AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhanush: ‘ಕರ್ಣನ್’​ ಗೆದ್ದ ಬಳಿಕ ಧನುಷ್​ ಸಂಭಾವನೆ ಏರಿಕೆ; ಖ್ಯಾತ ನಟನಿಗೆ ಈಗ ಸಿಗುತ್ತಿರುವ ಹಣ ಎಷ್ಟು?

Dhanush Remuneration: ಟಾಲಿವುಡ್​ನಲ್ಲಿ ಹಲವು ಹಿಟ್​ ಸಿನಿಮಾಗಳನ್ನು ನೀಡಿರುವ ಶೇಖರ್​ ಕಮ್ಮುಲ ಜೊತೆ ಧನುಷ್​ ಕೈ ಜೋಡಿಸುತ್ತಿರುವುದರಿಂದ ಸಹಜವಾಗಿಯೇ ಈ ಸಿನಿಮಾ ಮೇಲೆ ಹೈಪ್​ ಸೃಷ್ಟಿ ಆಗಿದೆ. ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಈ ಸಿನಿಮಾ ಮೂಡಿಬರಲಿದೆ.

Dhanush: ‘ಕರ್ಣನ್’​ ಗೆದ್ದ ಬಳಿಕ ಧನುಷ್​ ಸಂಭಾವನೆ ಏರಿಕೆ; ಖ್ಯಾತ ನಟನಿಗೆ ಈಗ ಸಿಗುತ್ತಿರುವ ಹಣ ಎಷ್ಟು?
ಧನುಷ್​
ಮದನ್​ ಕುಮಾರ್​
|

Updated on: Jun 25, 2021 | 8:09 AM

Share

ಕಾಲಿವುಡ್​ನ ಖ್ಯಾತ ನಟ ಧನುಷ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ತಮಿಳು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿರದೇ ಅವರು ಬೇರೆ ಬೇರೆ ಭಾಷೆಗಳಲ್ಲಿ ಅಭಿನಯಿಸುವ ಮೂಲಕ ದೊಡ್ಡ ಫ್ಯಾನ್​ ಫಾಲೋಯಿಂಗ್​ ಹೊಂದಿದ್ದಾರೆ. ಸದ್ಯ ಅವರ ಕೈಯಲ್ಲಿ ಹಲವು ಪ್ರಾಕೆಜ್ಟ್​ಗಳಿವೆ. ಈ ವರ್ಷ ತೆರೆಕಂಡ ‘ಕರ್ಣನ್​’ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆದುಕೊಂಡಿತು. ಆ ಬಳಿಕ ಧನುಷ್ ಸಂಭಾವನೆಯಲ್ಲಿ ದೊಡ್ಡ ಮಟ್ಟದ ಏರಿಕೆ ಆಗಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

ಇಷ್ಟು ದಿನಗಳವರೆಗೆ ಪ್ರತಿ ಸಿನಿಮಾಗೆ ಧನುಷ್​ 10ರಿಂದ 15 ಕೋಟಿ ರೂ. ಪಡೆದುಕೊಳ್ಳುತ್ತಿದ್ದರು. ಆದರೆ ಹೊಸದೊಂದು ಸಿನಿಮಾಗೆ ಅವರು 50 ಕೋಟಿ ರೂ. ಡಿಮ್ಯಾಂಡ್​ ಮಾಡಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಅವರು ಸಂಭಾವನೆಯಲ್ಲಿ ಏಕಾಏಕಿ ಇಷ್ಟು ಏರಿಕೆ ಮಾಡಿಕೊಳ್ಳಲು ಕಾರಣ ಏನು? ಖ್ಯಾತ ನಿರ್ದೇಶಕ ಶೇಖರ್​ ಕಮ್ಮುಲ ಜೊತೆ ಸೇರಿ ಧನುಷ್​ ಒಂದು ಹೊಸ ಸಿನಿಮಾ ಮಾಡಲಿದ್ದಾರೆ. ಆ ಚಿತ್ರ ಮೂರು ಭಾಷೆಯಲ್ಲಿ ತಯಾರಾಗಲಿದೆ. ಹಾಗಾಗಿ ಧನುಷ್​ ಇಷ್ಟು 50 ಕೋಟಿ ರೂ. ಚಾರ್ಜ್​ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಡಿದೆ.

ಟಾಲಿವುಡ್​ನಲ್ಲಿ ಹಲವು ಹಿಟ್​ ಸಿನಿಮಾಗಳನ್ನು ನೀಡಿರುವ ಶೇಖರ್​ ಕಮ್ಮುಲ ಜೊತೆ ಧನುಷ್​ ಕೈ ಜೋಡಿಸುತ್ತಿರುವುದರಿಂದ ಸಹಜವಾಗಿಯೇ ಈ ಸಿನಿಮಾ ಮೇಲೆ ಹೈಪ್​ ಸೃಷ್ಟಿ ಆಗಿದೆ. ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಈ ಸಿನಿಮಾ ಮೂಡಿಬರಲಿದೆ. ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಅಂದಾಜು 120 ಕೋಟಿ ರೂ. ಬಜೆಟ್​ನಲ್ಲಿ ಈ ಸಿನಿಮಾ ತಯಾರಾಗಲಿದೆ ಎಂಬುದು ಕೇಳಿಬರುತ್ತಿರುವ ಮಾಹಿತಿ.

ಕಾಲಿವುಡ್​ಗೆ ಮಾತ್ರ ಸೀಮಿತವಾಗದ ಧನುಷ್​ ಅವರು ಬಾಲಿವುಡ್​ನಲ್ಲೂ ಸಿನಿಮಾ ಮಾಡಿದ್ದಾರೆ. ರಾಂಜಣಾ, ಶಮಿತಾಬ್​ ಬಳಿಕ ಈಗ ಹಿಂದಿಯಲ್ಲಿ ಅವರು ಅತರಂಗಿ ರೇ ಸಿನಿಮಾ ಮಾಡುತ್ತಿದ್ದಾರೆ. ಅದರಲ್ಲಿ ಅಕ್ಷಯ್​ ಕುಮಾರ್​ ಮತ್ತು ಸಾರಾ ಅಲಿ ಖಾನ್​ ಜೊತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಅಲ್ಲದೆ, ಹಾಲಿವುಡ್​ನ ದಿ ಗ್ರೇ ಮ್ಯಾನ್​ ಚಿತ್ರದಲ್ಲಿ ಧನುಷ್​​ ನಟಿಸುತ್ತಿದ್ದು, ಆ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಸದ್ಯ ತಮ್ಮ ಹಾಲಿವುಡ್​ ಚಿತ್ರದ ಶೂಟಿಂಗ್​ಗಾಗಿ ಅವರು ಅಮೆರಿಕಕ್ಕೆ ತೆರಳಿದ್ದಾರೆ. ಇದೇ ವೇಳೆ ನಟ ರಜನಿಕಾಂತ್​ ಅವರ ಆರೋಗ್ಯ ತಪಾಸಣೆ ಕೂಡ ಅಮೆರಿಕದಲ್ಲಿ ನಡೆಯುತ್ತಿದ್ದು, ಅವರಿಗೆ ಧನುಷ್​ ನೆರವಾಗುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:

ಧನುಷ್​ ನಟನೆಯ ಕರ್ಣನ್​ ಸಿನಿಮಾ ಮೇಲೆ ಕಣ್ಣಿಟ್ಟ ಟಾಲಿವುಡ್​; ರಿಮೇಕ್​ನಲ್ಲಿ ಹೀರೋ ಯಾರು?

ರಿಲೀಸ್ ಆಯ್ತು ‘ಜಗಮೇ ತಂಧೀರಮ್’ ಟ್ರೇಲರ್​; ಸಿನಿಮಾದಿಂದ ಧನುಷ್ ಅಂತರ ಕಾಯ್ದುಕೊಂಡಿದ್ದೇಕೆ?

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ