Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಟೂರು ಖಾರಂ ಶೂಟ್ ಮುಗಿಸೋದೆ ಕಷ್ಟವಾಯ್ತು, ಸಿನಿಮಾ ನನಗೆ ಇಷ್ಟ ಆಗಿಲ್ಲ’; ಜಗಪತಿ ಬಾಬು

ಜಗಪತಿ ಬಾಬು ‘ಗುಂಟೂರು ಖಾರಂ’ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಿನಿಮಾ ಇಷ್ಟವಾಗಿಲ್ಲ ಎಂದು ನೇರವಾಗಿ ಹೇಳಿರುವ ಅವರು, ಸಿನಿಮಾ ಶೂಟ್ ಮಾಡೋದು ಕೂಡ ಕಷ್ಟವಾಯ್ತು ಎಂದು ವಿವರಿಸಿದ್ದಾರೆ.

‘ಗುಂಟೂರು ಖಾರಂ ಶೂಟ್ ಮುಗಿಸೋದೆ ಕಷ್ಟವಾಯ್ತು, ಸಿನಿಮಾ ನನಗೆ ಇಷ್ಟ ಆಗಿಲ್ಲ’; ಜಗಪತಿ ಬಾಬು
ಮಹೇಶ್ ಬಾಬು-ಜಗಪತಿ ಬಾಬು
Follow us
ರಾಜೇಶ್ ದುಗ್ಗುಮನೆ
|

Updated on: Apr 10, 2024 | 7:25 AM

ಮಹೇಶ್ ಬಾಬು (Mahesh Babu) ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಅವರದ್ದು ಗ್ರೇಟ್ ಕಾಂಬಿನೇಷನ್. ಇವರ ಕಾಂಬಿನೇಷನ್​ನಲ್ಲಿ ಈ ಮೊದಲು ಮೂಡಿ ಬಂದ ‘ಅಥಡು’ ಹಾಗೂ ‘ಖಲೇಜಾ’ ಸಿನಿಮಾಗಳು ಸೂಪರ್ ಹಿಟ್ ಆದವು. ಈ ಕಾರಣದಿಂದಲೇ ‘ಗುಂಟೂರು ಖಾರಂ’ ಸಿನಿಮಾ ಮೇಲೆ ನಿರೀಕ್ಷೆ ಇತ್ತು. ಆದರೆ, ನಿರೀಕ್ಷೆ ಹುಸಿ ಆಗಿದೆ. ಸಿನಿಮಾ ಅಂದುಕೊಂಡ ರೀತಿಯಲ್ಲಿ ಕಮಾಲ್ ಮಾಡಿಲ್ಲ. ಈ ಚಿತ್ರದ ವಿಫಲತೆಯನ್ನು ಯಾರೊಬ್ಬರೂ ನೇರವಾಗಿ ಹೇಳಿಲ್ಲ. ಆದರೆ, ಈ ಚಿತ್ರದ ವಿಲನ್ ಜಗಪತಿ ಬಾಬು ನೇರವಾಗಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಜಗಪತಿ ಬಾಬು ಹಲವು ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿದ್ದಾರೆ. ಅವರು ಎಲ್ಲಾ ವಿಚಾರಗಳನ್ನು ನೇರವಾಗಿ ಹೇಳಿಕೊಳ್ಳುತ್ತಾರೆ. ಅವರು ‘ಗುಂಟೂರು ಖಾರಂ’ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಿನಿಮಾ ಇಷ್ಟವಾಗಿಲ್ಲ ಎಂದು ನೇರವಾಗಿ ಹೇಳಿರುವ ಅವರು, ಸಿನಿಮಾ ಶೂಟ್ ಮಾಡೋದು ಕೂಡ ಕಷ್ಟವಾಯ್ತು ಎಂದು ವಿವರಿಸಿದ್ದಾರೆ.

‘ನನಗೆ ಮಹೇಶ್ ಬಾಬು ಜೊತೆ ಕೆಲಸ ಮಾಡೋದು ಎಂದರೆ ಇಷ್ಟ. ಆದರೆ, ಗುಂಟೂರು ಖಾರಂ ನನಗೆ ಖುಷಿ ನೀಡಿಲ್ಲ. ಆರಂಭದಲ್ಲಿ ಪಾತ್ರಗಳು ಸ್ಟ್ರಾಂಗ್ ಎನಿಸಿದ್ದವು. ಆದರೆ, ಬರುಬರುತ್ತಾ ಎಲ್ಲವೂ ಕಲಸುಮೇಲೋಗರ ಆಯಿತು. ಕೊನೆಯಲ್ಲಿ ಸಿನಿಮಾ ಶೂಟಿಂಗ್ ಮುಗಿಸೋದೆ ಕಷ್ಟ ಆಯಿತು. ನಾನು ಏನು ಮಾಡಬೇಕೋ ಅದೆಲ್ಲವನ್ನೂ ಮಾಡಿದ್ದೇನೆ. ಈ ರೀತಿಯ ಸಿನಿಮಾಗಳಲ್ಲಿ ಇಂಥ ಅದ್ಭುತ ಕಾಂಬಿನೇಷನ್ ಮಿಸ್ ಮಾಡಿಕೊಳ್ಳಲು ನನಗೆ ಇಷ್ಟ ಇರಲಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಅಮೆರಿಕದ ಎನ್​ಬಿಎ ಗೇಮ್​ನಲ್ಲಿ ಮಹೇಶ್ ಬಾಬು ಸಾಂಗ್; ಹೆಚ್ಚಿತು ಫ್ಯಾನ್ಸ್ ಹೆಮ್ಮೆ

ಸದಾ ರಗಡ್ ವಿಲನ್ ಆಗಿ ಕಾಣಿಸಿಕೊಳ್ಳುತ್ತಾರೆ ಜಗಪತಿ ಬಾಬು. ಆದರೆ, ಈ ಸಿನಿಮಾದಲ್ಲಿ ಅವರು ಅತೀ ಗಂಭೀರ ವಿಲನ್ ಆಗಿಯೇನು ಇರಲಿಲ್ಲ. ಅವರ ಪಾತ್ರ ಕೂಡ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರಿಲ್ಲ. ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ಈ ಚಿತ್ರ ಒಟಿಟಿಗೆ ಕಾಲಿಟ್ಟಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು