AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಆರೋಪಿ

Jacqueline Fernandez: ಸುಕೇಶ್ ಚಂದ್ರಶೇಖರ್ ಕೇವಲ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಮಾತ್ರವಲ್ಲದೇ, ಸಾರಾ ಅಲಿಖಾನ್, ಜಾಹ್ನವಿ ಕಪೂರ್ ಗೂ ಗಿಫ್ಟ್ ಗಳನ್ನು ನೀಡಿದ್ದಾನೆ.

Jacqueline Fernandez: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಆರೋಪಿ
Jacqueline Fernandez
S Chandramohan
| Updated By: Digi Tech Desk|

Updated on:Aug 17, 2022 | 5:22 PM

Share

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ ಈಗ ಬರೋಬ್ಬರಿ 215 ಕೋಟಿ ರೂಪಾಯಿ ಹಣ ವಸೂಲಿ, ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಇ.ಡಿ. ಅಧಿಕಾರಿಗಳು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ರನ್ನು ಆರೋಪಿಯನ್ನಾಗಿಸಿ ಇಂದು ದೆಹಲಿಯ ಇ.ಡಿ. ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಾರೆ. ವಂಚಕ ಸುಕೇಶ್ ಚಂದ್ರಶೇಖರ್ ಸ್ನೇಹ ಮಾಡಿದ ತಪ್ಪಿಗೆ ಬಾಲಿವುಡ್‌ ನಟಿಗೆ ಈಗ ಕೋರ್ಟ್ ಕಟಕಟೆಯಲ್ಲಿ ನಿಲ್ಲಬೇಕಾದ ಸ್ಥಿತಿ ಎದುರಾಗಿದೆ. ಜಾಕ್ವೆಲಿನ್ ಫರ್ನಾಂಡೀಸ್‌ ಇತ್ತೀಚೆಗೆ ಬಿಡುಗಡೆಯಾದ ಕನ್ನಡದ ವಿಕ್ರಾಂತ್ ರೋಣ ಸಿನಿಮಾದಲ್ಲಿ ಕೂಡ ನಟಿಸಿದ್ದರು. ಅಲ್ಲದೆ ರಾ ರಾ ರುಕ್ಕಮ್ಮ ಹಾಡಿಗೆ ಹೆಜ್ಜೆ ಹಾಕಿ ಮಿಂಚಿದ್ದರು.

ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರ್ ಬರೋಬ್ಬರಿ 215 ಕೋಟಿ ರೂಪಾಯಿ ಹಣವನ್ನು ಜೈಲಿನಲ್ಲಿರುವ ಉದ್ಯಮಿ ಖೈದಿಯನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿ ಉದ್ಯಮಿ ಪತ್ನಿಯನ್ನು ನಂಬಿಸಿ ವಸೂಲಿ ಮಾಡಿದ್ದ. ಬಳಿಕ ಉದ್ಯಮಿ ಪತ್ನಿಗೆ ತಾನು ಮೋಸ ಹೋಗಿರುವುದು ಗೊತ್ತಾಯಿತು. ಈ 215 ಕೋಟಿ ರೂಪಾಯಿ ಹಣದಲ್ಲಿ ಹತ್ತು ಕೋಟಿ ರೂಪಾಯಿ ಹಣವನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಗಿಫ್ಟ್ ನೀಡಿದ್ದ.

ಈಗ ಜಾರಿ ನಿರ್ದೇಶನಾಲಯ ಜಾಕ್ವೆಲಿನ್ ಫರ್ನಾಂಡೀಸ್ ರನ್ನು ಕೂಡ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದೆ. ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಕೇಶ್ ಚಂದ್ರಶೇಖರ್ ವಂಚನೆ ಮಾಡಿ ಹಣ ಗಳಿಸಿದ್ದಾನೆ ಎಂಬುದು ಗೊತ್ತಿತ್ತು ಎಂದು ಇ.ಡಿ. ಹೇಳಿದೆ. ಇದರಿಂದ ಸುಕೇಶ್ ಚಂದ್ರಶೇಖರ್ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಕೂಡ ಆರೋಪಿಯನ್ನಾಗಿ ಮಾಡಲು ಇ.ಡಿ. ನಿರ್ಧರಿಸಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಜಾಕ್ವೆಲಿನ್ ಫರ್ನಾಂಡೀಸ್‌ಗೆ ಲಕ್ಸುರಿ ಬಿಎಂಡಬ್ಲ್ಯು ಕಾರ್ ಅನ್ನು ಗಿಫ್ಟ್ ಆಗಿ ಸುಕೇಶ್ ಚಂದ್ರಶೇಖರ್ ನೀಡಿದ್ದ. ಡೈಮೆಂಡ್ ಬ್ರಾಸಲೆಟ್‌, ಫ್ರಾಂಕ್ ಮುಲ್ಲರ್ ಲಕ್ಸುರಿ ವಾಚ್‌, ದುಬಾರಿ ಬೆಲೆಬಾಳುವ ಗುಸ್ಸಿ, ಚಾನಲ್‌ಬ್ಯಾಗ್‌ಗಳನ್ನು ಗಿಫ್ಟ್​ಗಳನ್ನು ನೀಡಿದ್ದರು. ಜೊತೆಗೆ ಕುದುರೆಯೊಂದನ್ನು ಗಿಫ್ಟ್ ಆಗಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಖೇಶ್ ಚಂದ್ರಶೇಖರ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕೆಲ ತಿಂಗಳ ಹಿಂದೆ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಕೇಶ್ ಚಂದ್ರಶೇಖರ್ ಮುತ್ತು ಕೊಡುತ್ತಿರುವ ಪೋಟೋಗಳು ಲೀಕ್ ಆಗಿದ್ದವು. ಬಳಿಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೂ ನೋಟೀಸ್ ನೀಡಿ ವಿಚಾರಣೆಗೆ ಕರೆದು ವಿಚಾರಣೆ ನಡೆಸಿದ್ದರು. ಇ.ಡಿ. ವಿಚಾರಣೆ ವೇಳೆ, ಜಾಕ್ವೆಲಿನ್ ಫರ್ನಾಂಡೀಸ್‌, ಸುಕೇಶ್ ಚಂದ್ರಶೇಖರ್ ವಂಚನೆಗೂ ತನಗೂ ಸಂಬಂಧವಿಲ್ಲ. ಈತನಿಗೆ ವಂಚನೆಯ ಹಿನ್ನಲೆ ಇದೆ ಎಂಬುದೇ ಗೊತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದಳು. ಸುಕೇಶ್ ಚಂದ್ರಶೇಖರ್ ಕೇವಲ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಮಾತ್ರವಲ್ಲದೇ, ಸಾರಾ ಅಲಿಖಾನ್, ಜಾಹ್ನವಿ ಕಪೂರ್ ಗೂ ಗಿಫ್ಟ್ ಗಳನ್ನು ನೀಡಿದ್ದಾನೆ.

ದೆಹಲಿಯ ತಿಹಾರ್ ಜೈಲಿನಲ್ಲಿದ್ದುಕೊಂಡೇ ವಂಚಕ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದ ಉದ್ಯಮಿ ಮಾನವೀಂದರ್ ಸಿಂಗ್ ಪತ್ನಿ ಆದಿತಿಗೆ ಪೋನ್ ಕಾಲ್ ಗಳನ್ನು ಮಾಡಿ ತನ್ನನ್ನು ತಾನು ಕೇಂದ್ರ ಗೃಹ ಇಲಾಖೆಯ ಅಧಿಕಾರಿ, ಕಾನೂನು ಇಲಾಖೆಯ ಅಧಿಕಾರಿ ಎಂದು ಹೇಳಿಕೊಂಡು ಪತಿಯನ್ನು ಜೈಲಿನಲ್ಲಿ ಬಿಡುಗಡೆ ಮಾಡಿಸಲು ಹಣ ನೀಡಬೇಕೆಂದು ಹೇಳಿದ್ದ.

ಜೈಲಿನ ಹೊರಗೆ ಇದ್ದ ಸುಕೇಶ್ ಚಂದ್ರಶೇಖರ್ ಸಹಚರರು ಆದಿತಿಯಿಂದ ಹಣ ಪಡೆದಿದ್ದರು. ಬಳಿಕ ಆದಿತಿಗೆ ತಾನು ಮೋಸ ಹೋಗಿರುವುದಾಗಿ ಗೊತ್ತಾಗಿತ್ತು. ಬಳಿಕ ದೆಹಲಿ ಪೊಲೀಸರಿಗೆ ವಂಚನೆಯ ದೂರು ನೀಡಿದ ಬಳಿಕ ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದರು. ಬರೋಬ್ಬರಿ 215 ಕೋಟಿ ರೂಪಾಯಿ ವಸೂಲಿ ಮಾಡಿರುವುದನ್ನು ತಿಳಿದು ದೆಹಲಿ ಪೊಲೀಸರು ದಂಗಾಗಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯಕ್ಕೆ ಹೆಚ್ಚಿನ ತನಿಖೆಗಾಗಿ ವರ್ಗಾಯಿಸಿದ್ದರು.

ಇದೀಗ ಈ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಕೇಶ್ ಜೊತೆಗೆ ಜಾಕ್ವೆಲಿನ್ ಫರ್ನಾಂಡೀಸ್ ಕೂಡ ಶಾಮೀಲಾಗಿರುವ ಕಾರಣ ಇಡಿ ಬಾಲಿವುಡ್ ನಟಿಯನ್ನು ಆರೋಪಿಯನ್ನಾಗಿಸಿದೆ.

Published On - 11:28 am, Wed, 17 August 22

ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು
ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ
ಬಸ್ ಎದುರು ಹೋಗಿ ಕುಳಿತ ವ್ಯಕ್ತಿ, ಏಳೋಕೆ ರೆಡಿ ಇಲ್ಲ
ಬಸ್ ಎದುರು ಹೋಗಿ ಕುಳಿತ ವ್ಯಕ್ತಿ, ಏಳೋಕೆ ರೆಡಿ ಇಲ್ಲ