AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ದಾಖಲೆ ಬರೆದ ‘ಜೈ ಭೀಮ್’​; ಹಾಲಿವುಡ್​ ಚಿತ್ರವನ್ನೂ ಹಿಂದಿಕ್ಕಿದ ಸೂರ್ಯ ನಟನೆಯ ಸಿನಿಮಾ

ಇತ್ತೀಚೆಗೆ ‘ಜೈ ಭೀಮ್​’ ಸಿನಿಮಾ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದಾರೆ.

ಹೊಸ ದಾಖಲೆ ಬರೆದ ‘ಜೈ ಭೀಮ್’​; ಹಾಲಿವುಡ್​ ಚಿತ್ರವನ್ನೂ ಹಿಂದಿಕ್ಕಿದ ಸೂರ್ಯ ನಟನೆಯ ಸಿನಿಮಾ
‘ಜೈ ಭೀಮ್​’
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 18, 2021 | 8:45 PM

ಸೂರ್ಯ (Suriya) ನಟನೆಯ ‘ಜೈ ಭೀಮ್​’ (Jai Bhim) ಚಿತ್ರ ಒಂದಾದ ಮೇಲೆ ಒಂದರಂತೆ ವಿವಾದ ಸೃಷ್ಟಿ ಮಾಡುತ್ತಲೇ ಇದೆ. ಸಿನಿಮಾ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದ್ದಿದ್ದಾರೆ. ಇನ್ನೂ ಕೆಲವರು ಸಿನಿಮಾ ಬ್ಯಾನ್​ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಮಧ್ಯೆ ನಟ ಸೂರ್ಯಗೆ ಪ್ರಾಣ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅವರ ಮನೆಗೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಈ ಎಲ್ಲಾ ಬೆಳವಣಿಗೆ ಮಧ್ಯೆ ಚಿತ್ರತಂಡ ಹೊಸ ದಾಖಲೆ ಒಂದನ್ನು ಬರೆದಿದೆ. ಈ ವಿಚಾರ ಚಿತ್ರತಂಡ ಹಾಗೂ ಸೂರ್ಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಹಾಗಾದರೆ ‘ಜೈ ಭೀಮ್’​ ಮಾಡಿದ ದಾಖಲೆ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇತ್ತೀಚೆಗೆ ‘ಜೈ ಭೀಮ್​’ ಸಿನಿಮಾ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದಾರೆ. ಈಗ ಈ ಚಿತ್ರ ಐಎಂಡಿಬಿ ರೇಟಿಂಗ್​ನಲ್ಲಿ ದಾಖಲೆ ಬರೆದಿದೆ. ಈ ಸಿನಿಮಾಗೆ ಐಎಂಡಿಬಿಯಲ್ಲಿ 10ಕ್ಕೆ 9.6 ಅಂಕ ನೀಡಲಾಗಿದೆ. ಈ ಮೂಲಕ ಸಿನಿಮಾ ಹಾಲಿವುಡ್​ನ ನ ‘ದಿ ಗಾಡ್​ ಫಾದರ್’, ‘ದಿ ಗಾಡ್​ ಫಾದರ್​: ಪಾರ್ಟ್​ II’ ಹಾಗೂ ‘ದಿ ಡಾರ್ಕ್​ ನೈಟ್​’ನಂಥ ಚಿತ್ರಗಳನ್ನು ಹಿಂದಿಕ್ಕಿದೆ. ‘ದಿ ಗಾಡ್​ ಫಾದರ್​’ 9.2 ರೇಟಿಂಗ್​,  ‘ದಿ ಗಾಡ್​ ಫಾದರ್​: ಪಾರ್ಟ್​ II’ 9.0 ರೇಟಿಂಗ್​ ಪಡೆದುಕೊಂಡಿದೆ.

ಇತ್ತೀಚೆಗೆ ಜೈ ಭೀಮ್​ ಸಿನಿಮಾ ವಿವಾದ ಹುಟ್ಟು ಹಾಕಿತ್ತು. ವನ್ನಿಯಾರ್ ಸಮುದಾಯದ ಅಧ್ಯಕ್ಷ ಪು ಥಾ ಅರುಳ್ಮೋಳಿ ಅವರು ಸಿನಿಮಾದಲ್ಲಿ ಬರುವ ಕೆಲ ದೃಶ್ಯಗಳಿಗೆ ವಿರೋಧ ವ್ಯಕ್ತಪಡಿಸಿದ್ದರು. ಈ ದೃಶ್ಯಗಳು ವನ್ನಿಯಾರ್ ಸಮುದಾಯಕ್ಕೆ ಅವಮಾನ ಮಾಡುವ ರೀತಿಯಲ್ಲಿದೆ. ಈ ಕಾರಣಕ್ಕೆ ಅವುಗಳನ್ನು ತೆಗೆದು ಹಾಕಬೇಕು ಎಂದು ನೋಟಿಸ್ ನೀಡಲಾಗಿದೆ. ಸಿನಿಮಾದಲ್ಲಿ ಬರುವ ಕ್ಯಾಲೆಂಡರ್​ ಒಂದರಲ್ಲಿ ಅಗ್ನಿ ಕುಂಡದ ಫೋಟೋ ಇದೆ. ಅಗ್ನಿ ಕುಂಡವು ವನ್ನಿಯಾರ್ ಸಮುದಾಯದ ಚಿಹ್ನೆ. ದುರುದ್ದೇಶ ಪೂರ್ವಕವಾಗಿ ಅಲ್ಲಿ ಅಗ್ನಿ ಕುಂಡದ ಚಿತ್ರವನ್ನು ಇರಿಸಲಾಗಿದೆ. ಸಿನಿಮಾದಲ್ಲಿ ಬರುವ ಸಬ್​ ಇನ್​ಸ್ಪೆಕ್ಟರ್​ಗೆ ಗುರುಮೂರ್ತಿ ಎಂದು ಹೆಸರು ಇಡಲಾಗಿದೆ. ಈ ಸಬ್​-ಇನ್​ಸ್ಪೆಕ್ಟರ್​ ಸಿನಿಮಾದ ಪ್ರಮುಖ ಖಳ. ಗುರುಮೂರ್ತಿ ಎಂಬುದು ಪಿಎಂಕೆಯ ಪ್ರಮುಖ ನಾಯಕ ಕಾಡುವೆಟ್ಟಿ ಜೆ ಗುರುವನ್ನು ಪ್ರತಿನಿಧಿಸುತ್ತದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ‘ಜೈ ಭೀಮ್​’ ಟೀಸರ್​ನಲ್ಲಿ ದಲಿತರ ಪರ ಧ್ವನಿ ಎತ್ತಿದ ಸೂರ್ಯ; ಸಿನಿಪ್ರಿಯರಿಂದ ಸಖತ್​ ರೆಸ್ಪಾನ್ಸ್​

ಕಪಾಳಮೋಕ್ಷ ಕಾಂಟ್ರವರ್ಸಿ: ಟೀಕೆ ಮಾಡಿದವರಿಗೆ ‘ಜೈ ಭೀಮ್​’ ನಟ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?