AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್’ ಸಿನಿಮಾದಲ್ಲಿ ಮಿಸ್ ಆಗಿದೆ ಒಂದು ಪ್ರಮುಖ ವಿಚಾರ; ಆ ದೃಶ್ಯ ಯಾಕಿಲ್ಲ?

ವಿಶೇಷ ಸಾಂಗ್ ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಶೂಟ್ ಮಾಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

‘ಸಲಾರ್’ ಸಿನಿಮಾದಲ್ಲಿ ಮಿಸ್ ಆಗಿದೆ ಒಂದು ಪ್ರಮುಖ ವಿಚಾರ; ಆ ದೃಶ್ಯ ಯಾಕಿಲ್ಲ?
ಸಲಾರ್
ರಾಜೇಶ್ ದುಗ್ಗುಮನೆ
|

Updated on: Dec 25, 2023 | 11:55 AM

Share

‘ಸಲಾರ್’ ಸಿನಿಮಾ (Salaar Movie) ಸೂಪರ್ ಹಿಟ್ ಆಗಿದೆ. ಈ ಸಿನಿಮಾ ಕೇವಲ ಮೂರು ದಿನಕ್ಕೆ 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಅನಾಯಾಸವಾಗಿ 1,000 ಕೋಟಿ ರೂಪಾಯಿ ಗಳಿಕೆ  ಮಾಡಲಿದೆ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ಈ ಸಿನಿಮಾದಲ್ಲಿ ಒಂದು ವಿಶೇಷ ಐಟಂ ಸಾಂಗ್ ಇತ್ತು. ಆದರೆ, ಇದನ್ನು ಕಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಎರಡನೇ ಪಾರ್ಟ್​ನಲ್ಲಿ ಈ ಸಾಂಗ್ ಇರಲಿದೆಯೇ ಎನ್ನುವ ಕುತೂಹಲ ಮೂಡಿದೆ.

‘ಕೆಜಿಎಫ್’ ಚಿತ್ರದಲ್ಲಿ ವಿಶೇಷ ಸಾಂಗ್ ಇತ್ತು. ಈ ಸಾಂಗ್​ನಿಂದ ಸಿನಿಮಾಗೆ ಮೈಲೇಜ್ ಸಿಕ್ಕಿತ್ತು. ಅದೇ ರೀತಿ ‘ಸಲಾರ್’ ಸಿನಿಮಾದಲ್ಲಿಯೂ ಐಟಂ ಸಾಂಗ್​ ಇದೆ ಎಂದು ಹೇಳಲಾಗಿತ್ತು. ಸಿಮ್ರಾತ್ ಕೌರ್ ಅವರು ಐಟಂ ಸಾಂಗ್​ನಲ್ಲಿ ಇದ್ದರು. ಹೈದರಾಬಾದ್​ನ ರಾಮೋಜಿ ಫಿಲ್ಮ್​ ಸಿಟಿಯಲ್ಲಿ ಶೂಟ್ ಮಾಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ತಂಡದಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಈ ಸಿನಿಮಾ ನಿಜಕ್ಕೂ ಶೂಟ್ ಮಾಡಲಾಗಿತ್ತೋ ಅಥವಾ ಶೂಟ್ ಮಾಡಿಲ್ಲವೋ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಒಂದೊಮ್ಮೆ ನಿಜಕ್ಕೂ ಶೂಟ್ ಮಾಡಿದ್ದರೆ ಅದನ್ನು ಎರಡನೇ ಪಾರ್ಟ್​ನಲ್ಲಿ ಸೇರಿಸಲಾಗುತ್ತೆದೆಯೋ ಎನ್ನುವ ಅನುಮಾನ ಮೂಡಿದೆ. ‘ಶೌರ್ಯಂಗ ಪರ್ವಮ್’ ಎಂದು ಎರಡನೇ ಪಾರ್ಟ್​ಗೆ ಹೆಸರು ಇಡಲಾಗಿದೆ. ಈ ಸಿನಿಮಾ ಶೂಟಿಂಗ್ ಸದ್ಯಕ್ಕಂತೂ ಆರಂಭ ಆಗುವುದಿಲ್ಲ.

ಇದನ್ನೂ ಓದಿ: ‘ಪ್ರತಾಪ್​ ಬೆನ್ನಿಗೆ ನಮ್ರತಾ ಚೂರಿ ಹಾಕಿದ್ರು’; ಬಿಗ್ ಬಾಸ್ ಪ್ರೋಮೋ ನೋಡಿ ಫ್ಯಾನ್ಸ್ ಶಾಕ್

ಡಿಸೆಂಬರ್ 22ರಂದು ‘ಸಲಾರ್’ ಸಿನಿಮಾ ರಿಲೀಸ್ ಆಯಿತು. ಮೊದಲ ದಿನ ಈ ಚಿತ್ರ ಭಾರತದಲ್ಲಿ 90 ಕೋಟಿ ರೂಪಾಯಿ ಹಾಗೂ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 178 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದಲ್ಲಿ ಎರಡನೇ ದಿನ 56 ಕೋಟಿ ರೂಪಾಯಿ ಹಾಗೂ ಮೂರನೇ ದಿನ 62 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ಭಾರತದ ಗಳಿಕೆ 209 ಕೋಟಿ ರೂಪಾಯಿ ಹಾಗೂ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ