AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanush: ‘ಕರ್ಣನ್’​ ಗೆದ್ದ ಬಳಿಕ ಧನುಷ್​ ಸಂಭಾವನೆ ಏರಿಕೆ; ಖ್ಯಾತ ನಟನಿಗೆ ಈಗ ಸಿಗುತ್ತಿರುವ ಹಣ ಎಷ್ಟು?

Dhanush Remuneration: ಟಾಲಿವುಡ್​ನಲ್ಲಿ ಹಲವು ಹಿಟ್​ ಸಿನಿಮಾಗಳನ್ನು ನೀಡಿರುವ ಶೇಖರ್​ ಕಮ್ಮುಲ ಜೊತೆ ಧನುಷ್​ ಕೈ ಜೋಡಿಸುತ್ತಿರುವುದರಿಂದ ಸಹಜವಾಗಿಯೇ ಈ ಸಿನಿಮಾ ಮೇಲೆ ಹೈಪ್​ ಸೃಷ್ಟಿ ಆಗಿದೆ. ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಈ ಸಿನಿಮಾ ಮೂಡಿಬರಲಿದೆ.

Dhanush: ‘ಕರ್ಣನ್’​ ಗೆದ್ದ ಬಳಿಕ ಧನುಷ್​ ಸಂಭಾವನೆ ಏರಿಕೆ; ಖ್ಯಾತ ನಟನಿಗೆ ಈಗ ಸಿಗುತ್ತಿರುವ ಹಣ ಎಷ್ಟು?
ಧನುಷ್​
ಮದನ್​ ಕುಮಾರ್​
|

Updated on: Jun 25, 2021 | 8:09 AM

Share

ಕಾಲಿವುಡ್​ನ ಖ್ಯಾತ ನಟ ಧನುಷ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ತಮಿಳು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿರದೇ ಅವರು ಬೇರೆ ಬೇರೆ ಭಾಷೆಗಳಲ್ಲಿ ಅಭಿನಯಿಸುವ ಮೂಲಕ ದೊಡ್ಡ ಫ್ಯಾನ್​ ಫಾಲೋಯಿಂಗ್​ ಹೊಂದಿದ್ದಾರೆ. ಸದ್ಯ ಅವರ ಕೈಯಲ್ಲಿ ಹಲವು ಪ್ರಾಕೆಜ್ಟ್​ಗಳಿವೆ. ಈ ವರ್ಷ ತೆರೆಕಂಡ ‘ಕರ್ಣನ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದುಕೊಂಡಿತು. ಆ ಬಳಿಕ ಧನುಷ್ ಸಂಭಾವನೆಯಲ್ಲಿ ದೊಡ್ಡ ಮಟ್ಟದ ಏರಿಕೆ ಆಗಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

ಇಷ್ಟು ದಿನಗಳವರೆಗೆ ಪ್ರತಿ ಸಿನಿಮಾಗೆ ಧನುಷ್​ 10ರಿಂದ 15 ಕೋಟಿ ರೂ. ಪಡೆದುಕೊಳ್ಳುತ್ತಿದ್ದರು. ಆದರೆ ಹೊಸದೊಂದು ಸಿನಿಮಾಗೆ ಅವರು 50 ಕೋಟಿ ರೂ. ಡಿಮ್ಯಾಂಡ್​ ಮಾಡಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಅವರು ಸಂಭಾವನೆಯಲ್ಲಿ ಏಕಾಏಕಿ ಇಷ್ಟು ಏರಿಕೆ ಮಾಡಿಕೊಳ್ಳಲು ಕಾರಣ ಏನು? ಖ್ಯಾತ ನಿರ್ದೇಶಕ ಶೇಖರ್​ ಕಮ್ಮುಲ ಜೊತೆ ಸೇರಿ ಧನುಷ್​ ಒಂದು ಹೊಸ ಸಿನಿಮಾ ಮಾಡಲಿದ್ದಾರೆ. ಆ ಚಿತ್ರ ಮೂರು ಭಾಷೆಯಲ್ಲಿ ತಯಾರಾಗಲಿದೆ. ಹಾಗಾಗಿ ಧನುಷ್​ ಇಷ್ಟು 50 ಕೋಟಿ ರೂ. ಚಾರ್ಜ್​ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಡಿದೆ.

ಟಾಲಿವುಡ್​ನಲ್ಲಿ ಹಲವು ಹಿಟ್​ ಸಿನಿಮಾಗಳನ್ನು ನೀಡಿರುವ ಶೇಖರ್​ ಕಮ್ಮುಲ ಜೊತೆ ಧನುಷ್​ ಕೈ ಜೋಡಿಸುತ್ತಿರುವುದರಿಂದ ಸಹಜವಾಗಿಯೇ ಈ ಸಿನಿಮಾ ಮೇಲೆ ಹೈಪ್​ ಸೃಷ್ಟಿ ಆಗಿದೆ. ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಈ ಸಿನಿಮಾ ಮೂಡಿಬರಲಿದೆ. ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಅಂದಾಜು 120 ಕೋಟಿ ರೂ. ಬಜೆಟ್​ನಲ್ಲಿ ಈ ಸಿನಿಮಾ ತಯಾರಾಗಲಿದೆ ಎಂಬುದು ಕೇಳಿಬರುತ್ತಿರುವ ಮಾಹಿತಿ.

ಕಾಲಿವುಡ್​ಗೆ ಮಾತ್ರ ಸೀಮಿತವಾಗದ ಧನುಷ್​ ಅವರು ಬಾಲಿವುಡ್​ನಲ್ಲೂ ಸಿನಿಮಾ ಮಾಡಿದ್ದಾರೆ. ರಾಂಜಣಾ, ಶಮಿತಾಬ್​ ಬಳಿಕ ಈಗ ಹಿಂದಿಯಲ್ಲಿ ಅವರು ಅತರಂಗಿ ರೇ ಸಿನಿಮಾ ಮಾಡುತ್ತಿದ್ದಾರೆ. ಅದರಲ್ಲಿ ಅಕ್ಷಯ್​ ಕುಮಾರ್​ ಮತ್ತು ಸಾರಾ ಅಲಿ ಖಾನ್​ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಅಲ್ಲದೆ, ಹಾಲಿವುಡ್​ನ ದಿ ಗ್ರೇ ಮ್ಯಾನ್​ ಚಿತ್ರದಲ್ಲಿ ಧನುಷ್​​ ನಟಿಸುತ್ತಿದ್ದು, ಆ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಸದ್ಯ ತಮ್ಮ ಹಾಲಿವುಡ್​ ಚಿತ್ರದ ಶೂಟಿಂಗ್​ಗಾಗಿ ಅವರು ಅಮೆರಿಕಕ್ಕೆ ತೆರಳಿದ್ದಾರೆ. ಇದೇ ವೇಳೆ ನಟ ರಜನಿಕಾಂತ್​ ಅವರ ಆರೋಗ್ಯ ತಪಾಸಣೆ ಕೂಡ ಅಮೆರಿಕದಲ್ಲಿ ನಡೆಯುತ್ತಿದ್ದು, ಅವರಿಗೆ ಧನುಷ್​ ನೆರವಾಗುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಧನುಷ್​ ನಟನೆಯ ಕರ್ಣನ್​ ಸಿನಿಮಾ ಮೇಲೆ ಕಣ್ಣಿಟ್ಟ ಟಾಲಿವುಡ್​; ರಿಮೇಕ್​ನಲ್ಲಿ ಹೀರೋ ಯಾರು?

ರಿಲೀಸ್ ಆಯ್ತು ‘ಜಗಮೇ ತಂಧೀರಮ್’ ಟ್ರೇಲರ್​; ಸಿನಿಮಾದಿಂದ ಧನುಷ್ ಅಂತರ ಕಾಯ್ದುಕೊಂಡಿದ್ದೇಕೆ?

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ