‘ಗುಂಟೂರು ಖಾರಂ ಶೂಟ್ ಮುಗಿಸೋದೆ ಕಷ್ಟವಾಯ್ತು, ಸಿನಿಮಾ ನನಗೆ ಇಷ್ಟ ಆಗಿಲ್ಲ’; ಜಗಪತಿ ಬಾಬು

ಜಗಪತಿ ಬಾಬು ‘ಗುಂಟೂರು ಖಾರಂ’ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಿನಿಮಾ ಇಷ್ಟವಾಗಿಲ್ಲ ಎಂದು ನೇರವಾಗಿ ಹೇಳಿರುವ ಅವರು, ಸಿನಿಮಾ ಶೂಟ್ ಮಾಡೋದು ಕೂಡ ಕಷ್ಟವಾಯ್ತು ಎಂದು ವಿವರಿಸಿದ್ದಾರೆ.

‘ಗುಂಟೂರು ಖಾರಂ ಶೂಟ್ ಮುಗಿಸೋದೆ ಕಷ್ಟವಾಯ್ತು, ಸಿನಿಮಾ ನನಗೆ ಇಷ್ಟ ಆಗಿಲ್ಲ’; ಜಗಪತಿ ಬಾಬು
ಮಹೇಶ್ ಬಾಬು-ಜಗಪತಿ ಬಾಬು
Follow us
|

Updated on: Apr 10, 2024 | 7:25 AM

ಮಹೇಶ್ ಬಾಬು (Mahesh Babu) ಹಾಗೂ ತ್ರಿವಿಕ್ರಂ ಶ್ರೀನಿವಾಸ್ ಅವರದ್ದು ಗ್ರೇಟ್ ಕಾಂಬಿನೇಷನ್. ಇವರ ಕಾಂಬಿನೇಷನ್​ನಲ್ಲಿ ಈ ಮೊದಲು ಮೂಡಿ ಬಂದ ‘ಅಥಡು’ ಹಾಗೂ ‘ಖಲೇಜಾ’ ಸಿನಿಮಾಗಳು ಸೂಪರ್ ಹಿಟ್ ಆದವು. ಈ ಕಾರಣದಿಂದಲೇ ‘ಗುಂಟೂರು ಖಾರಂ’ ಸಿನಿಮಾ ಮೇಲೆ ನಿರೀಕ್ಷೆ ಇತ್ತು. ಆದರೆ, ನಿರೀಕ್ಷೆ ಹುಸಿ ಆಗಿದೆ. ಸಿನಿಮಾ ಅಂದುಕೊಂಡ ರೀತಿಯಲ್ಲಿ ಕಮಾಲ್ ಮಾಡಿಲ್ಲ. ಈ ಚಿತ್ರದ ವಿಫಲತೆಯನ್ನು ಯಾರೊಬ್ಬರೂ ನೇರವಾಗಿ ಹೇಳಿಲ್ಲ. ಆದರೆ, ಈ ಚಿತ್ರದ ವಿಲನ್ ಜಗಪತಿ ಬಾಬು ನೇರವಾಗಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಜಗಪತಿ ಬಾಬು ಹಲವು ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿದ್ದಾರೆ. ಅವರು ಎಲ್ಲಾ ವಿಚಾರಗಳನ್ನು ನೇರವಾಗಿ ಹೇಳಿಕೊಳ್ಳುತ್ತಾರೆ. ಅವರು ‘ಗುಂಟೂರು ಖಾರಂ’ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಿನಿಮಾ ಇಷ್ಟವಾಗಿಲ್ಲ ಎಂದು ನೇರವಾಗಿ ಹೇಳಿರುವ ಅವರು, ಸಿನಿಮಾ ಶೂಟ್ ಮಾಡೋದು ಕೂಡ ಕಷ್ಟವಾಯ್ತು ಎಂದು ವಿವರಿಸಿದ್ದಾರೆ.

‘ನನಗೆ ಮಹೇಶ್ ಬಾಬು ಜೊತೆ ಕೆಲಸ ಮಾಡೋದು ಎಂದರೆ ಇಷ್ಟ. ಆದರೆ, ಗುಂಟೂರು ಖಾರಂ ನನಗೆ ಖುಷಿ ನೀಡಿಲ್ಲ. ಆರಂಭದಲ್ಲಿ ಪಾತ್ರಗಳು ಸ್ಟ್ರಾಂಗ್ ಎನಿಸಿದ್ದವು. ಆದರೆ, ಬರುಬರುತ್ತಾ ಎಲ್ಲವೂ ಕಲಸುಮೇಲೋಗರ ಆಯಿತು. ಕೊನೆಯಲ್ಲಿ ಸಿನಿಮಾ ಶೂಟಿಂಗ್ ಮುಗಿಸೋದೆ ಕಷ್ಟ ಆಯಿತು. ನಾನು ಏನು ಮಾಡಬೇಕೋ ಅದೆಲ್ಲವನ್ನೂ ಮಾಡಿದ್ದೇನೆ. ಈ ರೀತಿಯ ಸಿನಿಮಾಗಳಲ್ಲಿ ಇಂಥ ಅದ್ಭುತ ಕಾಂಬಿನೇಷನ್ ಮಿಸ್ ಮಾಡಿಕೊಳ್ಳಲು ನನಗೆ ಇಷ್ಟ ಇರಲಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಅಮೆರಿಕದ ಎನ್​ಬಿಎ ಗೇಮ್​ನಲ್ಲಿ ಮಹೇಶ್ ಬಾಬು ಸಾಂಗ್; ಹೆಚ್ಚಿತು ಫ್ಯಾನ್ಸ್ ಹೆಮ್ಮೆ

ಸದಾ ರಗಡ್ ವಿಲನ್ ಆಗಿ ಕಾಣಿಸಿಕೊಳ್ಳುತ್ತಾರೆ ಜಗಪತಿ ಬಾಬು. ಆದರೆ, ಈ ಸಿನಿಮಾದಲ್ಲಿ ಅವರು ಅತೀ ಗಂಭೀರ ವಿಲನ್ ಆಗಿಯೇನು ಇರಲಿಲ್ಲ. ಅವರ ಪಾತ್ರ ಕೂಡ ದೊಡ್ಡ ಮಟ್ಟದಲ್ಲಿ ಪ್ರಭಾವ ಬೀರಿಲ್ಲ. ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ಈ ಚಿತ್ರ ಒಟಿಟಿಗೆ ಕಾಲಿಟ್ಟಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...