AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಸುಕೇಶ್ ಚಂದ್ರಶೇಖರ್ ಹಲವು ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತ ಜಾಕ್ವೆಲಿನ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದನು. ಈ ಕಾರಣಕ್ಕೆ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದರು.  

ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್
ಸುಕೇಶ್-ಜಾಕ್ವೆಲಿನ್
TV9 Web
| Edited By: |

Updated on: Dec 13, 2023 | 11:20 AM

Share

200 ಕೋಟಿ ರೂಪಾಯಿ ಹಗರಣದ ಮುಖ್ಯ ರುವಾರಿ ಸುಕೇಶ್ ಚಂದ್ರಶೇಖರ್ (Sukesh Chandrashekhar)​ ​ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಬೆನ್ನು ಬಿಡುವಂತೆ ಕಾಣುತ್ತಿಲ್ಲ. ಆತ ಪದೇ ಪದೇ ಜಾಕ್ವೆಲಿನ್ ಅವರನ್ನು ಕಾಡುತ್ತಿದ್ದಾರೆ. ಈಗ ಅವರು ಮತ್ತೆ ಜಾಕ್ವೆಲಿನ್ ಫರ್ನಾಂಡಿಸ್​ಗೆ ಪತ್ರ ಬರೆದಿದ್ದಾನೆ. ಕ್ರಿಸ್​ಮಸ್ ಸಂದರ್ಭದಲ್ಲಿ ನಟಿಗೆ ಪ್ರೀತಿಯ ಕರೆಯೋಲೆ ಕಳುಹಿಸಿದ್ದಾನೆ. ಇದರಲ್ಲಿ ಅವರು ‘ಲವ್​’, ‘ಬೇಬಿ’ ಎಂದೆಲ್ಲ ಬರೆದುಕೊಂಡಿದ್ದಾರೆ. ಸದ್ಯ ಈ ಲೆಟರ್ ವೈರಲ್ ಆಗುತ್ತಿದೆ.

‘ಬೇಬಿ ನನಗೆ ನಿನ್ನ ಬಗ್ಗೆ ಖುಷಿ ಇದೆ. ನೀನು ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ DIAFA ಅವಾರ್ಡ್ ನೀಡಲಾಗಿದೆ. ಇದಕ್ಕೆ ನಿನಗೆ ಅಭಿನಂದನೆ. ನನಗೆ ಎಷ್ಟು ಖುಷಿ ಆಗಿದೆ ಎಂದು ಹೇಳಲು ಸಾಧ್ಯವೇ ಇಲ್ಲ. ನೀನು ನಿಜವಾಗಲೂ ಗ್ರೇಟ್ ಪರ್ಫಾರ್ಮರ್. ನೀನು ಬಿಳಿ ಗೌನ್​ನಲ್ಲಿ ಅದ್ಭುತವಾಗಿ ಕಾಣಿಸುತ್ತೀಯ’ ಎಂದು ಸುಕೇಶ್ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

‘ರೆಡ್ ಅರೇಬಿಕ್ ಡ್ರೆಸ್ ಹಾಗೂ ಪಿಂಕ್ ಬಣ್ಣದ ಸೀರೆಯಲ್ಲಿ ನೀನು ಸಖತ್ ಆಗಿ ಕಾಣಿಸುತ್ತೀಯ. ನೀನು ನನ್ನ ಹಾರ್ಟ್ ಕದ್ದಿದ್ದೀಯಾ. ಈ ಜಗತ್ತಿನಲ್ಲಿರುವ ಏಕೈಕ ಜೀವಂತ ಏಂಜಲ್ ನೀನು. ಸೋ ಬ್ಯೂಟಿಫುಲ್ ಸೋ ಸ್ಟನ್ನಿಂಗ್. ಜಸ್ಟ್ ಲುಕಿಂಗ್ ಲೈಕ್ ಎ ವಾವ್’ ಎಂದು ಆತ ಬರೆದಿದ್ದಾನೆ

ಸುಕೇಶ್ ಚಂದ್ರಶೇಖರ್ ಹಲವು ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತ ಜಾಕ್ವೆಲಿನ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದನು. ಈ ಕಾರಣಕ್ಕೆ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದರು.

ಇದನ್ನೂ ಓದಿ: Jacqueline Fernandez: ವಿವಾದಗಳನ್ನು ಮರೆತು ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್​ ಅವರಿಗೆ ಈ ಪ್ರಕರಣದಿಂದ ಸಾಕಷ್ಟು ಹಿನ್ನಡೆ ಆಗಿದೆ. ಅವರಿಗೆ ವಿದೇಶಕ್ಕೆ ತೆರಳುವುದರ ಮೇಲೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ, ಅವರು ಹಲವು ಸಮಯ ವಿದೇಶಕ್ಕೆ ತೆರಳಲು ಸಾಧ್ಯವಾಗಿಲ್ಲ. ಆ ಬಳಿಕ ಅವರು ಕೋರ್ಟ್​ನಿಂದ ಒಪ್ಪಿಗೆ ಪಡೆದು ವಿದೇಶಕ್ಕೆ ಹೋದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್