AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್ ಆಯ್ತು ‘ಜಗಮೇ ತಂಧೀರಮ್’ ಟ್ರೇಲರ್​; ಸಿನಿಮಾದಿಂದ ಧನುಷ್ ಅಂತರ ಕಾಯ್ದುಕೊಂಡಿದ್ದೇಕೆ?

Jagame Thandhiram Trailer: ಮಧುರೈನ ಗ್ಯಾಂಗ್​ಸ್ಟರ್​ ಆಗಿ ಧನುಷ್​ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೆಲವು ಕಡೆಗಳಲ್ಲಿ ಗಂಭೀರತೆ ಪಡೆದುಕೊಂಡರೆ ಉಳಿದ ಕಡೆಗಲ್ಲಿ ವೀಕ್ಷಕರನ್ನು ನಗಿಸುತ್ತದೆ.

ರಿಲೀಸ್ ಆಯ್ತು ‘ಜಗಮೇ ತಂಧೀರಮ್’ ಟ್ರೇಲರ್​; ಸಿನಿಮಾದಿಂದ ಧನುಷ್ ಅಂತರ ಕಾಯ್ದುಕೊಂಡಿದ್ದೇಕೆ?
ಧನುಷ್
ರಾಜೇಶ್ ದುಗ್ಗುಮನೆ
| Edited By: |

Updated on: Jun 01, 2021 | 4:12 PM

Share

ನಿರ್ದೇಶನದಲ್ಲಿ ಕಾರ್ತಿಕ್​ ಸುಬ್ಬರಾಜ್​​ ಹಾಗೂ​ ನಟನೆಯಲ್ಲಿ ಧನುಷ್ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಈಗ ಇವರ ಕಾಂಬಿನೇಷನ್​ನಲ್ಲಿ ‘ಜಗಮೇ ತಂಧೀರಮ್’ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾ ನೇರವಾಗಿ ನೆಟ್​ಫ್ಲಿಕ್ಸ್​ನಲ್ಲಿ ರಿಲೀಸ್​ ಆಗುತ್ತಿದೆ. ಈಗ ಚಿತ್ರದ ಟ್ರೇಲರ್​ ರಿಲೀಸ್​ ಆಗಿದ್ದು, ಸಿನಿ ಪ್ರಿಯರಿಗೆ ಸಾಕಷ್ಟು ಮನರಂಜನೆ ನೀಡಿದೆ.

ಮಧುರೈನ ಗ್ಯಾಂಗ್​ಸ್ಟರ್​ ಆಗಿ ಧನುಷ್​ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಕೆಲವು ಕಡೆಗಳಲ್ಲಿ ಗಂಭೀರತೆ ಪಡೆದುಕೊಂಡರೆ ಉಳಿದ ಕಡೆಗಲ್ಲಿ ವೀಕ್ಷಕರನ್ನು ನಗಿಸುತ್ತದೆ. ಧನುಷ್​ ಮಧುರೈನಿಂದ ಲಂಡನ್​ಗೆ ತೆರಳುತ್ತಾರೆ. ಈ ಪ್ರಯಾಣವನ್ನು ಇಟ್ಟುಕೊಂಡು ಕಾರ್ತಿಕ್​ ಸುಬ್ಬರಾಜ್​ ಕಥೆ ಹೆಣೆದಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ. ‘ಗೇಮ್​ ಆಫ್​ ಥ್ರೋನ್ಸ್’​ ಖ್ಯಾತಿಯ ಜೇಮ್ಸ್​ ಕಾಸ್ಮೊ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾದ ಕೆಲ ಭಾಗವನ್ನು ತಮಿಳುನಾಡಿನಲ್ಲಿ ಶೂಟ್​ ಮಾಡಲಾಗಿದೆ. ಇನ್ನೂ ಕೆಲ ಭಾಗವನ್ನು ಲಂಡನ್​ ಹಾಗೂ ಇಂಗ್ಲೆಂಡ್​ನ ಕೆಲ ಪ್ರಮುಖ ಪ್ರದೇಶದಲ್ಲಿ ಶೂಟ್​ ಮಾಡಲಾಗಿದೆ. ಕಾರ್ತಿಕ್​​, ಧನುಷ್​ ಹಾಗೂ ನೆಟ್​ಫ್ಲಿಕ್ಸ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ.

ಜಗಮೇ ತಂಧೀರಮ್ ಸಿನಿಮಾವನ್ನು ತುಂಬಾನೇ ಕಡಿಮೆ ಸಮಯದಲ್ಲಿ ಶೂಟ್​ ಮಾಡಲಾಗಿದೆ. ಧನುಷ್​ ವೃತ್ತಿ ಜೀವನದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಸಿದ್ಧಗೊಂಡ ಚಿತ್ರ ಇದಾಗಿದೆ. ಶೂಟಿಂಗ್​ ಮುಗಿದ ನಂತರದಲ್ಲಿ ಕಾರ್ತಿಕ್​ಗೆ ಧನುಷ್​ ಧನ್ಯವಾದ ಹೇಳಿದ್ದರು.

ಜಗಮೇ ತಂಧೀರಮ್ ಸಿನಿಮಾ 2020ರ ಏಪ್ರಿಲ್​ನಲ್ಲಿ ಚಿತ್ರಮಂದಿರಗಳಲ್ಲಿ ರಿಲೀಸ್​ ಆಗಬೇಕಿತ್ತು. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ಮುಂದೂಡಲ್ಪಟ್ಟಿತ್ತು. ಈಗ ನೇರವಾಗಿ ಸಿನಿಮಾ ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ.

ಇನ್ನು, ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ ಎನ್ನುವ ಬಗ್ಗೆ ಘೋಷಣೆ ಆದಾಗಿನಿಂದಲೂ ಧನುಷ್​ ಚಿತ್ರದಿಂದ ಅಂತರ ಕಾಯ್ದುಕೊಂಡಿದ್ದಾರೆ. ಅವರು ಸಿನಿಮಾ ಬಗ್ಗೆ ಅಷ್ಟಾಗಿ ಪ್ರಚಾರ ಮಾಡುತ್ತಿಲ್ಲ. ಇದರಿಂದ ಚಿತ್ರಕ್ಕೆ ಕೊಂಚ ಹಿನ್ನಡೆ ಆಗಬಹುದು.

ಇದನ್ನೂ ಓದಿ: ಧನುಷ್​ ನಟನೆಯ ಕರ್ಣನ್​ ಸಿನಿಮಾ ಮೇಲೆ ಕಣ್ಣಿಟ್ಟ ಟಾಲಿವುಡ್​; ರಿಮೇಕ್​ನಲ್ಲಿ ಹೀರೋ ಯಾರು?

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!