AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ವಿಲನ್​ ಆಗಿ ಎಂಟ್ರಿ ಕೊಡೋಕೆ ರೆಡಿ ಆದ ಜಗಪತಿ ಬಾಬು; ಯಾರು ಹೀರೋ?

ಮೊದಲು ಹೀರೋ ಆಗಿದ್ದ ಜಗಪತಿ ಬಾಬು 2014ರಲ್ಲಿ ತೆರೆಕಂಡ ‘ಲೆಜೆಂಡ್​’ ಸಿನಿಮಾದಲ್ಲಿ ವಿಲನ್​ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಪಾತ್ರ ಸಾಕಷ್ಟು ಮೆಚ್ಚುಗೆ ಗಳಿಸಿಕೊಂಡಿತು. ಆ ನಂತರ ಅವರು ಹಿಂದಿರುಗಿ ನೋಡಿದ್ದೇ ಇಲ್ಲ.

ಬಾಲಿವುಡ್​ಗೆ ವಿಲನ್​ ಆಗಿ ಎಂಟ್ರಿ ಕೊಡೋಕೆ ರೆಡಿ ಆದ ಜಗಪತಿ ಬಾಬು; ಯಾರು ಹೀರೋ?
TV9 Web
| Edited By: |

Updated on: Oct 21, 2021 | 3:47 PM

Share

ಜಗಪತಿ ಬಾಬು ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದರೆ ಆ ಸಿನಿಮಾಗೆ ಮೈಲೇಜ್​ ಸಿಗೋದರಲ್ಲಿ ಅನುಮಾನವೇ ಬೇಡ. ಅವರಿಗೆ ಸಿಗುವ ಪಾತ್ರ ಎಷ್ಟೇ ಖಡಕ್​ ಆಗಿರಲಿ ಅದನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ವೀಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಾರೆ. ಅಷ್ಟೇ ಅಲ್ಲ, ಹೀರೋಗೆ ಸರಿಸಾಟಿಯಾಗಿ ವಿಲನ್​ ರೋಲ್​ ನಿರ್ವಹಿಸುತ್ತಾರೆ. ಅವರ ವಿಲನ್​ ಮ್ಯಾನರಿಸಂ ಎಲ್ಲರಿಗೂ ಇಷ್ಟವಾಗುತ್ತದೆ. ಈಗ ಅವರು ಬಾಲಿವುಡ್​ಗೂ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ.

ಮೊದಲು ಹೀರೋ ಆಗಿದ್ದ ಜಗಪತಿ ಬಾಬು 2014ರಲ್ಲಿ ತೆರೆಕಂಡ ‘ಲೆಜೆಂಡ್​’ ಸಿನಿಮಾದಲ್ಲಿ ವಿಲನ್​ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಪಾತ್ರ ಸಾಕಷ್ಟು ಮೆಚ್ಚುಗೆ ಗಳಿಸಿಕೊಂಡಿತು. ಆ ನಂತರ ಅವರು ಹಿಂದಿರುಗಿ ನೋಡಿದ್ದೇ ಇಲ್ಲ. ಅಲ್ಲಿಂದ ಇಲ್ಲಿವರೆಗೆ ಸಾಕಷ್ಟು ಸ್ಟಾರ್​ ಸಿನಿಮಾಗಳಿಗೆ ಅವರು ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಪೈಕಿ ಹಲವು ಸಿನಿಮಾಗಳು ಹಿಟ್​ ಆಗಿವೆ. ತೆಲುಗು ಮಾತ್ರವಲ್ಲದೆ, ತಮಿಳು ಹಾಗೂ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ ಅವರು. ಈಗ ಜಗಪತಿ ಬಾಬು ಬಾಲಿವುಡ್​ಗೆ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ಹಾಗಾದರೆ, ಯಾವುದು ಆ ಸಿನಿಮಾ? ಅದಕ್ಕೆ ಹೀರೋ ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಪುಕಾರ್​’ ಸಿನಿಮಾದಲ್ಲಿ ಜಗಪತಿ ಬಾಬು ವಿಲನ್​ ಪಾತ್ರ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಚಿತ್ರತಂಡ ಅವರನ್ನು ಸಂಪರ್ಕಿಸಿದ್ದು, ಕಥೆ ಇಷ್ಟಪಟ್ಟಿದ್ದಾರೆ. ಅಲ್ಲದೆ, ಸಿನಿಮಾ ಮಾಡೋಕೂ ಓಕೆ ಎಂದಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

‘ಲಗಾನ್​’ ಖ್ಯಾತಿಯ ಅಶುತೋಷ್​ ಗೋವಾರಿಕರ್​ ಅವರು ‘ಪುಕಾರ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಫರ್ಹಾನ್​ ಅಖ್ತರ್​ ನಾಯಕ. ಈ ಚಿತ್ರಕ್ಕೆ ಜಗಪತಿ ಬಾಬು ವಿಲನ್​. ಫರ್ಹಾನ್​ ತಂದೆ ಜಾವೇದ್​ ಅಖ್ತರ್​ ಈ ಸಿನಿಮಾಗೆ ಚಿತ್ರಕಥೆ ಬರೆಯುತ್ತಿದ್ದಾರೆ. ರಾಕುಲ್ ಪ್ರೀತ್​ ಸಿಂಗ್​​ ಚಿತ್ರದ ನಾಯಕಿ. ಫಾರೆಸ್ಟ್​ ರೇಂಜರ್​ ಆಗಿ ಫರ್ಹಾನ್​ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Kabzaa: ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಬಜೆಟ್ ಎಷ್ಟು?; ನಿರ್ದೇಶಕ ಆರ್.ಚಂದ್ರು ಹಂಚಿಕೊಂಡ್ರು ಮಾಹಿತಿ

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್