿರ್ಮಾಪಕರಿಗೆ ಐಟಿ ದಾಳಿಯ ಬಿಸಿ ತಟ್ಟಿದೆ.

ಐಟಿ ರೇಡ್​ಗೆ ಕಾರಣ ಏನು?

ಸುಕುಮಾರ್ ಹಾಗೂ ಮೈತ್ರಿ ಮೂವೀ ಮೇಕರ್ಸ್​ ಮೇಲೆ ದಾಳಿ ನಡೆಯಲು ಪ್ರಮುಖ ಕಾರಣ ಇದೆ. ಇವರು ಜಿಎಸ್​​ಟಿ ಪಾವತಿಯಲ್ಲಿ ವಂಚಿಸಿದ್ದಾರೆ ಎಂಬ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಐಟಿ ರೇಡ್ ಆಗಿದೆ ಎನ್ನಲಾಗಿದೆ. ‘ಪುಷ್ಪ’ ಸಿನಿಮಾ 300 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಇದರಿಂದ ನಿರ್ಮಾಪಕರು ದೊಡ್ಡ ಲಾಭ ಕಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಕಾಂಗ್ರೆಸ್​ಗೆ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿ ಮಾತ್ರ ಗೊತ್ತು: ಪಾಟೀಲ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ನನ್ನದೇನೂ ಉನ್ನತ ಹುದ್ದೆಯಲ್ಲ, ವೈಯಕ್ತಿಕವಾಗಿ ಯಾವ ಲಾಭವೂ ಇಲ್ಲ: ರಾಯರೆಡ್ಡಿ
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್