AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾದಲ್ಲಿ ಮಿಸ್ ಆಗಿದೆ ಒಂದು ಪ್ರಮುಖ ವಿಚಾರ; ಆ ದೃಶ್ಯ ಯಾಕಿಲ್ಲ?

ವಿಶೇಷ ಸಾಂಗ್ ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಶೂಟ್ ಮಾಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

‘ಸಲಾರ್’ ಸಿನಿಮಾದಲ್ಲಿ ಮಿಸ್ ಆಗಿದೆ ಒಂದು ಪ್ರಮುಖ ವಿಚಾರ; ಆ ದೃಶ್ಯ ಯಾಕಿಲ್ಲ?
ಸಲಾರ್
ರಾಜೇಶ್ ದುಗ್ಗುಮನೆ
|

Updated on: Dec 25, 2023 | 11:55 AM

Share

‘ಸಲಾರ್’ ಸಿನಿಮಾ (Salaar Movie) ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಕೇವಲ ಮೂರು ದಿನಕ್ಕೆ 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಅನಾಯಾಸವಾಗಿ 1,000 ಕೋಟಿ ರೂಪಾಯಿ ಗಳಿಕೆ  ಮಾಡಲಿದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ಈ ಸಿನಿಮಾದಲ್ಲಿ ಒಂದು ವಿಶೇಷ ಐಟಂ ಸಾಂಗ್ ಇತ್ತು. ಆದರೆ, ಇದನ್ನು ಕಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಎರಡನೇ ಪಾರ್ಟ್​ನಲ್ಲಿ ಈ ಸಾಂಗ್ ಇರಲಿದೆಯೇ ಎನ್ನುವ ಕುತೂಹಲ ಮೂಡಿದೆ.

‘ಕೆಜಿಎಫ್’ ಚಿತ್ರದಲ್ಲಿ ವಿಶೇಷ ಸಾಂಗ್ ಇತ್ತು. ಈ ಸಾಂಗ್​ನಿಂದ ಸಿನಿಮಾಗೆ ಮೈಲೇಜ್ ಸಿಕ್ಕಿತ್ತು. ಅದೇ ರೀತಿ ‘ಸಲಾರ್’ ಸಿನಿಮಾದಲ್ಲಿಯೂ ಐಟಂ ಸಾಂಗ್​ ಇದೆ ಎಂದು ಹೇಳಲಾಗಿತ್ತು. ಸಿಮ್ರಾತ್ ಕೌರ್ ಅವರು ಐಟಂ ಸಾಂಗ್​ನಲ್ಲಿ ಇದ್ದರು. ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಶೂಟ್ ಮಾಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಈ ಸಿನಿಮಾ ನಿಜಕ್ಕೂ ಶೂಟ್ ಮಾಡಲಾಗಿತ್ತೋ ಅಥವಾ ಶೂಟ್ ಮಾಡಿಲ್ಲವೋ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಒಂದೊಮ್ಮೆ ನಿಜಕ್ಕೂ ಶೂಟ್ ಮಾಡಿದ್ದರೆ ಅದನ್ನು ಎರಡನೇ ಪಾರ್ಟ್​ನಲ್ಲಿ ಸೇರಿಸಲಾಗುತ್ತೆದೆಯೋ ಎನ್ನುವ ಅನುಮಾನ ಮೂಡಿದೆ. ‘ಶೌರ್ಯಂಗ ಪರ್ವಮ್’ ಎಂದು ಎರಡನೇ ಪಾರ್ಟ್​ಗೆ ಹೆಸರು ಇಡಲಾಗಿದೆ. ಈ ಸಿನಿಮಾ ಶೂಟಿಂಗ್ ಸದ್ಯಕ್ಕಂತೂ ಆರಂಭ ಆಗುವುದಿಲ್ಲ.

ಇದನ್ನೂ ಓದಿ: ‘ಪ್ರತಾಪ್​ ಬೆನ್ನಿಗೆ ನಮ್ರತಾ ಚೂರಿ ಹಾಕಿದ್ರು’; ಬಿಗ್ ಬಾಸ್ ಪ್ರೋಮೋ ನೋಡಿ ಫ್ಯಾನ್ಸ್ ಶಾಕ್

ಡಿಸೆಂಬರ್ 22ರಂದು ‘ಸಲಾರ್’ ಸಿನಿಮಾ ರಿಲೀಸ್ ಆಯಿತು. ಮೊದಲ ದಿನ ಈ ಚಿತ್ರ ಭಾರತದಲ್ಲಿ 90 ಕೋಟಿ ರೂಪಾಯಿ ಹಾಗೂ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 178 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಎರಡನೇ ದಿನ 56 ಕೋಟಿ ರೂಪಾಯಿ ಹಾಗೂ ಮೂರನೇ ದಿನ 62 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ಭಾರತದ ಗಳಿಕೆ 209 ಕೋಟಿ ರೂಪಾಯಿ ಹಾಗೂ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು