AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವಲೀನ್​​​ ಫರ್ನಾಂಡಿಸ್​ ಜತೆ ಲಿವ್​ ಇನ್​ನಲ್ಲಿರೋಕೆ 175 ಕೋಟಿ ಮೌಲ್ಯದ ಫ್ಲ್ಯಾಟ್​ ಖರೀದಿಸಿದ ಬಾಯ್​ಫ್ರೆಂಡ್​

ಇತ್ತೀಚೆಗೆ ಜಾಕ್ವಲೀನ್ ಗೆಳೆಯನ ಜತೆಗೂಡಿ ಮುಂಬೈನಲ್ಲಿ ದುಬಾರಿ ಮೊತ್ತದ ಬಂಗಲೆ ಒಂದನ್ನು ಖರೀದಿ ಮಾಡಿದ್ದರು. ಇದರ ಬೆಲೆ 175 ಕೋಟಿ ರೂಪಾಯಿ ಎನ್ನಲಾಗಿದೆ.

ಜಾಕ್ವಲೀನ್​​​ ಫರ್ನಾಂಡಿಸ್​ ಜತೆ ಲಿವ್​ ಇನ್​ನಲ್ಲಿರೋಕೆ 175 ಕೋಟಿ ಮೌಲ್ಯದ ಫ್ಲ್ಯಾಟ್​ ಖರೀದಿಸಿದ ಬಾಯ್​ಫ್ರೆಂಡ್​
ಜಾಕ್ವಲೀನ್​​ ಫರ್ನಾಂಡಿಸ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 17, 2021 | 4:14 PM

Share

ಬಾಲಿವುಡ್​ನ ಸಾಕಷ್ಟು ನಟಿಯರು ಪ್ರೀತಿಯಲ್ಲಿದ್ದರೂ ಅದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳೋಕೆ ಇಷ್ಟಪಡುವುದಿಲ್ಲ. ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಆ ವಿಚಾರವನ್ನು ಅವರು ಅಲ್ಲಗಳೆಯುತ್ತಾರೆ. ಬಾಲಿವುಡ್​ ನಟಿ ಜಾಕ್ವಲೀನ್ ಫರ್ನಾಂಡಿಸ್​ ಕೂಡ ತಮ್ಮ ರಿಲೇಶನ್​ಶಿಪ್ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಈಗ ಅವರು ಲಿವ್​ ಇನ್​ ರಿಲೇಶನ್​ಶಿಪ್​ನಲ್ಲಿರೋಕೆ ಬಾಯ್​ಫ್ರೆಂಡ್​ ಹಣದಿಂದ ಮುಂಬೈನಲ್ಲಿ ಫ್ಲ್ಯಾಟ್​ ಒಂದನ್ನು ಖರೀದಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಜಾಕ್ವಲೀನ್ ಗೆಳೆಯನ ಜತೆಗೂಡಿ ಮುಂಬೈನಲ್ಲಿ ದುಬಾರಿ ಮೊತ್ತದ ಬಂಗಲೆ ಒಂದನ್ನು ಖರೀದಿ ಮಾಡಿದ್ದರು. ಇದರ ಬೆಲೆ 175 ಕೋಟಿ ರೂಪಾಯಿ ಎನ್ನಲಾಗಿದೆ. ಅವರು ಶೀಘ್ರವೇ ಈ ಬಂಗಲೆಗೆ ಶಿಫ್ಟ್​ ಆಗಲಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಜೋರಾಗಿ ಹರಿದಾಡುತ್ತಿದೆ.

ಜಾಕ್ವಲೀನ್​ ಸಾಕಷ್ಟು ವರ್ಷಗಳಿಂದ ರಿಲೇಶನ್​ಶಿಪ್​ನಲ್ಲಿದ್ದಾರೆ. ಆದರೆ, ಆ ಬಗ್ಗೆ ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ಲಿವ್ ಇನ್​ ರಿಲೇಶನ್​ಶಿಪ್​ನಲ್ಲಿ ಇರೋಕೆ ಅವರು ಈ ಫ್ಲ್ಯಾಟ್​ ಖರೀದಿಸಿದ್ದಾರೆ ಎನ್ನುವ ಮಾತು ಜೋರಾಗಿದೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಮಾಹಿತಿ ಸಿಕ್ಕಿಲ್ಲ.

ಜಾಕ್ವಲೀನ್ ಹೌಸ್​ಫುಲ್​ ಸರಣಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಹೌಸ್​ಫುಲ್​ ಸರಣಿಯ ಮೂರು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ರಾಧೆ: ಯುವರ್ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದಲ್ಲಿ ವಿಶೇಷ ಹಾಡಿಗೆ ಇವರು ಹೆಜ್ಜೆ ಹಾಕಿದ್ದರು. ಸದ್ಯ, ನಾಲ್ಕೈದು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿಯಾಗಿದ್ದಾರೆ.

ಕೊವಿಡ್​ ಎರಡನೇ ಅಲೆಯ ಲಾಕ್​ಡೌನ್​ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಮನೆ ಖರೀದಿಸಿದ್ದಾರೆ. ಅಜಯ್​ ದೇವಗನ್​-ಕಾಜೋಲ್ ದಂಪತಿ​, ಅಮಿತಾಭ್​ ಬಚ್ಚನ್​, ಅರ್ಜುನ್​ ಕಪೂರ್ ಮುಂಬೈನಲ್ಲಿ ದುಬಾರಿ ಬೆಲೆಯ ಫ್ಲ್ಯಾಟ್​ ಖರೀದಿಸಿದ್ದಾರೆ. ಈಗ ಈ ಸಾಲಿಗೆ ಜಾಕ್ವಲೀನ್​ ಹೊಸ ಸೇರ್ಪಡೆ.

ಇದನ್ನೂ ಓದಿ: 20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ