AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವಲೀನ್​​​ ಫರ್ನಾಂಡಿಸ್​ ಜತೆ ಲಿವ್​ ಇನ್​ನಲ್ಲಿರೋಕೆ 175 ಕೋಟಿ ಮೌಲ್ಯದ ಫ್ಲ್ಯಾಟ್​ ಖರೀದಿಸಿದ ಬಾಯ್​ಫ್ರೆಂಡ್​

ಇತ್ತೀಚೆಗೆ ಜಾಕ್ವಲೀನ್ ಗೆಳೆಯನ ಜತೆಗೂಡಿ ಮುಂಬೈನಲ್ಲಿ ದುಬಾರಿ ಮೊತ್ತದ ಬಂಗಲೆ ಒಂದನ್ನು ಖರೀದಿ ಮಾಡಿದ್ದರು. ಇದರ ಬೆಲೆ 175 ಕೋಟಿ ರೂಪಾಯಿ ಎನ್ನಲಾಗಿದೆ.

ಜಾಕ್ವಲೀನ್​​​ ಫರ್ನಾಂಡಿಸ್​ ಜತೆ ಲಿವ್​ ಇನ್​ನಲ್ಲಿರೋಕೆ 175 ಕೋಟಿ ಮೌಲ್ಯದ ಫ್ಲ್ಯಾಟ್​ ಖರೀದಿಸಿದ ಬಾಯ್​ಫ್ರೆಂಡ್​
ಜಾಕ್ವಲೀನ್​​ ಫರ್ನಾಂಡಿಸ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 17, 2021 | 4:14 PM

Share

ಬಾಲಿವುಡ್​ನ ಸಾಕಷ್ಟು ನಟಿಯರು ಪ್ರೀತಿಯಲ್ಲಿದ್ದರೂ ಅದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳೋಕೆ ಇಷ್ಟಪಡುವುದಿಲ್ಲ. ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಆ ವಿಚಾರವನ್ನು ಅವರು ಅಲ್ಲಗಳೆಯುತ್ತಾರೆ. ಬಾಲಿವುಡ್​ ನಟಿ ಜಾಕ್ವಲೀನ್ ಫರ್ನಾಂಡಿಸ್​ ಕೂಡ ತಮ್ಮ ರಿಲೇಶನ್​ಶಿಪ್ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಈಗ ಅವರು ಲಿವ್​ ಇನ್​ ರಿಲೇಶನ್​ಶಿಪ್​ನಲ್ಲಿರೋಕೆ ಬಾಯ್​ಫ್ರೆಂಡ್​ ಹಣದಿಂದ ಮುಂಬೈನಲ್ಲಿ ಫ್ಲ್ಯಾಟ್​ ಒಂದನ್ನು ಖರೀದಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಜಾಕ್ವಲೀನ್ ಗೆಳೆಯನ ಜತೆಗೂಡಿ ಮುಂಬೈನಲ್ಲಿ ದುಬಾರಿ ಮೊತ್ತದ ಬಂಗಲೆ ಒಂದನ್ನು ಖರೀದಿ ಮಾಡಿದ್ದರು. ಇದರ ಬೆಲೆ 175 ಕೋಟಿ ರೂಪಾಯಿ ಎನ್ನಲಾಗಿದೆ. ಅವರು ಶೀಘ್ರವೇ ಈ ಬಂಗಲೆಗೆ ಶಿಫ್ಟ್​ ಆಗಲಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಜೋರಾಗಿ ಹರಿದಾಡುತ್ತಿದೆ.

ಜಾಕ್ವಲೀನ್​ ಸಾಕಷ್ಟು ವರ್ಷಗಳಿಂದ ರಿಲೇಶನ್​ಶಿಪ್​ನಲ್ಲಿದ್ದಾರೆ. ಆದರೆ, ಆ ಬಗ್ಗೆ ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ಲಿವ್ ಇನ್​ ರಿಲೇಶನ್​ಶಿಪ್​ನಲ್ಲಿ ಇರೋಕೆ ಅವರು ಈ ಫ್ಲ್ಯಾಟ್​ ಖರೀದಿಸಿದ್ದಾರೆ ಎನ್ನುವ ಮಾತು ಜೋರಾಗಿದೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಮಾಹಿತಿ ಸಿಕ್ಕಿಲ್ಲ.

ಜಾಕ್ವಲೀನ್ ಹೌಸ್​ಫುಲ್​ ಸರಣಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಹೌಸ್​ಫುಲ್​ ಸರಣಿಯ ಮೂರು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ರಾಧೆ: ಯುವರ್ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದಲ್ಲಿ ವಿಶೇಷ ಹಾಡಿಗೆ ಇವರು ಹೆಜ್ಜೆ ಹಾಕಿದ್ದರು. ಸದ್ಯ, ನಾಲ್ಕೈದು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿಯಾಗಿದ್ದಾರೆ.

ಕೊವಿಡ್​ ಎರಡನೇ ಅಲೆಯ ಲಾಕ್​ಡೌನ್​ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಮನೆ ಖರೀದಿಸಿದ್ದಾರೆ. ಅಜಯ್​ ದೇವಗನ್​-ಕಾಜೋಲ್ ದಂಪತಿ​, ಅಮಿತಾಭ್​ ಬಚ್ಚನ್​, ಅರ್ಜುನ್​ ಕಪೂರ್ ಮುಂಬೈನಲ್ಲಿ ದುಬಾರಿ ಬೆಲೆಯ ಫ್ಲ್ಯಾಟ್​ ಖರೀದಿಸಿದ್ದಾರೆ. ಈಗ ಈ ಸಾಲಿಗೆ ಜಾಕ್ವಲೀನ್​ ಹೊಸ ಸೇರ್ಪಡೆ.

ಇದನ್ನೂ ಓದಿ: 20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?