AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ದಾಖಲೆ ಬರೆದ ‘ಜೈ ಭೀಮ್’​; ಹಾಲಿವುಡ್​ ಚಿತ್ರವನ್ನೂ ಹಿಂದಿಕ್ಕಿದ ಸೂರ್ಯ ನಟನೆಯ ಸಿನಿಮಾ

ಇತ್ತೀಚೆಗೆ ‘ಜೈ ಭೀಮ್​’ ಸಿನಿಮಾ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದಾರೆ.

ಹೊಸ ದಾಖಲೆ ಬರೆದ ‘ಜೈ ಭೀಮ್’​; ಹಾಲಿವುಡ್​ ಚಿತ್ರವನ್ನೂ ಹಿಂದಿಕ್ಕಿದ ಸೂರ್ಯ ನಟನೆಯ ಸಿನಿಮಾ
‘ಜೈ ಭೀಮ್​’
TV9 Web
| Edited By: |

Updated on: Nov 18, 2021 | 8:45 PM

Share

ಸೂರ್ಯ (Suriya) ನಟನೆಯ ‘ಜೈ ಭೀಮ್​’ (Jai Bhim) ಚಿತ್ರ ಒಂದಾದ ಮೇಲೆ ಒಂದರಂತೆ ವಿವಾದ ಸೃಷ್ಟಿ ಮಾಡುತ್ತಲೇ ಇದೆ. ಸಿನಿಮಾ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದ್ದಿದ್ದಾರೆ. ಇನ್ನೂ ಕೆಲವರು ಸಿನಿಮಾ ಬ್ಯಾನ್​ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಮಧ್ಯೆ ನಟ ಸೂರ್ಯಗೆ ಪ್ರಾಣ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅವರ ಮನೆಗೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಈ ಎಲ್ಲಾ ಬೆಳವಣಿಗೆ ಮಧ್ಯೆ ಚಿತ್ರತಂಡ ಹೊಸ ದಾಖಲೆ ಒಂದನ್ನು ಬರೆದಿದೆ. ಈ ವಿಚಾರ ಚಿತ್ರತಂಡ ಹಾಗೂ ಸೂರ್ಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಹಾಗಾದರೆ ‘ಜೈ ಭೀಮ್’​ ಮಾಡಿದ ದಾಖಲೆ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇತ್ತೀಚೆಗೆ ‘ಜೈ ಭೀಮ್​’ ಸಿನಿಮಾ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದಾರೆ. ಈಗ ಈ ಚಿತ್ರ ಐಎಂಡಿಬಿ ರೇಟಿಂಗ್​ನಲ್ಲಿ ದಾಖಲೆ ಬರೆದಿದೆ. ಈ ಸಿನಿಮಾಗೆ ಐಎಂಡಿಬಿಯಲ್ಲಿ 10ಕ್ಕೆ 9.6 ಅಂಕ ನೀಡಲಾಗಿದೆ. ಈ ಮೂಲಕ ಸಿನಿಮಾ ಹಾಲಿವುಡ್​ನ ನ ‘ದಿ ಗಾಡ್​ ಫಾದರ್’, ‘ದಿ ಗಾಡ್​ ಫಾದರ್​: ಪಾರ್ಟ್​ II’ ಹಾಗೂ ‘ದಿ ಡಾರ್ಕ್​ ನೈಟ್​’ನಂಥ ಚಿತ್ರಗಳನ್ನು ಹಿಂದಿಕ್ಕಿದೆ. ‘ದಿ ಗಾಡ್​ ಫಾದರ್​’ 9.2 ರೇಟಿಂಗ್​,  ‘ದಿ ಗಾಡ್​ ಫಾದರ್​: ಪಾರ್ಟ್​ II’ 9.0 ರೇಟಿಂಗ್​ ಪಡೆದುಕೊಂಡಿದೆ.

ಇತ್ತೀಚೆಗೆ ಜೈ ಭೀಮ್​ ಸಿನಿಮಾ ವಿವಾದ ಹುಟ್ಟು ಹಾಕಿತ್ತು. ವನ್ನಿಯಾರ್ ಸಮುದಾಯದ ಅಧ್ಯಕ್ಷ ಪು ಥಾ ಅರುಳ್ಮೋಳಿ ಅವರು ಸಿನಿಮಾದಲ್ಲಿ ಬರುವ ಕೆಲ ದೃಶ್ಯಗಳಿಗೆ ವಿರೋಧ ವ್ಯಕ್ತಪಡಿಸಿದ್ದರು. ಈ ದೃಶ್ಯಗಳು ವನ್ನಿಯಾರ್ ಸಮುದಾಯಕ್ಕೆ ಅವಮಾನ ಮಾಡುವ ರೀತಿಯಲ್ಲಿದೆ. ಈ ಕಾರಣಕ್ಕೆ ಅವುಗಳನ್ನು ತೆಗೆದು ಹಾಕಬೇಕು ಎಂದು ನೋಟಿಸ್ ನೀಡಲಾಗಿದೆ. ಸಿನಿಮಾದಲ್ಲಿ ಬರುವ ಕ್ಯಾಲೆಂಡರ್​ ಒಂದರಲ್ಲಿ ಅಗ್ನಿ ಕುಂಡದ ಫೋಟೋ ಇದೆ. ಅಗ್ನಿ ಕುಂಡವು ವನ್ನಿಯಾರ್ ಸಮುದಾಯದ ಚಿಹ್ನೆ. ದುರುದ್ದೇಶ ಪೂರ್ವಕವಾಗಿ ಅಲ್ಲಿ ಅಗ್ನಿ ಕುಂಡದ ಚಿತ್ರವನ್ನು ಇರಿಸಲಾಗಿದೆ. ಸಿನಿಮಾದಲ್ಲಿ ಬರುವ ಸಬ್​ ಇನ್​ಸ್ಪೆಕ್ಟರ್​ಗೆ ಗುರುಮೂರ್ತಿ ಎಂದು ಹೆಸರು ಇಡಲಾಗಿದೆ. ಈ ಸಬ್​-ಇನ್​ಸ್ಪೆಕ್ಟರ್​ ಸಿನಿಮಾದ ಪ್ರಮುಖ ಖಳ. ಗುರುಮೂರ್ತಿ ಎಂಬುದು ಪಿಎಂಕೆಯ ಪ್ರಮುಖ ನಾಯಕ ಕಾಡುವೆಟ್ಟಿ ಜೆ ಗುರುವನ್ನು ಪ್ರತಿನಿಧಿಸುತ್ತದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ‘ಜೈ ಭೀಮ್​’ ಟೀಸರ್​ನಲ್ಲಿ ದಲಿತರ ಪರ ಧ್ವನಿ ಎತ್ತಿದ ಸೂರ್ಯ; ಸಿನಿಪ್ರಿಯರಿಂದ ಸಖತ್​ ರೆಸ್ಪಾನ್ಸ್​

ಕಪಾಳಮೋಕ್ಷ ಕಾಂಟ್ರವರ್ಸಿ: ಟೀಕೆ ಮಾಡಿದವರಿಗೆ ‘ಜೈ ಭೀಮ್​’ ನಟ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ