AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ವಿಲನ್​ ಆಗಿ ಎಂಟ್ರಿ ಕೊಡೋಕೆ ರೆಡಿ ಆದ ಜಗಪತಿ ಬಾಬು; ಯಾರು ಹೀರೋ?

ಮೊದಲು ಹೀರೋ ಆಗಿದ್ದ ಜಗಪತಿ ಬಾಬು 2014ರಲ್ಲಿ ತೆರೆಕಂಡ ‘ಲೆಜೆಂಡ್​’ ಸಿನಿಮಾದಲ್ಲಿ ವಿಲನ್​ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಪಾತ್ರ ಸಾಕಷ್ಟು ಮೆಚ್ಚುಗೆ ಗಳಿಸಿಕೊಂಡಿತು. ಆ ನಂತರ ಅವರು ಹಿಂದಿರುಗಿ ನೋಡಿದ್ದೇ ಇಲ್ಲ.

ಬಾಲಿವುಡ್​ಗೆ ವಿಲನ್​ ಆಗಿ ಎಂಟ್ರಿ ಕೊಡೋಕೆ ರೆಡಿ ಆದ ಜಗಪತಿ ಬಾಬು; ಯಾರು ಹೀರೋ?
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 21, 2021 | 3:47 PM

Share

ಜಗಪತಿ ಬಾಬು ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದರೆ ಆ ಸಿನಿಮಾಗೆ ಮೈಲೇಜ್​ ಸಿಗೋದರಲ್ಲಿ ಅನುಮಾನವೇ ಬೇಡ. ಅವರಿಗೆ ಸಿಗುವ ಪಾತ್ರ ಎಷ್ಟೇ ಖಡಕ್​ ಆಗಿರಲಿ ಅದನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ವೀಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಾರೆ. ಅಷ್ಟೇ ಅಲ್ಲ, ಹೀರೋಗೆ ಸರಿಸಾಟಿಯಾಗಿ ವಿಲನ್​ ರೋಲ್​ ನಿರ್ವಹಿಸುತ್ತಾರೆ. ಅವರ ವಿಲನ್​ ಮ್ಯಾನರಿಸಂ ಎಲ್ಲರಿಗೂ ಇಷ್ಟವಾಗುತ್ತದೆ. ಈಗ ಅವರು ಬಾಲಿವುಡ್​ಗೂ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ.

ಮೊದಲು ಹೀರೋ ಆಗಿದ್ದ ಜಗಪತಿ ಬಾಬು 2014ರಲ್ಲಿ ತೆರೆಕಂಡ ‘ಲೆಜೆಂಡ್​’ ಸಿನಿಮಾದಲ್ಲಿ ವಿಲನ್​ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಪಾತ್ರ ಸಾಕಷ್ಟು ಮೆಚ್ಚುಗೆ ಗಳಿಸಿಕೊಂಡಿತು. ಆ ನಂತರ ಅವರು ಹಿಂದಿರುಗಿ ನೋಡಿದ್ದೇ ಇಲ್ಲ. ಅಲ್ಲಿಂದ ಇಲ್ಲಿವರೆಗೆ ಸಾಕಷ್ಟು ಸ್ಟಾರ್​ ಸಿನಿಮಾಗಳಿಗೆ ಅವರು ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಪೈಕಿ ಹಲವು ಸಿನಿಮಾಗಳು ಹಿಟ್​ ಆಗಿವೆ. ತೆಲುಗು ಮಾತ್ರವಲ್ಲದೆ, ತಮಿಳು ಹಾಗೂ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ ಅವರು. ಈಗ ಜಗಪತಿ ಬಾಬು ಬಾಲಿವುಡ್​ಗೆ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ಹಾಗಾದರೆ, ಯಾವುದು ಆ ಸಿನಿಮಾ? ಅದಕ್ಕೆ ಹೀರೋ ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಪುಕಾರ್​’ ಸಿನಿಮಾದಲ್ಲಿ ಜಗಪತಿ ಬಾಬು ವಿಲನ್​ ಪಾತ್ರ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಚಿತ್ರತಂಡ ಅವರನ್ನು ಸಂಪರ್ಕಿಸಿದ್ದು, ಕಥೆ ಇಷ್ಟಪಟ್ಟಿದ್ದಾರೆ. ಅಲ್ಲದೆ, ಸಿನಿಮಾ ಮಾಡೋಕೂ ಓಕೆ ಎಂದಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

‘ಲಗಾನ್​’ ಖ್ಯಾತಿಯ ಅಶುತೋಷ್​ ಗೋವಾರಿಕರ್​ ಅವರು ‘ಪುಕಾರ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಫರ್ಹಾನ್​ ಅಖ್ತರ್​ ನಾಯಕ. ಈ ಚಿತ್ರಕ್ಕೆ ಜಗಪತಿ ಬಾಬು ವಿಲನ್​. ಫರ್ಹಾನ್​ ತಂದೆ ಜಾವೇದ್​ ಅಖ್ತರ್​ ಈ ಸಿನಿಮಾಗೆ ಚಿತ್ರಕಥೆ ಬರೆಯುತ್ತಿದ್ದಾರೆ. ರಾಕುಲ್ ಪ್ರೀತ್​ ಸಿಂಗ್​​ ಚಿತ್ರದ ನಾಯಕಿ. ಫಾರೆಸ್ಟ್​ ರೇಂಜರ್​ ಆಗಿ ಫರ್ಹಾನ್​ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Kabzaa: ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಬಜೆಟ್ ಎಷ್ಟು?; ನಿರ್ದೇಶಕ ಆರ್.ಚಂದ್ರು ಹಂಚಿಕೊಂಡ್ರು ಮಾಹಿತಿ

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ