AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾದಲ್ಲಿ ಮಿಸ್ ಆಗಿದೆ ಒಂದು ಪ್ರಮುಖ ವಿಚಾರ; ಆ ದೃಶ್ಯ ಯಾಕಿಲ್ಲ?

ವಿಶೇಷ ಸಾಂಗ್ ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಶೂಟ್ ಮಾಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

‘ಸಲಾರ್’ ಸಿನಿಮಾದಲ್ಲಿ ಮಿಸ್ ಆಗಿದೆ ಒಂದು ಪ್ರಮುಖ ವಿಚಾರ; ಆ ದೃಶ್ಯ ಯಾಕಿಲ್ಲ?
ಸಲಾರ್
ರಾಜೇಶ್ ದುಗ್ಗುಮನೆ
|

Updated on: Dec 25, 2023 | 11:55 AM

Share

‘ಸಲಾರ್’ ಸಿನಿಮಾ (Salaar Movie) ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಕೇವಲ ಮೂರು ದಿನಕ್ಕೆ 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಅನಾಯಾಸವಾಗಿ 1,000 ಕೋಟಿ ರೂಪಾಯಿ ಗಳಿಕೆ  ಮಾಡಲಿದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ಈ ಸಿನಿಮಾದಲ್ಲಿ ಒಂದು ವಿಶೇಷ ಐಟಂ ಸಾಂಗ್ ಇತ್ತು. ಆದರೆ, ಇದನ್ನು ಕಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಎರಡನೇ ಪಾರ್ಟ್​ನಲ್ಲಿ ಈ ಸಾಂಗ್ ಇರಲಿದೆಯೇ ಎನ್ನುವ ಕುತೂಹಲ ಮೂಡಿದೆ.

‘ಕೆಜಿಎಫ್’ ಚಿತ್ರದಲ್ಲಿ ವಿಶೇಷ ಸಾಂಗ್ ಇತ್ತು. ಈ ಸಾಂಗ್​ನಿಂದ ಸಿನಿಮಾಗೆ ಮೈಲೇಜ್ ಸಿಕ್ಕಿತ್ತು. ಅದೇ ರೀತಿ ‘ಸಲಾರ್’ ಸಿನಿಮಾದಲ್ಲಿಯೂ ಐಟಂ ಸಾಂಗ್​ ಇದೆ ಎಂದು ಹೇಳಲಾಗಿತ್ತು. ಸಿಮ್ರಾತ್ ಕೌರ್ ಅವರು ಐಟಂ ಸಾಂಗ್​ನಲ್ಲಿ ಇದ್ದರು. ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಶೂಟ್ ಮಾಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಈ ಸಿನಿಮಾ ನಿಜಕ್ಕೂ ಶೂಟ್ ಮಾಡಲಾಗಿತ್ತೋ ಅಥವಾ ಶೂಟ್ ಮಾಡಿಲ್ಲವೋ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಒಂದೊಮ್ಮೆ ನಿಜಕ್ಕೂ ಶೂಟ್ ಮಾಡಿದ್ದರೆ ಅದನ್ನು ಎರಡನೇ ಪಾರ್ಟ್​ನಲ್ಲಿ ಸೇರಿಸಲಾಗುತ್ತೆದೆಯೋ ಎನ್ನುವ ಅನುಮಾನ ಮೂಡಿದೆ. ‘ಶೌರ್ಯಂಗ ಪರ್ವಮ್’ ಎಂದು ಎರಡನೇ ಪಾರ್ಟ್​ಗೆ ಹೆಸರು ಇಡಲಾಗಿದೆ. ಈ ಸಿನಿಮಾ ಶೂಟಿಂಗ್ ಸದ್ಯಕ್ಕಂತೂ ಆರಂಭ ಆಗುವುದಿಲ್ಲ.

ಇದನ್ನೂ ಓದಿ: ‘ಪ್ರತಾಪ್​ ಬೆನ್ನಿಗೆ ನಮ್ರತಾ ಚೂರಿ ಹಾಕಿದ್ರು’; ಬಿಗ್ ಬಾಸ್ ಪ್ರೋಮೋ ನೋಡಿ ಫ್ಯಾನ್ಸ್ ಶಾಕ್

ಡಿಸೆಂಬರ್ 22ರಂದು ‘ಸಲಾರ್’ ಸಿನಿಮಾ ರಿಲೀಸ್ ಆಯಿತು. ಮೊದಲ ದಿನ ಈ ಚಿತ್ರ ಭಾರತದಲ್ಲಿ 90 ಕೋಟಿ ರೂಪಾಯಿ ಹಾಗೂ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 178 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಎರಡನೇ ದಿನ 56 ಕೋಟಿ ರೂಪಾಯಿ ಹಾಗೂ ಮೂರನೇ ದಿನ 62 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ಭಾರತದ ಗಳಿಕೆ 209 ಕೋಟಿ ರೂಪಾಯಿ ಹಾಗೂ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ