AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್ ಆಯ್ತು ‘ಜಗಮೇ ತಂಧೀರಮ್’ ಟ್ರೇಲರ್​; ಸಿನಿಮಾದಿಂದ ಧನುಷ್ ಅಂತರ ಕಾಯ್ದುಕೊಂಡಿದ್ದೇಕೆ?

Jagame Thandhiram Trailer: ಮಧುರೈನ ಗ್ಯಾಂಗ್​ಸ್ಟರ್​ ಆಗಿ ಧನುಷ್​ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೆಲವು ಕಡೆಗಳಲ್ಲಿ ಗಂಭೀರತೆ ಪಡೆದುಕೊಂಡರೆ ಉಳಿದ ಕಡೆಗಲ್ಲಿ ವೀಕ್ಷಕರನ್ನು ನಗಿಸುತ್ತದೆ.

ರಿಲೀಸ್ ಆಯ್ತು ‘ಜಗಮೇ ತಂಧೀರಮ್’ ಟ್ರೇಲರ್​; ಸಿನಿಮಾದಿಂದ ಧನುಷ್ ಅಂತರ ಕಾಯ್ದುಕೊಂಡಿದ್ದೇಕೆ?
ಧನುಷ್
ರಾಜೇಶ್ ದುಗ್ಗುಮನೆ
| Edited By: |

Updated on: Jun 01, 2021 | 4:12 PM

Share

ನಿರ್ದೇಶನದಲ್ಲಿ ಕಾರ್ತಿಕ್​ ಸುಬ್ಬರಾಜ್​​ ಹಾಗೂ​ ನಟನೆಯಲ್ಲಿ ಧನುಷ್ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಈಗ ಇವರ ಕಾಂಬಿನೇಷನ್​ನಲ್ಲಿ ‘ಜಗಮೇ ತಂಧೀರಮ್’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾ ನೇರವಾಗಿ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್​ ಆಗುತ್ತಿದೆ. ಈಗ ಚಿತ್ರದ ಟ್ರೇಲರ್​ ರಿಲೀಸ್​ ಆಗಿದ್ದು, ಸಿನಿ ಪ್ರಿಯರಿಗೆ ಸಾಕಷ್ಟು ಮನರಂಜನೆ ನೀಡಿದೆ.

ಮಧುರೈನ ಗ್ಯಾಂಗ್​ಸ್ಟರ್​ ಆಗಿ ಧನುಷ್​ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೆಲವು ಕಡೆಗಳಲ್ಲಿ ಗಂಭೀರತೆ ಪಡೆದುಕೊಂಡರೆ ಉಳಿದ ಕಡೆಗಲ್ಲಿ ವೀಕ್ಷಕರನ್ನು ನಗಿಸುತ್ತದೆ. ಧನುಷ್​ ಮಧುರೈನಿಂದ ಲಂಡನ್​ಗೆ ತೆರಳುತ್ತಾರೆ. ಈ ಪ್ರಯಾಣವನ್ನು ಇಟ್ಟುಕೊಂಡು ಕಾರ್ತಿಕ್​ ಸುಬ್ಬರಾಜ್​ ಕಥೆ ಹೆಣೆದಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ. ‘ಗೇಮ್​ ಆಫ್​ ಥ್ರೋನ್ಸ್’​ ಖ್ಯಾತಿಯ ಜೇಮ್ಸ್​ ಕಾಸ್ಮೊ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾದ ಕೆಲ ಭಾಗವನ್ನು ತಮಿಳುನಾಡಿನಲ್ಲಿ ಶೂಟ್​ ಮಾಡಲಾಗಿದೆ. ಇನ್ನೂ ಕೆಲ ಭಾಗವನ್ನು ಲಂಡನ್​ ಹಾಗೂ ಇಂಗ್ಲೆಂಡ್​ನ ಕೆಲ ಪ್ರಮುಖ ಪ್ರದೇಶದಲ್ಲಿ ಶೂಟ್​ ಮಾಡಲಾಗಿದೆ. ಕಾರ್ತಿಕ್​​, ಧನುಷ್​ ಹಾಗೂ ನೆಟ್​ಫ್ಲಿಕ್ಸ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ.

ಜಗಮೇ ತಂಧೀರಮ್ ಸಿನಿಮಾವನ್ನು ತುಂಬಾನೇ ಕಡಿಮೆ ಸಮಯದಲ್ಲಿ ಶೂಟ್​ ಮಾಡಲಾಗಿದೆ. ಧನುಷ್​ ವೃತ್ತಿ ಜೀವನದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಸಿದ್ಧಗೊಂಡ ಚಿತ್ರ ಇದಾಗಿದೆ. ಶೂಟಿಂಗ್​ ಮುಗಿದ ನಂತರದಲ್ಲಿ ಕಾರ್ತಿಕ್​ಗೆ ಧನುಷ್​ ಧನ್ಯವಾದ ಹೇಳಿದ್ದರು.

ಜಗಮೇ ತಂಧೀರಮ್ ಸಿನಿಮಾ 2020ರ ಏಪ್ರಿಲ್​ನಲ್ಲಿ ಚಿತ್ರಮಂದಿರಗಳಲ್ಲಿ ರಿಲೀಸ್​ ಆಗಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ಮುಂದೂಡಲ್ಪಟ್ಟಿತ್ತು. ಈಗ ನೇರವಾಗಿ ಸಿನಿಮಾ ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ.

ಇನ್ನು, ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ ಎನ್ನುವ ಬಗ್ಗೆ ಘೋಷಣೆ ಆದಾಗಿನಿಂದಲೂ ಧನುಷ್​ ಚಿತ್ರದಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ಸಿನಿಮಾ ಬಗ್ಗೆ ಅಷ್ಟಾಗಿ ಪ್ರಚಾರ ಮಾಡುತ್ತಿಲ್ಲ. ಇದರಿಂದ ಚಿತ್ರಕ್ಕೆ ಕೊಂಚ ಹಿನ್ನಡೆ ಆಗಬಹುದು.

ಇದನ್ನೂ ಓದಿ: ಧನುಷ್​ ನಟನೆಯ ಕರ್ಣನ್​ ಸಿನಿಮಾ ಮೇಲೆ ಕಣ್ಣಿಟ್ಟ ಟಾಲಿವುಡ್​; ರಿಮೇಕ್​ನಲ್ಲಿ ಹೀರೋ ಯಾರು?

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ