Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾದಲ್ಲಿ ಮಿಸ್ ಆಗಿದೆ ಒಂದು ಪ್ರಮುಖ ವಿಚಾರ; ಆ ದೃಶ್ಯ ಯಾಕಿಲ್ಲ?

ವಿಶೇಷ ಸಾಂಗ್ ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಶೂಟ್ ಮಾಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

‘ಸಲಾರ್’ ಸಿನಿಮಾದಲ್ಲಿ ಮಿಸ್ ಆಗಿದೆ ಒಂದು ಪ್ರಮುಖ ವಿಚಾರ; ಆ ದೃಶ್ಯ ಯಾಕಿಲ್ಲ?
ಸಲಾರ್
Follow us
ರಾಜೇಶ್ ದುಗ್ಗುಮನೆ
|

Updated on: Dec 25, 2023 | 11:55 AM

‘ಸಲಾರ್’ ಸಿನಿಮಾ (Salaar Movie) ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಕೇವಲ ಮೂರು ದಿನಕ್ಕೆ 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಅನಾಯಾಸವಾಗಿ 1,000 ಕೋಟಿ ರೂಪಾಯಿ ಗಳಿಕೆ  ಮಾಡಲಿದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ಈ ಸಿನಿಮಾದಲ್ಲಿ ಒಂದು ವಿಶೇಷ ಐಟಂ ಸಾಂಗ್ ಇತ್ತು. ಆದರೆ, ಇದನ್ನು ಕಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಎರಡನೇ ಪಾರ್ಟ್​ನಲ್ಲಿ ಈ ಸಾಂಗ್ ಇರಲಿದೆಯೇ ಎನ್ನುವ ಕುತೂಹಲ ಮೂಡಿದೆ.

‘ಕೆಜಿಎಫ್’ ಚಿತ್ರದಲ್ಲಿ ವಿಶೇಷ ಸಾಂಗ್ ಇತ್ತು. ಈ ಸಾಂಗ್​ನಿಂದ ಸಿನಿಮಾಗೆ ಮೈಲೇಜ್ ಸಿಕ್ಕಿತ್ತು. ಅದೇ ರೀತಿ ‘ಸಲಾರ್’ ಸಿನಿಮಾದಲ್ಲಿಯೂ ಐಟಂ ಸಾಂಗ್​ ಇದೆ ಎಂದು ಹೇಳಲಾಗಿತ್ತು. ಸಿಮ್ರಾತ್ ಕೌರ್ ಅವರು ಐಟಂ ಸಾಂಗ್​ನಲ್ಲಿ ಇದ್ದರು. ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಶೂಟ್ ಮಾಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಈ ಸಿನಿಮಾ ನಿಜಕ್ಕೂ ಶೂಟ್ ಮಾಡಲಾಗಿತ್ತೋ ಅಥವಾ ಶೂಟ್ ಮಾಡಿಲ್ಲವೋ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಒಂದೊಮ್ಮೆ ನಿಜಕ್ಕೂ ಶೂಟ್ ಮಾಡಿದ್ದರೆ ಅದನ್ನು ಎರಡನೇ ಪಾರ್ಟ್​ನಲ್ಲಿ ಸೇರಿಸಲಾಗುತ್ತೆದೆಯೋ ಎನ್ನುವ ಅನುಮಾನ ಮೂಡಿದೆ. ‘ಶೌರ್ಯಂಗ ಪರ್ವಮ್’ ಎಂದು ಎರಡನೇ ಪಾರ್ಟ್​ಗೆ ಹೆಸರು ಇಡಲಾಗಿದೆ. ಈ ಸಿನಿಮಾ ಶೂಟಿಂಗ್ ಸದ್ಯಕ್ಕಂತೂ ಆರಂಭ ಆಗುವುದಿಲ್ಲ.

ಇದನ್ನೂ ಓದಿ: ‘ಪ್ರತಾಪ್​ ಬೆನ್ನಿಗೆ ನಮ್ರತಾ ಚೂರಿ ಹಾಕಿದ್ರು’; ಬಿಗ್ ಬಾಸ್ ಪ್ರೋಮೋ ನೋಡಿ ಫ್ಯಾನ್ಸ್ ಶಾಕ್

ಡಿಸೆಂಬರ್ 22ರಂದು ‘ಸಲಾರ್’ ಸಿನಿಮಾ ರಿಲೀಸ್ ಆಯಿತು. ಮೊದಲ ದಿನ ಈ ಚಿತ್ರ ಭಾರತದಲ್ಲಿ 90 ಕೋಟಿ ರೂಪಾಯಿ ಹಾಗೂ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 178 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಎರಡನೇ ದಿನ 56 ಕೋಟಿ ರೂಪಾಯಿ ಹಾಗೂ ಮೂರನೇ ದಿನ 62 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ಭಾರತದ ಗಳಿಕೆ 209 ಕೋಟಿ ರೂಪಾಯಿ ಹಾಗೂ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ