AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವಲೀನ್​​​ ಫರ್ನಾಂಡಿಸ್​ ಜತೆ ಲಿವ್​ ಇನ್​ನಲ್ಲಿರೋಕೆ 175 ಕೋಟಿ ಮೌಲ್ಯದ ಫ್ಲ್ಯಾಟ್​ ಖರೀದಿಸಿದ ಬಾಯ್​ಫ್ರೆಂಡ್​

ಇತ್ತೀಚೆಗೆ ಜಾಕ್ವಲೀನ್ ಗೆಳೆಯನ ಜತೆಗೂಡಿ ಮುಂಬೈನಲ್ಲಿ ದುಬಾರಿ ಮೊತ್ತದ ಬಂಗಲೆ ಒಂದನ್ನು ಖರೀದಿ ಮಾಡಿದ್ದರು. ಇದರ ಬೆಲೆ 175 ಕೋಟಿ ರೂಪಾಯಿ ಎನ್ನಲಾಗಿದೆ.

ಜಾಕ್ವಲೀನ್​​​ ಫರ್ನಾಂಡಿಸ್​ ಜತೆ ಲಿವ್​ ಇನ್​ನಲ್ಲಿರೋಕೆ 175 ಕೋಟಿ ಮೌಲ್ಯದ ಫ್ಲ್ಯಾಟ್​ ಖರೀದಿಸಿದ ಬಾಯ್​ಫ್ರೆಂಡ್​
ಜಾಕ್ವಲೀನ್​​ ಫರ್ನಾಂಡಿಸ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 17, 2021 | 4:14 PM

Share

ಬಾಲಿವುಡ್​ನ ಸಾಕಷ್ಟು ನಟಿಯರು ಪ್ರೀತಿಯಲ್ಲಿದ್ದರೂ ಅದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳೋಕೆ ಇಷ್ಟಪಡುವುದಿಲ್ಲ. ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಆ ವಿಚಾರವನ್ನು ಅವರು ಅಲ್ಲಗಳೆಯುತ್ತಾರೆ. ಬಾಲಿವುಡ್​ ನಟಿ ಜಾಕ್ವಲೀನ್ ಫರ್ನಾಂಡಿಸ್​ ಕೂಡ ತಮ್ಮ ರಿಲೇಶನ್​ಶಿಪ್ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಈಗ ಅವರು ಲಿವ್​ ಇನ್​ ರಿಲೇಶನ್​ಶಿಪ್​ನಲ್ಲಿರೋಕೆ ಬಾಯ್​ಫ್ರೆಂಡ್​ ಹಣದಿಂದ ಮುಂಬೈನಲ್ಲಿ ಫ್ಲ್ಯಾಟ್​ ಒಂದನ್ನು ಖರೀದಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಜಾಕ್ವಲೀನ್ ಗೆಳೆಯನ ಜತೆಗೂಡಿ ಮುಂಬೈನಲ್ಲಿ ದುಬಾರಿ ಮೊತ್ತದ ಬಂಗಲೆ ಒಂದನ್ನು ಖರೀದಿ ಮಾಡಿದ್ದರು. ಇದರ ಬೆಲೆ 175 ಕೋಟಿ ರೂಪಾಯಿ ಎನ್ನಲಾಗಿದೆ. ಅವರು ಶೀಘ್ರವೇ ಈ ಬಂಗಲೆಗೆ ಶಿಫ್ಟ್​ ಆಗಲಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಜೋರಾಗಿ ಹರಿದಾಡುತ್ತಿದೆ.

ಜಾಕ್ವಲೀನ್​ ಸಾಕಷ್ಟು ವರ್ಷಗಳಿಂದ ರಿಲೇಶನ್​ಶಿಪ್​ನಲ್ಲಿದ್ದಾರೆ. ಆದರೆ, ಆ ಬಗ್ಗೆ ಅವರು ಎಲ್ಲಿಯೂ ಹೇಳಿಕೊಂಡಿಲ್ಲ. ಲಿವ್ ಇನ್​ ರಿಲೇಶನ್​ಶಿಪ್​ನಲ್ಲಿ ಇರೋಕೆ ಅವರು ಈ ಫ್ಲ್ಯಾಟ್​ ಖರೀದಿಸಿದ್ದಾರೆ ಎನ್ನುವ ಮಾತು ಜೋರಾಗಿದೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಮಾಹಿತಿ ಸಿಕ್ಕಿಲ್ಲ.

ಜಾಕ್ವಲೀನ್ ಹೌಸ್​ಫುಲ್​ ಸರಣಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಹೌಸ್​ಫುಲ್​ ಸರಣಿಯ ಮೂರು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ‘ರಾಧೆ: ಯುವರ್ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದಲ್ಲಿ ವಿಶೇಷ ಹಾಡಿಗೆ ಇವರು ಹೆಜ್ಜೆ ಹಾಕಿದ್ದರು. ಸದ್ಯ, ನಾಲ್ಕೈದು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿಯಾಗಿದ್ದಾರೆ.

ಕೊವಿಡ್​ ಎರಡನೇ ಅಲೆಯ ಲಾಕ್​ಡೌನ್​ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಮನೆ ಖರೀದಿಸಿದ್ದಾರೆ. ಅಜಯ್​ ದೇವಗನ್​-ಕಾಜೋಲ್ ದಂಪತಿ​, ಅಮಿತಾಭ್​ ಬಚ್ಚನ್​, ಅರ್ಜುನ್​ ಕಪೂರ್ ಮುಂಬೈನಲ್ಲಿ ದುಬಾರಿ ಬೆಲೆಯ ಫ್ಲ್ಯಾಟ್​ ಖರೀದಿಸಿದ್ದಾರೆ. ಈಗ ಈ ಸಾಲಿಗೆ ಜಾಕ್ವಲೀನ್​ ಹೊಸ ಸೇರ್ಪಡೆ.

ಇದನ್ನೂ ಓದಿ: 20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!