AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಸಿನಿಮಾ ನಿರ್ದೇಶಕ, ನಿರ್ಮಾಪಕರಿಗೆ ಶಾಕ್​; ಮನೆ, ಕಚೇರಿ ಮೇಲೆ ಐಟಿ ದಾಳಿ

ಸದ್ಯ ಶೋಧಕಾರ್ಯ ಮುಂದುವರಿದಿದೆ. ಐಟಿ ದಾಳಿ ವೇಳೆ ಯಾವುದಾದರೂ ಮಹತ್ವದ ದಾಖಲೆ ಸಿಕ್ಕಿದೆಯೇ ಎನ್ನುವ ವಿಚಾರ ಇನ್ನಷ್ಟೇ ಅಧಿಕೃತ ಆಗಬೇಕಿದೆ.

‘ಪುಷ್ಪ’ ಸಿನಿಮಾ ನಿರ್ದೇಶಕ, ನಿರ್ಮಾಪಕರಿಗೆ ಶಾಕ್​; ಮನೆ, ಕಚೇರಿ ಮೇಲೆ ಐಟಿ ದಾಳಿ
ಸುಕುಮಾರ್
ರಾಜೇಶ್ ದುಗ್ಗುಮನೆ
|

Updated on: Apr 19, 2023 | 1:46 PM

Share

‘ಪುಷ್ಪ’ ಸಿನಿಮಾ ನಿರ್ದೇಶಕ ಸುಕುಮಾರ್ (Sukumar) ಹಾಗೂ ನಿರ್ಮಾಣ ಸಂಸ್ಥೆ ಮೈತ್ರಿ ಮೂವೀ ಮೇಕರ್ಸ್ ಮೇಲೆ ಐಟಿ ಇಲಾಖೆ ದಾಳಿ ಮಾಡಿದೆ. ಇಂದು (ಏಪ್ರಿಲ್ 19) ಮುಂಜಾನೆಯೇ ಐಟಿ ಅಧಿಕಾರಿಗಳು ಪ್ರತ್ಯೇಕ ತಂಡ ಮಾಡಿಕೊಂಡು ಹೈದರಾಬಾದ್ ನಗರದ ವಿವಿಧ ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಸುಕುಮಾರ್​ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಶೋಧ ಮಾಡಲಾಗಿದೆ. ‘ಮೈತ್ರಿ ಮೂವೀ ಮೇಕರ್ಸ್​’ (Mythri Movie Makers ) ನಿರ್ಮಾಪಕರಾದ ನವೀನ್ ಯೆರ್ನೇನಿ ಹಾಗೂ ರವಿ ಯಲಮಂಚಿಲಿ ಅವರ ಮನೆ ಮೇಲೂ ದಾಳಿ ಆಗಿದೆ. ಸದ್ಯ ಶೋಧ ಕಾರ್ಯ ಮುಂದುವರಿದಿದ್ದು, ಮಹತ್ವದ ದಾಖಲೆಗಳು ಸಿಗಲಿವೆಯೇ ಎಂಬುದನ್ನು ಕಾದು ನೋಡಬೇಕಿದೆ.

ಸುಕುಮಾರ್ ಅವರು ನಿರ್ದೇಶಕರಾಗಿ ಫೇಮಸ್ ಆಗಿದ್ದಾರೆ. ಇದರ ಜೊತೆಗೆ ಅವರು ನಿರ್ಮಾಣ ಸಂಸ್ಥೆಯನ್ನೂ ಹೊಂದಿದ್ದಾರೆ. ಇದಕ್ಕೆ ‘ಸುಕುಮಾರ್ ರೈಟಿಂಗ್ಸ್’ ಎಂದು ಹೆಸರು ಇಟ್ಟಿದ್ದಾರೆ. ಅನೇಕ ನಿರ್ಮಾಣ ಸಂಸ್ಥೆಗಳ ಜೊತೆ ಕೈ ಜೋಡಿಸಿ ಇವರು ಸಿನಿಮಾ ನಿರ್ಮಾಣ ಮಾಡುತ್ತಾರೆ. ವರುಣ್ ತೇಜ್ ಮುಂದಿನ ಸಿನಿಮಾ ‘ವಿರೂಪಾಕ್ಷ’ಕ್ಕೆ ಸುಕುಮಾರ್ ಬಂಡವಾಳ ಹೂಡಿದ್ದಾರೆ. ಈ ಚಿತ್ರ ಏಪ್ರಿಲ್ 21ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ರಿಲೀಸ್​ಗೆ ಕೆಲವೇ ದಿನ ಬಾಕಿ ಇರುವಾಗ ಐಟಿ ರೇಡ್​​ ನಡೆದಿದೆ.

ಇದನ್ನೂ ಓದಿ: Pushpa 2: ಪುಷ್ಪ 2 ಈ ವರ್ಷ ಬಿಡುಗಡೆ ಅನುಮಾನ, ಮರು ಚಿತ್ರೀಕರಣ ಮಾಡಲಿರುವ ಸುಕುಮಾರ್?

ಸದ್ಯ ಶೋಧಕಾರ್ಯ ಮುಂದುವರಿದಿದೆ. ಐಟಿ ದಾಳಿ ವೇಳೆ ಯಾವುದಾದರೂ ಮಹತ್ವದ ದಾಖಲೆ ಸಿಕ್ಕಿದೆಯೇ ಎನ್ನುವ ವಿಚಾರ ಇನ್ನಷ್ಟೇ ಅಧಿಕೃತ ಆಗಬೇಕಿದೆ. ಮೈತ್ರಿ ಮೂವೀ ಮೇಕರ್ಸ್​ ‘ಪುಷ್ಪ 2’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ದೊಡ್ಡ ಬಜೆಟ್​ನಲ್ಲಿ ಸಿನಿಮಾ ಸಿದ್ಧ ಆಗುತ್ತಿದೆ. ಇತ್ತೀಚೆಗಷ್ಟೇ ಸಿನಿಮಾ ಶೂಟಿಂಗ್ ಆರಂಭ ಆಗಿತ್ತು. ಈ ಮಧ್ಯೆ ನಿರ್ಮಾಪಕರಿಗೆ ಐಟಿ ದಾಳಿಯ ಬಿಸಿ ತಟ್ಟಿದೆ.

ಐಟಿ ರೇಡ್​ಗೆ ಕಾರಣ ಏನು?

ಸುಕುಮಾರ್ ಹಾಗೂ ಮೈತ್ರಿ ಮೂವೀ ಮೇಕರ್ಸ್​ ಮೇಲೆ ದಾಳಿ ನಡೆಯಲು ಪ್ರಮುಖ ಕಾರಣ ಇದೆ. ಇವರು ಜಿಎಸ್​​ಟಿ ಪಾವತಿಯಲ್ಲಿ ವಂಚಿಸಿದ್ದಾರೆ ಎಂಬ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಐಟಿ ರೇಡ್ ಆಗಿದೆ ಎನ್ನಲಾಗಿದೆ. ‘ಪುಷ್ಪ’ ಸಿನಿಮಾ 300 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಇದರಿಂದ ನಿರ್ಮಾಪಕರು ದೊಡ್ಡ ಲಾಭ ಕಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ