AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ

200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಮುಂದುವರಿದಿದೆ. ದೆಹಲಿ ನ್ಯಾಯಾಲಯವು ಜಾಕ್ವೆಲಿನ್ ಮತ್ತು ಸುಕೇಶ್ ಚಂದ್ರಶೇಖರ್ ಸೇರಿದಂತೆ 15 ಜನರ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಆದೇಶಿಸಿದೆ. 'ತಾನು ಬಲಿಪಶು' ಎಂಬ ನಟಿಯ ವಾದವನ್ನು ಕೋರ್ಟ್ ತಿರಸ್ಕರಿಸಿದೆ.

ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ
ಜಾಕ್ವೆಲಿನ್
ರಾಜೇಶ್ ದುಗ್ಗುಮನೆ
|

Updated on:Jun 01, 2026 | 2:55 PM

Share

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಮೇ 30ರಂದು ದೆಹಲಿ ನ್ಯಾಯಾಲಯವು ಜಾಕ್ವೆಲಿನ್, ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಇತರ 15 ಜನರ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಆದೇಶಿಸಿದೆ. ಇದರೊಂದಿಗೆ ನಟಿ ಕೂಡ ವಿಚಾರಣೆಗೆ ಹಾಜರಾಬೇಕಾಗದ ಪರಿಸ್ಥಿತಿ ಎದುರಾಗಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು, ‘ಎಲ್ಲಾ ಆರೋಪಿಗಳ ವಿರುದ್ಧ ಬಲವಾದ ಅನುಮಾನ ಮೂಡುವಂತಹ ಸಾಕ್ಷಿಗಳು ತನಿಖಾ ವರದಿಯಲ್ಲಿ ಲಭ್ಯವಿವೆ’ ಎಂದು ತಿಳಿಸಿದ್ದು, ಜೂನ್ 3 ರಂದು ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿದ್ದಾರೆ.

‘ನಾನು ಬಲಿಪಶು’ ಎಂದಿದ್ದ ಜಾಕ್ವೆಲಿನ್; ವಾದ ತಳ್ಳಿಹಾಕಿದ ಕೋರ್ಟ್

ತಾನು ಯಾವುದೇ ತಪ್ಪು ಮಾಡಿಲ್ಲ, ಈ ಪ್ರಕರಣದಲ್ಲಿ ತನ್ನನ್ನು ಬಲಿಪಶು ಮಾಡಲಾಗುತ್ತಿದೆ ಎಂಬ ಜಾಕ್ವೆಲಿನ್ ಅವರ ಮುಖ್ಯ ವಾದವನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ವಿಚಾರಣೆ ನಡೆಸಬಾರದು ಎಂಬ ಜಾಕ್ವೆಲಿನ್ ಕೋರಿಕೆಯನ್ನು ಕೋರ್ಟ್ ಒಪ್ಪಿಲ್ಲ.

ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ನಿರಂತರ ಸಂಪರ್ಕದಲ್ಲಿದ್ದರು. ಸುಕೇಶ್‌ನ ಅಪರಾಧ ಹಿನ್ನೆಲೆಯ ಬಗ್ಗೆ ಸಂಪೂರ್ಣ ಮಾಹಿತಿ ಇದ್ದರೂ ಜಾಕ್ವೆಲಿನ್ ಆತನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಐಷಾರಾಮಿ ಗಿಫ್ಟ್‌ಗಳನ್ನು ಪಡೆದಿದ್ದಾರೆ ಎನ್ನಲಾಗಿದೆ. ಸುಕೇಶ್‌ನಿಂದ ತಮ್ಮ ಸಹೋದರನಿಗೆ ದೊಡ್ಡ ಮೊತ್ತದ ಹಣಕಾಸಿನ ನೆರವು ಮತ್ತು ಪೋಷಕರಿಗೆ ಐಷಾರಾಮಿ ಕಾರನ್ನು ಉಡುಗರೆಯಾಗಿ ಪಡೆದಿದ್ದರು. ‘ಅಪರಾಧದ ಮೂಲಕ ಗಳಿಸಿದ ಹಣದ ನೇರ ಲಾಭವನ್ನು ಜಾಕ್ವೆಲಿನ್ ಪಡೆದುಕೊಂಡಿರುವುದು ಸ್ಪಷ್ಟವಾಗಿದೆ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಪ್ರಕರಣದಲ್ಲಿ ತಾವು ಅಪ್ರೂವರ್ ಆಗೋದಾಗಿ ಏಪ್ರಿಲ್ 16ರಂದು ಜಾಕ್ವೆಲಿನ್ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಕೋರ್ಟ್ ಅನುಮತಿ ನೀಡಿದೆ. ಜಾರಿ ನಿರ್ದೇಶನಾಲಯ (ED) ಈ ಅರ್ಜಿಯನ್ನು ತೀವ್ರವಾಗಿ ವಿರೋಧಿಸಿತ್ತು. ಮುಖ್ಯ ಆರೋಪಿಯೊಂದಿಗೆ ನೇರ ಸಂಪರ್ಕದಲ್ಲಿದ್ದ ಜಾಕ್ವೆಲಿನ್‌ಗೆ ಇಂತಹ ಅವಕಾಶ ನೀಡಬಾರದು ಎಂದು ಇಡಿ ವಾದಿಸಿತ್ತು.

ಇದನ್ನೂ ಓದಿ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ; ಅಪ್ರೂವರ್ ಆಗುವ ಮನವಿಗೆ ಇಡಿ ತೀವ್ರ ವಿರೋಧ

ಈ ಹಗರಣದ ಸೂತ್ರಧಾರ ಸುಕೇಶ್ ಚಂದ್ರಶೇಖರ್‌. ಈತನ್ನು ದೆಹಲಿ ಪೊಲೀಸರು 2017 ರಲ್ಲಿ ಮತ್ತು ಇಡಿ 2021 ರಲ್ಲಿ ಬಂಧಿಸಿದ್ದರು. ಸುಕೇಶ್ ಜೈಲಿನಲ್ಲಿದ್ದೂಕೊಂಡೇ ತಂತ್ರಜ್ಞಾನದ ಸಹಾಯದಿಂದ ಪ್ರಧಾನಿ ಕಚೇರಿ , ಗೃಹ ಸಚಿವಾಲಯ ಹಾಗೂ ಕಾನೂನು ಸಚಿವಾಲಯದ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಕರೆಗಳನ್ನು ಮಾಡಿದ್ದನು. ಈ ಮೂಲಕ ಉದ್ಯಮಿ ಪತ್ನಿ ಅದಿತಿ ಸಿಂಗ್ ಎಂಬುವವರನ್ನು ಹೆದರಿಸಿ ಸುಮಾರು 200 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಸುಲಿಗೆ ಮಾಡಿದ್ದನು. ಇದೇ ಹಣದಲ್ಲಿ ಕೋಟ್ಯಂತರ ರೂಪಾಯಿಯನ್ನು ಜಾಕ್ವೆಲಿನ್ ಮತ್ತು ಅವರ ಕುಟುಂಬದವರ ಮೇಲೆ ಖರ್ಚು ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:53 pm, Mon, 1 June 26

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ